Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈಲ ಬೆಲೆಗಳ ಏರಿಕೆ: ನಾಳೆ ದೇಶಾದ್ಯಂತ ಲಾರಿ ಮಾಲೀಕರ ಮುಷ್ಕರ; ರಾಜ್ಯದಲ್ಲೂ ರಸ್ತೆಗಳಿಯಲ್ಲ ಲಾರಿಗಳು

ಈಗಾಗಲೇ ನಾಳೆ ರಾಜ್ಯದಲ್ಲಿ ಲಾರಿಗಳು ರಸ್ತೆಗಿಳಿಯುವುದಿಲ್ಲ ಎಂಬುದಂತೂ ಖಚಿತವಾಗಿದ್ದು, ಇಂದು 11.30ಕ್ಕೆ ಪತ್ರಿಕಾಗೋಷ್ಠಿ ಕರೆದಿರುವ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಶಣ್ಮುಗಪ್ಪ, ನಾಳೆಯ ಬಂದ್ ಕುರಿತು ಮಾಹಿತಿ ನೀಡಲಿದ್ದಾರೆ.

ತೈಲ ಬೆಲೆಗಳ ಏರಿಕೆ: ನಾಳೆ ದೇಶಾದ್ಯಂತ ಲಾರಿ ಮಾಲೀಕರ ಮುಷ್ಕರ; ರಾಜ್ಯದಲ್ಲೂ ರಸ್ತೆಗಳಿಯಲ್ಲ ಲಾರಿಗಳು
ನಾಳೆ ರಸ್ತೆಗಳಿಯಲ್ಲ ಲಾರಿಗಳು..
Follow us
guruganesh bhat
|

Updated on: Feb 25, 2021 | 11:10 AM

ಬೆಂಗಳೂರು: ತೈಲ ಬೆಲೆಗಳ ಏರಿಕೆಯಿಂದ ತತ್ತರಿಸಿರುವ ಲಾರಿ ಮಾಲೀಕರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಾಳೆ (ಫೆಬ್ರವರಿ 25) ರಂದು ದೇಶವ್ಯಾಪ್ತಿ ಲಾರಿ ಮುಷ್ಕರ ಘೋಷಿಸಿದ್ದು, ರಾಜ್ಯದ ಲಾರಿ ಮಾಲೀಕರ ಸಂಘ ಲಾರಿ ಮುಷ್ಕರಕ್ಕೆ ಈಗಾಗಲೇ ಬೆಂಬಲ ಘೋಷಿಸಿದೆ. ಇಂದು 11.30ಕ್ಕೆ ಪತ್ರಿಕಾಗೋಷ್ಠಿ ಕರೆದಿರುವ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಶಣ್ಮುಗಪ್ಪ, ನಾಳೆಯ ಬಂದ್ ಕುರಿತು ಮಾಹಿತಿ ನೀಡಲಿದ್ದಾರೆ. ಈಗಾಗಲೇ ನಾಳೆ ರಾಜ್ಯದಲ್ಲಿ ಲಾರಿಗಳು ರಸ್ತೆಗಿಳಿಯುವುದಿಲ್ಲ ಎಂಬುದಂತೂ ಖಚಿತವಾಗಿದೆ.

ಜಿಎಸ್ಆ​ಟಿ (GST) ವಿರೋಧಿಸಿಯೂ ನಾಳೆ ಬಂದ್ ಜಿಎಸ್ಆ​ಟಿ (GST) ವಿರೋಧಿಸಿ ಆಲ್ ಇಂಡಿಯಾ ಟ್ರೇಡರ್ಸ್ ಸಂಸ್ಥೆಯು ಈ ಮುಂಚೆಯೇ ನಾಳೆಯ ಬಂದ್​ಗೆ ಕರೆ ಕೊಟ್ಟಿದ್ದು ಈ ಬಂದ್​ಗೆ ರಾಜ್ಯ ಲಾರಿ ಮಾಲೀಕರ ಸಂಘ ಈ ಬಂದ್​ಗೆ ಬೆಂಬಲ ಘೋಷಿಸಿದಂತಾಗಿದೆ.

ಮುಷ್ಕರಕ್ಕೆ ರಾಜ್ಯದ ಲಾರಿಗಳು ಸ್ತಬ್ಧಗೊಳ್ಳಲಿದ್ದು, ತಮ್ಮ ವಹಿವಾಟು ಸ್ಥಗಿತಗೊಳಿಸಿ ಬಂದ್ ಮಾಡಲು ಲಾರಿ ಮಾಲೀಕರು ನಿರ್ಧಾರ ಕೈಗೊಂಡಿದ್ದಾರೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಚಿಂತನೆ ನಡೆಸಲಾಗಿದೆ. ನಾಳೆ ಬೆಳಗ್ಗೆಯಿಂದ ಲಾರಿ ಸಂಚಾರ ಬಂದ್ ಆಗಲಿದ್ದು, ಲಾರಿ ಸಂಚಾರ ಸ್ಥಗಿತದಿಂದ ಅಗತ್ಯ ವಸ್ತುಗಳ ಪೂರೈಕೆ ವ್ಯತ್ಯಯವಾಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ದೇಶಾದ್ಯಂತ The All India Transporters Welfare Association (AITWA) ಸಂಸ್ಥೆ ಲಾರಿಗಳನ್ನು ರಸ್ತೆಗೆ ಇಳಿಸದಂತೆ ನಿರ್ಧರಿಸಿದೆ. ದೇಶದ ಎಲ್ಲ ರಾಜ್ಯಗಳ ಲಾರಿ ಮಾಲೀಕರ ಸಂಘಗಳೂ The All India Transporters Welfare Association ತಳೆದ ಬಂದ್ ನಿರ್ಧಾರಕ್ಕೆ ಬೆಂಬಲ ಘೋಷಿಸಿವೆ.

ಏಕೆ ಬಂದ್ ನಡೆಸಲಿದ್ದಾರೆ? ಈಗಾಗಲೇ ತೈಲ ಬೆಲೆಗಳ ದರ ಗಗನ ಮುಟ್ಟಿದೆ. ಪೆಟ್ರೋಲ್ ಬೆಲೆ ಶತಕ ಬಾರಿಸಿದೆ. ಅಲ್ಲದೇ ಲಾರಿಗಳಲ್ಲಿ ಹೆಚ್ಚಾಗಿ ಬಳಸುವ ಡೀಸೆಲ್ ಬೆಲೆ 80 ಮೀರಿದೆ. ಈ ತೈಲ ಬೆಲೆಗಳಲ್ಲಿ ಲಾರಿ ಮಾಲೀಕರು ತಮ್ಮ ವಹಿವಾಟನ್ನು ನಡೆಸುವುದು ದುಸ್ತರವಿದ್ದು ತೈಲ ಬೆಲೆಗಳ ದರ ಇಳಿಕೆ ಮಾಡುವಂತೆ ಬೇಡಿಕೆ ಮುಂದಿರಿಸಿ ದೇಶಾದಾದ್ಯಂತ ಲಾರಿ ಮಾಲೀಕರ ಸಂಘ ಬಂದ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ

ಜೈ ಕಿಸಾನ್​ ಎಂದ ಲಾರಿ ಮಾಲೀಕರು; ಸೆ. 25ರಂದು ಲಾರಿ ಓಡಾಟ ಇರುತ್ತಾ, ಇಲ್ವಾ?

‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ