AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ! ಬೆಂಗಳೂರು- ಮೈಸೂರು ಹೈವೇಯಲ್ಲಿ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ

ಬೆಂಗಳೂರು-ಮೈಸೂರು ಎಕ್ಸ್​​ಪ್ರೇಸ್ ವೇ ಅಲ್ಲಿ ಹಗಲು ರಾತ್ರಿ ನಮ್ಮ ಶಕ್ತಿಶಾಲಿ ಕ್ಯಾಮೆರಾಗಳು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಡಿಜಿಪಿ ಅಲೋಕ್​​ ಕುಮಾರ್ ಎಂದು​ ಹೇಳಿದ್ದಾರೆ. ಜೊತೆಗೆ ದಯವಿಟ್ಟು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸದಂತೆ ಮನವಿ ಮಾಡಿದ್ದಾರೆ.

ಎಚ್ಚರ! ಬೆಂಗಳೂರು- ಮೈಸೂರು ಹೈವೇಯಲ್ಲಿ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ
ಎಚ್ಚರ...ಬೆಂಗಳೂರು- ಮೈಸೂರು ಹೈವೇಯಲ್ಲಿ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ
ಗಂಗಾಧರ​ ಬ. ಸಾಬೋಜಿ
|

Updated on: May 17, 2024 | 4:57 PM

Share

ಬೆಂಗಳೂರು, ಮೇ 17: ಕೋಟ್ಯಾಂತರ ರೂ ವೆಚ್ಚದಲ್ಲಿ ನೂತನ ಬೆಂಗಳೂರು-ಮೈಸೂರು ಎಕ್ಸ್​​ಪ್ರೇಸ್ ವೇ (Bengaluru Mysuru Expressway) ನಿರ್ಮಾಣ ಮಾಡಲಾಗಿದೆ. ಜೊತೆಗೆ ಅತ್ಯಾಧುನಿಕ ಎಐ ತಂತ್ರಜ್ಞಾನ ಆಧಾರಿತ ಕ್ಯಾಮರಾಗಳು ಅಳವಡಿಸಲಾಗಿದೆ. ಯಾವುದೇ ರೀತಿಯ ಸಂಚಾರಿ ನಿಯಮಗಳನ್ನು ಉಂಘಿಸಿದ್ದೇ ಆದಲ್ಲಿ ಫೋಟೋ ಸಹಿತ ದಂಡದ ನೋಟಿಸ್​ ನೀಡಲಾಗುತ್ತದೆ. ಇದೀಗ ಅಂತಹದ್ದೇ ಸಂಚಾರಿ ನಿಯಮಗಳನ್ನು ಉಂಘಿಸಿರುವ ಕೆಲ ವಾನಗಳ ಫೋಟೋಗಳನ್ನು ಹಂಚಿಕೊಂಡಿರುವ ಎಡಿಜಿಪಿ ಅಲೋಕ್​​ ಕುಮಾರ್​ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಹಗಲು ರಾತ್ರಿ ನಮ್ಮ ಶಕ್ತಿಶಾಲಿ ಕ್ಯಾಮೆರಾಗಳು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು​ ಹೇಳಿದ್ದಾರೆ.

ದಯವಿಟ್ಟು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸದಂತೆ ಮನವಿ ಮಾಡಿದ್ದಾರೆ. ಸಂಚಾರಿ ನಿಯಮಗಳನ್ನು ನಿರ್ಲಕ್ಷಿಸಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕೆಎಸ್​​ಆರ್​ಟಿಸಿ ಇಲಾಖೆಗೂ ಎಡಿಜಿಪಿ ಅಲೋಕ್​​ ಕುಮಾರ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ಕರ್ನಾಟಕ ರಾಜ್ಯ ಪೊಲೀಸ್​ ಕೂಡ ಟ್ವೀಟ್​ ಮಾಡಿದ್ದು, ಬೆಂಗಳೂರು- ಮೈಸೂರು ಹೈವೇನಲ್ಲಿ ನಮ್ಮ ಪೊಲೀಸ್ ಕ್ಯಾಮೆರಾಗಳು ತಮ್ಮ ಕೆಲಸ ಮಾಡುತ್ತಿವೆ. ಕೇವಲ 15 ದಿನದಲ್ಲಿ 12192 ಸಂಚಾರ ನಿಯಮ ಉಲ್ಲಂಘನೆಗಳನ್ನು ಸೆರೆ ಹಿಡಿದಿವೆ ಎಂದು ಮಾಹಿತಿ ನೀಡಿದೆ.

ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತವಾದರೆ ಅದನ್ನು ಕುಟುಂಬದವರು ಸಹಿಸಿಕೊಳ್ಳಲು ಸಾಧ್ಯವೇ ಒಮ್ಮೆ ಯೋಚಿಸಿ. ಯಾವಾಗಲೂ ಸಂಚಾರ ನಿಯಮ ಪಾಲಿಸಿ, ಸುರಕ್ಷಿತವಾಗಿ ಚಲಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್​ ಕೂಡ ನೀಡಲಾಗಿದ್ದು, ನೋಟಿಸ್ ತಲುಪಿದ 7 ದಿನಗಳಲ್ಲಿ ಸಂಬಂಧಪಟ್ಟ ಆಯಾ ಸಂಚಾರಿ ಠಾಣೆಯಲ್ಲಿ ದಂಡ ಪಾತಿಸಬೇಕು. ಒಂದು ವೇಳೆ ದಂಡ ಕಟ್ಟದಿದ್ದಲ್ಲಿ ಕಾನೂನು ರೀತಿಯಲ್ಲಿ 6 ತಿಂಗಳು ಜೈಲು ಅಥವಾ 5000 ರೂ. ವಿಧಿಸುವ ಎಚ್ಚರಿಕೆಯನ್ನು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು