AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮೂರನೇ ಅತ್ಯುತ್ತಮ ಮೃಗಾಲಯವಾಗಿ ಹೊರಹೊಮ್ಮಿದ ಮೈಸೂರು ಮೃಗಾಲಯ

ದೇಶದ ಮೂರನೇ ಅತ್ಯುತ್ತಮ ಮೃಗಾಲಯವಾಗಿ ಮೈಸೂರು ಮೃಗಾಲಯ ಹೊರಹೊಮ್ಮಿದೆ. ಮೊದಲ ಸ್ಥಾನವನ್ನು ಡಾರ್ಜಿಲಿಂಗ್​ನ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್ ಹಾಗೂ 2ನೇ ಸ್ಥಾನವನ್ನು ಚೆನ್ನೈನಲ್ಲಿರುವ ಅರಿಗ್ನಾರ್ ಅಣ್ಣಾ ಝೂಲಾಜಿಕಲ್ ಪಾರ್ಕ್ ಪಡೆದುಕೊಂಡಿದೆ.

ದೇಶದ ಮೂರನೇ ಅತ್ಯುತ್ತಮ ಮೃಗಾಲಯವಾಗಿ ಹೊರಹೊಮ್ಮಿದ ಮೈಸೂರು ಮೃಗಾಲಯ
ದೇಶದ ಮೂರನೇ ಅತ್ಯುತ್ತಮ ಮೃಗಾಲಯವಾಗಿ ಹೊರಹೊಮ್ಮಿದ ಮೈಸೂರು ಮೃಗಾಲಯ (ಸಾಂದರ್ಭಿಕ ಚಿತ್ರ)
TV9 Web
| Updated By: Rakesh Nayak Manchi|

Updated on:Sep 15, 2022 | 6:41 PM

Share

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯವು ದೇಶದ ಮೂರನೇ ಅತ್ಯುತ್ತಮ ಮೃಗಾಲಯವಾಗಿ ಹೊರಹೊಮ್ಮಿದೆ. ಸೆಪ್ಟೆಂಬರ್ 10 ರಂದು ಭುವನೇಶ್ವರದಲ್ಲಿ ಮೃಗಾಲಯದ ನಿರ್ದೇಶಕರ ಸಮಾವೇಶ ನಡೆದಿತ್ತು. ಅದರಂತೆ ದೇಶದ ವಿವಿಧ ಮೃಗಾಯಲಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿಕೊಂಡು ಅತ್ಯುತ್ತಮ ಮೃಗಾಲಯಗಳ ಪಟ್ಟಿಯನ್ನು ತಯಾರಿಸಲಾಗಿತ್ತು. ಸದ್ಯ ಕೇಂದ್ರ ಮೃಗಾಲಯ ಪ್ರಾಧಿಕಾರವು ಈ ಪಟ್ಟಿ ಬಿಡುಗಡೆ ಮಾಡಿದೆ.

ಕೇಂದ್ರ ಮೃಗಾಲಯ ಪ್ರಾಧಿಕಾರವು ಘೋಷಣೆ ಮಾಡಿದಂತೆ ಮೈಸೂರು ಮೃಗಾಯಲವು ದೇಶದ ಮೂರನೇ ಅತ್ಯುತ್ತಮ ಮೃಗಾಲಯವಾಗಿ ಹೊರಹೊಮ್ಮಿದೆ. ಇನ್ನು ಡಾರ್ಜಿಲಿಂಗ್‌ನಲ್ಲಿರುವ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್ (PNHZP) ದೇಶದ ಅತ್ಯುತ್ತಮ ಮೃಗಾಲಯವೆಂದು ಗುರುತಿಸುವ ಮೂಲಕ ಮೊದಲ ಸ್ಥಾನ ಪಡೆದಿದೆ. ಚೆನ್ನೈನಲ್ಲಿರುವ ಅರಿಗ್ನಾರ್ ಅಣ್ಣಾ ಝೂಲಾಜಿಕಲ್ ಪಾರ್ಕ್ ಎರಡನೇ ಸ್ಥಾನ ಪಡೆದಿದೆ. ಕೋಲ್ಕತ್ತಾದ ಅಲಿಪೋರ್ ಝೂಲಾಜಿಕಲ್ ಗಾರ್ಡನ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಮೃಗಾಲಯವಾಗಿರುವ ಮೈಸೂರು ಮೃಗಾಲಯ, 157 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಇದನ್ನು 1892 ರಲ್ಲಿ ಆರಂಭಿಸಲಾಯಿತು. ಇದು ಮೈಸೂರು ಅರಮನೆಯಿಂದ ಕೆಲವೇ ಕಿಲೋ ಮೀಟರ್ ದೂರದಲ್ಲಿದ್ದು, 1909 ರಲ್ಲಿ ಚಾಮರಾಜೇಂದ್ರ ಝೂಲಾಜಿಕಲ್ ಗಾರ್ಡನ್ಸ್ ಎಂದು ಮರುನಾಮಕರಣ ಮಾಡಲಾಯಿತು. ಪ್ರಸ್ತುತ ಸುಮಾರು 1,300 ಪ್ರಾಣಿಗಳನ್ನು ಮೃಗಾಲಯದಲ್ಲಿ ಕಾಣಬಹುದು.

ಕೇಂದ್ರ ಮೃಗಾಲಯ ಪ್ರಾಧಿಕಾರವು ನಿರ್ವಹಣೆ ಮತ್ತು ಪರಿಣಾಮಕಾರಿತ್ವದಂತಹ ವಿವಿಧ ನಿಯತಾಂಕಗಳ ಆಧಾರದ ಮೇಲೆ ಎಲ್ಲಾ ಮೃಗಾಲಯಗಳ ಮೌಲ್ಯಮಾಪನವನ್ನು ನಡೆಸಿತು ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅಂಕಗಳನ್ನು ನೀಡಲಾಗಿದೆ. ಇದರಲ್ಲಿ ಮೊದಲ ಸ್ಥಾನ ಪಡೆದಿರುವ ಡಾರ್ಜಿಲಿಂಗ್‌ನಲ್ಲಿರುವ ಮೃಗಾಲಯಕ್ಕೆ 83 ಅಂಕ ನೀಡಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Thu, 15 September 22

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?