‘ವಿಷ್ಣು ಪ್ರಿಯ’ ಸಿನಿಮಾ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಕೆನ್ನೆ ತಟ್ಟಿ ಮಾತಾಡಿದ ಭಾರತಿ ವಿಷ್ಣವರ್ಧನ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 10, 2025 | 5:42 PM

ಟಿವಿ9 ಸಿನಿಮಾ ವರದಿಗಾರರು ನೀಡಿರುವ ಮಾಹಿತಿ ಪ್ರಕಾರ ವಿಷ್ಣು ಪ್ರಿಯ ಸಿನಿಮಾ ಫೆಬ್ರುವರಿ 21 ರಂದು ಬೆಳ್ಳಿತೆರೆಯನ್ನು ಅಪ್ಪಳಿಸಲಿದೆ. ಯುವ ಜೋಡಿ ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ ಅಪ್ಪಟ ಲವ್ ಸ್ಟೋರಿ ಅಂತೆ. ಅಂದಹಾಗೆ ಪ್ರಿಯಾ ವಾರಿಯರ್ ಯಾರು ಅಂತ ಗೊತ್ತಾಯ್ತು ತಾನೇ? ಒರು ಅಡಾರ್ ಲವ್ ಚಿತ್ರದಲ್ಲಿ ಮಿಟಿ ಮಿಟಿ ಕಣ್ಣು ಮಿಟುಕಿಸಿದ ತುಂಟ ಸುಂದರಿ !

ಬೆಂಗಳೂರು: ಚಿತ್ರನಟ ಕಿಚ್ಚ ಸುದೀಪ್ ಬಿಗ್ ಬಾಸ್ ಕನ್ನಡ ಸೀಸನ್ ನಂತರ ಬಿಡುವಾಗಿದ್ದಾರೆ. ಇವತ್ತು ಅವರು ‘ವಿಷ್ಣು ಪ್ರಿಯ’ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಲ್ಲದೆ ಲವಲವಿಕೆಯಿಂದ ಓಡಾಡಿದರು. ಸುದೀಪ್ ಅವರಿಗೆ ಈಗ ನಮ್ಮ ಮಧ್ಯೆದಲ್ಲಿರದ ವಿಷ್ಣವರ್ಧನ್ ಮತ್ತು ಅಂಬರೀಶ್ ಅವರ ಮೇಲೆ ಅದೆಷ್ಟು ಅಭಿಮಾನ ಪ್ರೀತಿ ಇತ್ತು ಅಂತ ಕನ್ನಡಿಗರಿಗೆಲ್ಲ ಗೊತ್ತಿದೆ. ಇವತ್ತಿನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದ ಭಾರತಿ ವಿಷ್ಣವರ್ಧನ್ ಅವರು ಪ್ರೀತಿಯಿಂದ ಸುದೀಪ್ ಕೆನ್ನೆ ತಟ್ಟಿ ಮಾತಾಡಿದರು. ನಂತರ ಸುದೀಪ್ ಖ್ಯಾತ ನಿರ್ದೇಶಕರಾದ ಎಸ್ ನಾರಾಯಣ, ನಾಗತಿಹಳ್ಳಿ ಚಂದ್ರಶೇಖರ್ ಮತ್ತು ಇಂದ್ರಜಿತ್ ಲಂಕೇಶ್ ಅವರಿಗೆ ವಿಶ್ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಣ್ಸನ್ನೆ ಹುಡುಗಿ ನಟನೆಯ ಕನ್ನಡ ಸಿನಿಮಾ ‘ವಿಷ್ಣು ಪ್ರಿಯಾ’ ಫೆಬ್ರವರಿ 21ಕ್ಕೆ ರಿಲೀಸ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.