AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕಟ್ಟಿ ಕುಳಿತ ಸರ್ಕಾರಗಳಿಗೆ ಎಚ್ಚರಿಕೆ.. ಇಂದು ಲಾರಿ ಮಾಲೀಕರಿಂದ ಒಂದು ದಿನ ಸಾಂಕೇತಿಕ ಧರಣಿ

Bharat Bandh 2021 | ಒಂದ್ಕಡೆ ಕೊರೊನಾಘಾತ.. ಮತ್ತೊಂದ್ಕಡೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ.. ಇದ್ರ ನಡುವೇ ದಿನೇ ದಿನೆ ಹೆಚ್ಚುತ್ತಿರೋ ಡೀಸೆಲ್ ದರ.. ಜನ ಸಾಮಾನ್ಯರಷ್ಟೇ ಅಲ್ಲ ಈ ದುಬಾರಿ ದುನಿಯಾದಿಂದ ಲಾರಿ ಮಾಲೀಕರು ತತ್ತರಿಸಿ ಹೋಗಿದ್ದಾರೆ. ಬೆಲೆ ಏರಿಕೆಗೆ ಕಡಿವಾಣ ಹಾಕದ ಸರ್ಕಾರಗಳ ವಿರುದ್ಧ ಹೋರಾಟದ ಹಾದಿ ಹಿಡಿದಿದ್ದು, ಇದು ಕೇವಲ ಸ್ಯಾಂಪಲ್ ಅಷ್ಟೇ ಅಂತ ಎಚ್ಚರಿಕೆ ಕೊಟ್ಟಿದ್ದಾರೆ.

ಕೈ ಕಟ್ಟಿ ಕುಳಿತ ಸರ್ಕಾರಗಳಿಗೆ ಎಚ್ಚರಿಕೆ.. ಇಂದು ಲಾರಿ ಮಾಲೀಕರಿಂದ ಒಂದು ದಿನ ಸಾಂಕೇತಿಕ ಧರಣಿ
ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 26, 2021 | 7:13 AM

Share

ಬೆಂಗಳೂರು: ಕಳೆದೊಂದು ವರ್ಷದಿಂದ ಅಬ್ಬರಿಸ್ತಿರೋ ಕೊರೊನಾದಿಂದ ಹಲವು ವಲಯಗಳಿಗೆ ಪೆಟ್ಟು ಬಿದ್ದಿದೆ. ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿತ್ತು. ಅಗತ್ಯಸೇವೆಗಳನ್ನ ಹೊರತುಪಡಿಸಿ ಉಳಿದ ಸೇವೆಗಳಿಗೆ ಬ್ರೇಕ್ ಹಾಕಿದ್ದರಿಂದ ಸರಕು ಸಾಗಣೆ ವಾಹನಗಳ ಓಡಾಟ ನಿಂತಿತ್ತು. ಇದೆಲ್ಲಾ ಆಗಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿವೆ ಅಂದುಕೊಳ್ಳುತ್ತಿರೋವಾಗಲೇ ತೈಲ ದರ ಏರಿಕೆಯಾಗ್ತಿದೆ. ಅದ್ರಲ್ಲೂ ಪೆಟ್ರೋಲ್-ಡೀಸೆಲ್ ಬೆಲೆ ನೂರರ ಗಡಿ ಮುಟ್ಟಿದೆ. ದೇಶದ ಕೆಲವೆಡೆ ಪೆಟ್ರೋಲ್ ದರ ಈಗಾಗಲೇ ನೂರರ ಗಡಿಯನ್ನ ದಾಟಿದ್ದು. ಅಗತ್ಯವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೆ ಏರ್ತಿದೆ. ಇದಕ್ಕೆ ಕಡಿವಾಣ ಹಾಕ್ಬೇಕಾದ ಸರ್ಕಾರ ಕೈಕಟ್ಟಿ ಕುಳಿತಿದೆ.

ಕೈ ಕಟ್ಟಿ ಕುಳಿತಿರುವ ಸರ್ಕಾರಗಳಿಗೆ ಲಾರಿ ಮಾಲೀಕರ ಎಚ್ಚರಿಕೆ ಬೆಲೆ ಏರಿಕೆ ಕುರಿತು ಕ್ರಮ ಕೈಗೊಳ್ಳದ ಸರ್ಕಾರಗಳ ಈ ನೀತಿ ಖಂಡಿಸಿ ಲಾರಿ ಮಾಲೀಕರು ರೊಚ್ಚಿಗೆದ್ದಿದ್ದು, ಇಂದು(ಫೆ.26) ಒಂದು ದಿನ ಸಾಂಕೇತಿಕ ಧರಣಿ ನಡೆಸಲು ಮುಂದಾಗಿದ್ದಾರೆ. ಒಂದು ದಿನ ಅಗತ್ಯ ಸೇವೆಗಳನ್ನ ಹೊರತು ಪಡಿಸಿ ಉಳಿದ ಸೇವೆಗಳು ಸಂಪೂರ್ಣ ಸ್ಥಗಿತವಾಗಲಿದೆ ಅಂತ ಲಾರಿ ಮಾಲೀಕರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದಿದ್ರೆ, ಮಾರ್ಚ್​ 15ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸೋದಾಗಿ ಹೇಳಿದ್ರು.

ಸರ್ಕಾರದ ‘ಗುಜರಿ’ ನೀತಿ ವಿರುದ್ಧ ಲಾರಿ ಮಾಲೀಕರು ಗರಂ ಇನ್ನು ನೈಸ್ ರಸ್ತೆಯ ಟೋಲ್​ಗಳಲ್ಲಿ ಫಾಸ್ಟ್​ಟ್ಯಾಗ್ ಇನ್ನೂ ಅಳವಡಿಕೆಯಾಗಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಕೂಡಲೇ ಕ್ರಮ ಕೈಗೊಳ್ಬೇಕು ಅಂತ ಆಗ್ರಹಿಸಿದ ಲಾರಿ ಮಾಲೀಕರು, ರಾಜ್ಯದಲ್ಲಿರೋ ಅನಧಿಕೃತ ಟೋಲ್​ಗಳನ್ನ ಕೂಡಲೇ ತೆರವು ಮಾಡ್ಬೇಕು. ಜೊತೆಗೆ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರೋ ಗುಜರಿ ನೀತಿ ಬಗ್ಗೆಯೂ ಲಾರಿ ಮಾಲೀಕರು ಫುಲ್ ಗರಂ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ನೀತಿ ಜಾರಿಗೆ ತರಬಾರದು. ಒಂದು ವೇಳೆ ಈ ನೀತಿ ಏನಾದ್ರೂ ಜಾರಿಯಾದರೆ, ಅದು ಲಾರಿ ಮಾಲೀಕರ ಪಾಲಿಗೆ ಮರಣಶಾಸನವಾಗಲಿದೆ ಅಂತಾ ಹೇಳಿದ್ರು.

ಇನ್ನು ವಾಹನಗಳ ವಿಮೆ ಹಣವನ್ನ ಕಡಿಮೆ ಮಾಡಬೇಕು, ಗ್ರೀನ್ ಟ್ಯಾಕ್ಸ್ ತೆರಿಗೆ ಹೆಚ್ಚಳ ಹಿಂಪಡೆಯೋದು ಸೇರಿದಂತೆ ವಿವಿಧ ಬೇಡಿಕಗೆಳ ಈಡೇರಿಕೆಗೆ ಸರ್ಕಾರಕ್ಕೆ ಮಾರ್ಚ್ 14 ರ ವರೆಗೂ ಲಾರಿ ಮಾಲೀಕರು ಡೆಡ್​ಲೈನ್ ನೀಡಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದಿದ್ರೆ ಮಾರ್ಚ್ 15 ರಿಂದ ಒಂದೂವರೆ ಲಕ್ಷ ಲಾರಿಗಳು ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ ನೀಡಿದ್ದು, ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಲಿದೆ.

ಇದನ್ನೂ ಓದಿ: ನಾಳೆ ಕರ್ನಾಟಕದಲ್ಲೂ ರಸ್ತೆಗಿಳಿಯಲ್ಲ ಲಾರಿಗಳು; ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಘೋಷಣೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು