AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಜುಲೈ 17ರವರೆಗೆ ಕರೆಂಟ್ ಇರೋದಿಲ್ಲ

Power Cut in Bangalore: ಸಿಲಿಕಾನ್ ಸಿಟಿಯ ಈ ಏರಿಯಾಗಳಲ್ಲಿ ಇಂದಿನಿಂದ ಶನಿವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

Bengaluru News: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಜುಲೈ 17ರವರೆಗೆ ಕರೆಂಟ್ ಇರೋದಿಲ್ಲ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 13, 2021 | 1:35 PM

Share

ಬೆಂಗಳೂರು: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇನ್ನು ಐದು ದಿನಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಆದೇಶ ಹೊರಡಿಸಿದೆ. ಇಂದಿನಿಂದ ಜುಲೈ 17ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ. ಆ ಪಟ್ಟಿಯಲ್ಲಿ ನಿಮ್ಮ ಏರಿಯಾ ಕೂಡ ಇರಬಹುದು. ಪೂರ್ತಿ ಮಾಹಿತಿಗೆ ಮುಂದೆ ಓದಿ…

ಸಿಲಿಕಾನ್ ಸಿಟಿಯ ಕೆಲವು ಏರಿಯಾಗಳಲ್ಲಿ ಇಂದಿನಿಂದ ಶನಿವಾರದವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.​ ನಂಜಪ್ಪ ಲೇಔಟ್​, ವಿನಾಯಕ ನಗರ, ಚಂದ್ರಪ್ಪ ಲೇಔಟ್, ಎಲೆಕ್ಟ್ರಾನಿಕ್​ ಸಿಟಿ, ಎಚ್​ಎಸ್​ಆರ್​ ಲೇಔಟ್​, ವಿಲ್ಸನ್ ಗಾರ್ಡನ್ ಸೇರಿದಂತೆ ಬಹುತೇಕ ಕಡೆ ಪವರ್ ಕಟ್ ಇರಲಿದೆ. ಬೆಸ್ಕಾಂನ ಜಯನಗರ ಉಪವಿಭಾಗದಲ್ಲಿ ವಿದ್ಯುತ್ ಕಾಮಗಾರಿ ನಡೆಯುತ್ತಿರುವುದರಿಂದ ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ.

ಹಳ್ಳಿಗಳಲ್ಲಾದರೂ ಒಂದೆರಡು ದಿನ ಕರೆಂಟ್ ಇಲ್ಲವೆಂದರೆ ಹೇಗಾದರೂ ನಿಭಾಯಿಸಬಹುದು. ಆದರೆ, ಬೆಂಗಳೂರಿನಲ್ಲಿ ಒಂದು ಗಂಟೆ ಕರೆಂಟ್ ಇಲ್ಲದಿದ್ದರೂ ಸಾಕಷ್ಟು ಸಮಸ್ಯೆ ಎದುರಾಗುತ್ತದೆ. ಕಾರ್ಖಾನೆ, ಕಂಪನಿ ಮಾತ್ರವಲ್ಲದೆ ಮನೆಯೊಳಗೂ ವಿದ್ಯುತ್ ವ್ಯತ್ಯಯದಿಂದ ಕಂಗಾಲಾಗುವ ಪರಿಸ್ಥಿತಿ ಉಂಟಾಗುತ್ತದೆ. ಕಚೇರಿಗಳಲ್ಲಾದರೆ ಜನರೇಟರ್, ಪವರ್ ಬ್ಯಾಕಪ್ ವ್ಯವಸ್ಥೆ ಇರುವುದರಿಂದ ತೊಂದರೆಯಾಗುವುದಿಲ್ಲ. ಆದರೆ, ಈಗ ಬಹುತೇಕ ಎಲ್ಲ ಕಂಪನಿಗಳ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ (Work from Home) ಆಯ್ಕೆ ಕೊಟ್ಟಿರುವುದರಿಂದ ಕರೆಂಟ್ ಇಲ್ಲದಿದ್ದರೆ ಏನೆಂಬ ಚಿಂತೆ ಎದುರಾಗುವುದು ಸಹಜ.

ಇಂದು ಮತ್ತು ನಾಳೆ ಬೆಂಗಳೂರಿನ ನಂಜಪ್ಪ ಲೇಔಟ್, ವಿನಾಯಕನಗರ, ಚಂದ್ರಪ್ಪ ಲೇಔಟ್, ವಿಲ್ಸನ್ ಗಾರ್ಡನ್, ಮಡಿವಾಳ, ಬಂಡೆ ಪಾರ್ಕ್, ಕೃಷ್ಣ ಲೇಔಟ್, ಬೇಗೂರು-ಕೊಪ್ಪ ರಸ್ತೆ, ಎಲ್‌ಆಂಡ್ ಟಿ ಸೌತ್ ಸಿಟಿ, ಎಲೆಕ್ಟ್ರಾನಿಕ್ಸ್ ಸಿಟಿ, ಎಚ್‌ಎಸ್‌ಆರ್ ಲೇಔಟ್, ಎಚ್‌ಎಸ್‌ಆರ್ ಲೇಔಟ್ 19ನೇ ಮುಖ್ಯರಸ್ತೆ, ಮೈಲಸಂದ್ರದಲ್ಲಿ ಪವರ್ ಕಟ್ ಇರಲಿದೆ.

ಜುಲೈ 15ರಿಂದ ಜುಲೈ 17ರವರೆಗೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ, ಕೋರಮಂಗಲ 8ನೇ ಬ್ಲಾಕ್, ಸೇಂಟ್ ಜಾನ್ಸ್ ಆಸ್ಪತ್ರೆ, ಬಿಗ್ ಬಜಾರ್, ಆಕ್ಸೆಂಚರ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಎಚ್‌ಎಸ್ ಆರ್ ಲೇಔಟ್ 5ನೇ ಮುಖ್ಯರಸ್ತೆ, ಮೈಕೋ ಲೇಔಟ್ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಇದನ್ನೂ ಓದಿ: Aam Admi Party: ದಿನವಿಡೀ ಕರೆಂಟ್, 300 ಯುನಿಟ್ ವಿದ್ಯುತ್ ಉಚಿತ; ಉತ್ತರಾಖಂಡದಲ್ಲಿ ಆಮ್ ಆದ್ಮಿಯನ್ನು ಗೆಲ್ಲಿಸಲು ಬಿಗ್ ಆಫರ್

ಇದನ್ನೂ ಓದಿ: ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

( BESCOM says this Areas of Bengaluru will Face Power Cut till July 17)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ