AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್

ಬೆಸ್ಕಾಂ ವಿದ್ಯುತ್ ಕಡಿತ ವಿವರ: ನಿರ್ವಹಣೆ ಮತ್ತು ಇತರ ಕಾಮಗಾರಿಗಳ ಕಾರಣ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ ವಿದ್ಯುತ್ ಕಡಿತ ಇರಲಿದೆ. ಎಲ್ಲೆಲ್ಲ ಪವರ್ ಕಟ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್
ಸಾಂದರ್ಭಿಕ ಚಿತ್ರImage Credit source: TV9 Network
Ganapathi Sharma
|

Updated on: Feb 10, 2026 | 1:58 PM

Share

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.

ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಬೇಡರಡ್ಡಿ-ಹಳ್ಳಿ, ತಿಮ್ಮಪ್ಪಯನಹಳ್ಳಿ, ಎನ್.ದೇವರಹಳ್ಳಿ, ತಳಕು, ಮೊನ್ನೆಕೋಟೆ, ದೇವರೆಡ್ಡಿಹಳ್ಳಿ, ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೂ ನಿರಂತರ ಜ್ಯೋತಿ, ಕೃಷಿ ಬಳಕೆಯ ವಿದ್ಯುತ್‌ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ರೈತರು, ಸಾರ್ವಜನಿಕರು ಸಹಕರಿಸಬೇಕೆಂದು ಎಇಇ ಎನ್​​ಜಿ ಮಮತಾ ಹಾಗೂ ಎಂಜಿನಿಯರ್ ವೆಂಕಟೇಶ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಫೆಬ್ರವರಿ 12ಕ್ಕೆ ತುಮಕೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್

ತುಮಕೂರಿನಲ್ಲಿ ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಕೈಗೊಂಡಿರುವುದರಿಂದ ಫೆ.12ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ 66/11 ಕೆವಿ ಅಂಕಸಂದ್ರ ಉಪಸ್ಥಾವರದಿಂದ ವಿದ್ಯುತ್‌ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್

ಕೆಪಿಟಿಸಿಎಲ್ ವತಿಯಿಂದ ಜಾಲಹಳ್ಳಿ ವಿಭಾಗದ 66/11 ಕೆವಿ ಎಂಇಐ ಉಪಕೇಂದ್ರದಲ್ಲಿ ತುರ್ತು ನಿರ್ವ ಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣ ಈ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಟ್ರೇಡಿಂಗ್ ಅಡಿಕ್ಷನ್: ಡ್ರಗ್ಸ್ ಅಡಿಕ್ಷನ್​ನಂತೆಯೇ ಸಿಟಿ ಜನರಿಗೆ ಈಗ ಟ್ರೇಡಿಂಗ್ ಖಯಾಲಿ

ಎಜಿಬಿಜಿ-ಲೇಔಟ್, ಭೈರವೇಶ್ವರ ಹೋಟೆಲ್, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರ್ ಲೇಔಟ್, ಗಣೇಶ ಸಾ ಮಿಲ್, ಕೆಂಪೇಗೌಡ ನಗರ, ಬೃಂದಾವನ ಲೇಔಟ್, ಕಲ್ಯಾಣನಗರ ಬಾಗಲಗುಂಟೆ, ಸೌರ ಲೇಔಟ್, ಮೀನಾಕ್ಷಿ ಲೇಔಟ್ ಸೇರಿದಂತೆ ಹಲವು ಕಡೆಗಳಲ್ಲಿ ಪವರ್ ಕಟ್ ಆಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ
ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!