AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟು ಕಾಶಿಗೆ ಹೊರಟ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಸಿರು ನಿಶಾನೆ

ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕದಿಂದ ಕಾಶಿಗೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಅದರಂತೆ ನಾಲ್ಕನೇ ರೈಲಿಗೆ ಇಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು.

ಬೆಂಗಳೂರು ಟು ಕಾಶಿಗೆ ಹೊರಟ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಸಿರು ನಿಶಾನೆ
ಬೆಂಗಳೂರಿನಿಂದ ಕಾಶಿಗೆ ಪ್ರಯಾಣ ಆರಂಭಿಸಿದ ನಾಲ್ಕನೇ ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರೆ ರೈಲುImage Credit source: FILE PHOTO
Rakesh Nayak Manchi
|

Updated on: Jul 29, 2023 | 4:58 PM

Share

ಬೆಂಗಳೂರು, ಜುಲೈ 29: ಕರ್ನಾಟಕದಿಂದ ತೆರಳುವ ಕಾಶಿ ಯಾತ್ರಿಗಳ (Kashi Yatra) ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ. ಅದರಂತೆ ಇಂದು (ಜುಲೈ 29) ಕಾಶಿಗೆ ಹೊರಟ ನಾಲ್ಕನೇ ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರೆ ರೈಲಿಗೆ (Karnataka Bharat Gaurav Kashi Yatra) ಬೆಂಗಳೂರು ನಗರದ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹಸಿರು ನಿಶಾನೆ ತೋರಿದರು.

ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರೆ ರೈಲಿನ ಟಿಕೆಟ್ ದರ 20,000 ರೂ. ಆಗಿದೆ. ಆದರೆ ಈ ರೈಲುಗಳಲ್ಲಿ ಪ್ರಯಾಣಿಸುವ ಜನರಿಗೆ ಸರಕಾರವು 5,000 ರೂ. ಸಬ್ಸಿಡಿ ನೀಡುತ್ತಿದೆ. ಪ್ರವಾಸಕ್ಕೆ 15,000 ರೂ., ಸರ್ಕಾರದಿಂದ 5,000 ರೂ.ಗಳ ಸಬ್ಸಿಡಿ ನೀಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: Mangalore News: ರೈಲು ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿದ ಆರ್‌ಪಿಎಫ್ ಸಿಬ್ಬಂದಿ; ವಿಡಿಯೋ ವೈರಲ್

ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿನಲ್ಲಿ ಕಾಶಿ ಯಾತ್ರೆಗೆ ಜನರು 15,000 ರೂ.ಗಳನ್ನು ಪಾವತಿಸಬೇಕಾಗುತ್ತದೆ. 700 ಆಸನಗಳ ಸಾಮರ್ಥ್ಯ ಹೊಂದಿರುವ ಈ ರೈಲು ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟು ಎರಡು ದಿನಗಳಲ್ಲಿ ಕಾಶಿಯನ್ನು ತಲುಪುಲಿದೆ. ನಂತರ ವಾರಣಾಸಿಯಿಂದ ಅಯೋಧ್ಯೆಗೆ ತೆರಳಿ, ಅಲ್ಲಿಂದ ಪ್ರಯಾಗ್ ರಾಜ್​​ಗೆ ಹೋಗಿ ಬೆಂಗಳೂರಿಗೆ ವಾಪಸ್ ಆಗಲಿದೆ. ವಿಶೇಷ ರೈಲುಗಳಲ್ಲಿ ಪ್ರಯಾಣಿಸುವ ಜನರಿಗೆ ಆಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರೆ ರೈಲು ರಾಯಚೂರು, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ಬೀರೂರು, ದಾವಣಗೆರೆ, ಮತ್ತು ಯಶವಂತಪುರದಲ್ಲಿ ನಿಲುಗಡೆ ಹೊಂದಿದೆ. ಇಂದು ನಾಲ್ಕನೇ ವಿಶೇಷ ರೈಲು ಸೇವೆ ಆರಂಭಿಸಿದ್ದು, ಐದನೇ ರೈಲು ಆಗಸ್ಟ್ 15 ರಂದು ಹೊರಡಲಿದೆ. ಈ ವಿಶೇಷ ರೈಲಿನಲ್ಲಿ ಕಾಶಿಗೆ ಭೇಟಿ ನೀಡಲು ಬಯಸುವ ಜನರು ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!