Sign In

By signing in or creating an account, you agree with Associated Broadcasting Company's Terms & Conditions and Privacy Policy.

Covaxin Vaccine: ಮಾಲೂರಿನಲ್ಲಿ ಕೊವ್ಯಾಕ್ಸಿನ್ ತಯಾರಿ ಆರಂಭ: ತಿಂಗಳಿಗೆ 1 ಕೋಟಿಗೂ ಹೆಚ್ಚು ಡೋಸ್ ಲಸಿಕೆ ಉತ್ಪಾದನೆಗೆ ಯೋಜನೆ

ಲಸಿಕೆ ಉತ್ಪಾದನೆ ಹೆಚ್ಚಿಸುವ ಪ್ರಕ್ರಿಯೆಗೆ ಹೊಸ ವೇಗ ನೀಡಲು ಭಾರತ್ ಬಯೊಟೆಕ್ ಸಂಸ್ಥೆ ನಿರ್ಧರಿಸಿದೆ. ಈಗ ಮಾಲೂರು ಘಟಕದಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಕಂಪನಿ ಹೊಸ ಡೆಡ್​ಲೈನ್ ಕೊಟ್ಟುಕೊಂಡಿದೆ.

Covaxin Vaccine: ಮಾಲೂರಿನಲ್ಲಿ ಕೊವ್ಯಾಕ್ಸಿನ್ ತಯಾರಿ ಆರಂಭ: ತಿಂಗಳಿಗೆ 1 ಕೋಟಿಗೂ ಹೆಚ್ಚು ಡೋಸ್ ಲಸಿಕೆ ಉತ್ಪಾದನೆಗೆ ಯೋಜನೆ
ಪ್ರಾತಿನಿಧಿಕ ಚಿತ್ರ
Follow us
S Chandramohan
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 30, 2021 | 10:48 PM

ಬೆಂಗಳೂರು: ಭಾರತದಲ್ಲಿ ಈಗ ಕೊರೊನಾ ಲಸಿಕೆಯ ತೀವ್ರ ಕೊರತೆ ಇದೆ. ಸ್ವದೇಶಿ ಲಸಿಕಾ ಕಂಪನಿಯಾದ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆಯ ಉತ್ಪಾದನೆಯನ್ನು ಹೆಚ್ಚಿಸಲು ಎಷ್ಟೇ ಪ್ರಯತ್ನಪಟ್ಟರೂ ಉದ್ದೇಶ ಈಡೇರುತ್ತಿಲ್ಲ. ಕೋಲಾರ ಜಿಲ್ಲೆಯಲ್ಲಿ ಮಾಲೂರಿನ ತನ್ನ ಘಟಕದಲ್ಲಿ ಜೂನ್ ತಿಂಗಳಲ್ಲೇ ಲಸಿಕೆ ಉತ್ಪಾದನೆ ಆರಂಭಿಸುವ ಪ್ರಯತ್ನವೂ ಇನ್ನೂ ಸಾಕಾರಗೊಂಡಿಲ್ಲ. ಆದರೆ ಇದೀಗ ಲಸಿಕೆ ಉತ್ಪಾದನೆ ಹೆಚ್ಚಿಸುವ ಪ್ರಕ್ರಿಯೆಗೆ ಹೊಸ ವೇಗ ನೀಡಲು ಸಂಸ್ಥೆ ನಿರ್ಧರಿಸಿದೆ. ಈಗ ಮಾಲೂರು ಘಟಕದಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಕಂಪನಿ ಹೊಸ ಡೆಡ್​ಲೈನ್ ಕೊಟ್ಟುಕೊಂಡಿದೆ.

ಭಾರತ್ ಬಯೋಟೆಕ್ ಕಂಪನಿಯು ಸದ್ಯ ತಿಂಗಳಿಗೆ 2.5 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆಯನ್ನು ಮಾತ್ರ ಉತ್ಪಾದಿಸುತ್ತಿದೆ. ಆದರೆ, ಕೇಂದ್ರ ಸರ್ಕಾರವು ಭಾರತ್ ಬಯೋಟೆಕ್ ಕಂಪನಿಯು ಪ್ರತಿ ತಿಂಗಳು 10 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸಬೇಕು ಎಂಬ ನಿರೀಕ್ಷಿಸಿದೆ. ಇದಕ್ಕಾಗಿ ಭಾರತ್ ಬಯೋಟೆಕ್ ಕಂಪನಿಯು ತನ್ನ ಕರ್ನಾಟಕದ ಕೋಲಾರದ ಮಾಲೂರು ಘಟಕದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ಉತ್ಪಾದನೆಗೆ ಈ ಹಿಂದೆಯೇ ನಿರ್ಧರಿಸಿತ್ತು. ಜೂನ್ ತಿಂಗಳ ವೇಳೆಗೆ ಮಾಲೂರು ಘಟಕದಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ ಆರಂಭಿಸುವುದಾಗಿ ಹೇಳಿತ್ತು. ಆದರೆ, ಜೂನ್ ತಿಂಗಳಲ್ಲಿ ಲಸಿಕೆ ಉತ್ಪಾದನೆ ಆರಂಭವಾಗಿಲ್ಲ.

ಭಾರತ್ ಬಯೋಟೆಕ್ ಕಂಪನಿಯ ಹೊಸ ಡೆಡ್​ಲೈನ್ ಪ್ರಕಾರ, ಜುಲೈ ಅಂತ್ಯ ಇಲ್ಲವೇ ಆಗಸ್ಟ್ ತಿಂಗಳ ಆರಂಭದಲ್ಲಿ ಮಾಲೂರು ಘಟಕದಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ ಆರಂಭವಾಗಬೇಕಿದೆ. ನಿರೀಕ್ಷೆಯಂತೆ ಜುಲೈ ಅಂತ್ಯ ಇಲ್ಲವೇ ಆಗಸ್ಟ್ ತಿಂಗಳ ಪ್ರಾರಂಭದಲ್ಲಿ ಮಾಲೂರು ಘಟಕದಲ್ಲೇ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ ಆರಂಭವಾಗುತ್ತೆ ಎಂಬ ವಿಶ್ವಾಸವನ್ನು ಭಾರತ್ ಬಯೋಟೆಕ್ ಕಂಪನಿಯ ಹೆಸರು ಹೇಳಲು ಇಚ್ಛಿಸದ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಕೋಲಾರದ ಮಾಲೂರು ಘಟಕದಲ್ಲಿ ಪ್ರತಿ ತಿಂಗಳು 1 ರಿಂದ 1.2 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸುವ ಸಾಮರ್ಥ್ಯ ಇದೆ. ಈ ಮೊದಲು ಮಾಲೂರು ಘಟಕದಲ್ಲಿ ಪ್ರಾಣಿಗಳ ಲಸಿಕೆಯನ್ನು ಉತ್ಪಾದಿಸಲಾಗುತ್ತಿತ್ತು. ಆದರೆ ಈಗ ಕೊರೊನಾದಿಂದ ಭಾರತ ಮಾತ್ರವಲ್ಲದೇ, ವಿಶ್ವದಲ್ಲೇ ಕೊರೊನಾ ಲಸಿಕೆಗೆ ಬಾರಿ ಬೇಡಿಕೆ ಬಂದಿದೆ. ಕೊರೊನಾದಿಂದ ವಿಶ್ವ ಪಾರಾಗಲು ಕೊರೊನಾ ಲಸಿಕೆಯೇ ರಾಮಬಾಣ. ಹೀಗಾಗಿ ತನ್ನ ಮಾಲೂರು ಘಟಕದಲ್ಲಿ ಪ್ರಾಣಿಗಳ ಲಸಿಕೆ ತಯಾರಿಯನ್ನು ನಿಲ್ಲಿಸಿ, ಕೊರೊನಾ ಲಸಿಕೆಯನ್ನ ಉತ್ಪಾದಿಸಲು ಭಾರತ್ ಬಯೋಟೆಕ್ ನಿರ್ಧರಿಸಿದೆ. ಈಗಾಗಲೇ ಕರ್ನಾಟಕ ಸರ್ಕಾರ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ತೆಗೆದುಕೊಳ್ಳಬೇಕಿದ್ದ ಅನುಮತಿಗಳನ್ನು ಪಡೆದುಕೊಂಡಿದೆ. ಮಾಲೂರು ಘಟಕದಲ್ಲೇ ಕೊವ್ಯಾಕ್ಸಿನ್ ಲಸಿಕೆಯ ಉತ್ಪಾದನೆ ಆರಂಭವಾದರೆ, ಕರ್ನಾಟಕಕ್ಕೂ ಇಲ್ಲಿಂದಲೇ ಕೊರೊನಾ ಲಸಿಕೆಯನ್ನು ಪೂರೈಕೆಯಾಗಲಿದೆ.

ಮಾಲೂರು ಘಟಕದಲ್ಲಿ ಬಯೋ ಸೇಫ್ಟಿ ಲೆವೆಲ್-3ರ ಸುರಕ್ಷತಾ ಕ್ರಮಗಳನ್ನು ಆಳವಡಿಸಿಕೊಳ್ಳಲಾಗಿದೆ. ಕೊವ್ಯಾಕ್ಸಿನ್ ಲಸಿಕೆಯನ್ನು ಬಯೋ ಸೇಫ್ಟಿ ಲೆವೆಲ್-3ರಲ್ಲೇ ಉತ್ಪಾದಿಸಬೇಕು. ಕೊವ್ಯಾಕ್ಸಿನ್ ಲಸಿಕೆಯು ಜೀವಂತ ಕೊರೊನಾ ವೈರಸ್ ಅನ್ನು ನಿಷ್ಕ್ರಿಯಗೊಳಿಸಿ, ಲಸಿಕೆಯನ್ನು ಉತ್ಪಾದಿಸುವ ತಂತ್ರಜ್ಞಾನವನ್ನು ಹೊಂದಿದೆ. ಹೀಗಾಗಿ ಲಸಿಕೆಯ ಉತ್ಪಾದನೆ ವೇಳೆ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.

ಗುಜರಾತ್ ರಾಜ್ಯದ ಅಂಕಲೇಶ್ವರ್ ಘಟಕದಲ್ಲಿಯೂ ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸಲು ಭಾರತ್ ಬಯೋಟೆಕ್ ಪ್ಲ್ಯಾನ್ ಮಾಡಿದೆ. ಆದರೆ, ಗುಜರಾತ್ ಸರ್ಕಾರದಿಂದ ಅಗತ್ಯ ಅನುಮೋದನೆಗಳು ಇನ್ನೂ ಸಿಕ್ಕಿಲ್ಲ.

(Bharath Biotech to Manufacture Covaxin in Malur Biotech plan Monthly 1 crore dose production planned)

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​