AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿ ಅಬ್ಬರ: ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್​

ಭೀಮಾ ನದಿ ಪ್ರವಾಹದಿಂದಾಗಿ ಜೇವರ್ಗಿ ಪಟ್ಟಣದ ಸಮೀಪದ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್​ ಆಗಿದೆ. ಕಲಬುರಗಿಯ ವಿವಿಧೆಡೆ ಮನೆ, ದೇಗುಲಗಳಿಗೂ ನೆರೆ ನೀರು ನುಗ್ಗಿದ್ದು ಜನ ಪರದಾಟ ನಡೆಸಿದ್ದಾರೆ. ಕೃಷಿ ಭೂಮಿಗಳು ಮುಳುಗಡೆಯಾಗಿರೋದು ರೈತರನ್ನ ಕಂಗೆಡಿಸಿದೆ.

ಭೀಮಾ ನದಿ ಅಬ್ಬರ: ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್​
ಭೀಮಾ ನದಿ ಅಬ್ಬರ
ದತ್ತಾತ್ರೇಯ ಪಾಟೀಲ್​
| Edited By: |

Updated on:Sep 27, 2025 | 12:30 PM

Share

ಕಲಬುರಗಿ/ಯಾದಗಿರಿ, ಸೆಪ್ಟೆಂಬರ್​ 27: ಕಲಬುರಗಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಮಳೆ (Rain) ಹಿನ್ನಲೆ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದಿಂದ ನದಿಗೆ 3.40 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಿರುವ ಪರಿಣಾಮ ಜೇವರ್ಗಿ ಪಟ್ಟಣದ ಸಮೀಪದ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗಿದೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್​ ಆಗಿದ್ದು, ನಡು ರಸ್ತೆಯ ಮೇಲೆಯೇ ವಾಹನಗಳು ಕಿಲೋಮೀಟರ್​ಗಟ್ಟಲೆ ಕ್ಯೂ ನಿಂತಿವೆ.

ಮನೆ, ದೇಗುಲಗಳಿಗೆ ನುಗ್ಗಿದ ಹಳ್ಳದ ನೀರು

ಕಳೆದ‌ 48 ಗಂಟೆಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅವಾಂತರಗಳೇ ಸೃಷ್ಟಿಯಾಗಿದ್ದು, ಹಳ್ಳ ಭರ್ತಿಯಾಗಿ ಕರ್ಚಖೇಡ ಗ್ರಾಮಕ್ಕೆ ಮಳೆ ನೀರು ನುಗ್ಗಿದೆ. ಗ್ರಾಮದ ಹಲವು ಮನೆಗಳು, ದೇವಸ್ಥಾನಕ್ಕೆ ಹಳ್ಳದ ನೀರು ನುಗ್ಗಿದ ಪರಿಣಾಮ ಜನರು ಪರದಾಟ ನಡೆಸಿದ್ದಾರೆ. ಜೇವರ್ಗಿ ತಾಲೂಕಿನ ಯಂಕಂಚಿ ಗ್ರಾಮದ ಬಸವೇಶ್ವರ ದೇವಸ್ಥಾನ, ಮಹಾಲಕ್ಷ್ಮೀ ದೇವಸ್ಥಾನಗಳಿಗೂ ಪ್ರವಾಹದ ನೀರು ನುಗ್ಗಿದೆ.

ಇದನ್ನೂ ಓದಿ: ಭೀಮಾ ನದಿ ಆರ್ಭಟ; ಪ್ರವಾಹಕ್ಕೆ ಊರಿಗೆ ಊರೇ ಖಾಲಿ

ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರೋ ಹಿನ್ನಲೆ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್‌ ಆದೇಶಿಸಿದ್ದಾರೆ. ದಸರಾ ರಜೆಯಿಂದ ವಿನಾಯತಿ ಪಡೆದು ನಡೆಸುತ್ತಿರುವ ಶಾಲೆಗಳಿಗೆ ಈ ಆದೇಶ ಅನ್ವಯಿಸಲಿದೆ. ನಾಳೆಯೂ ಕಲಬುರಗಿಯಲ್ಲಿ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ರೈತರ ಬದುಕು ಬರ್ಬಾದ್

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಪರಿಣಾಮ ಕಲಬುರಗಿಯ ಸನ್ನತಿ ಬ್ಯಾರೇಜ್ ನಿಂದ ಯಾದಗಿರಿ ಕಡೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಭೀಮಾ ನದಿ ಪ್ರವಾಹಕ್ಕೆ ರೈತರ ಬದುಕು ಅಕ್ಷರಶಃ ಬರ್ಬಾದ್ ಆಗಿದ್ದು, ನಾಯ್ಕಲ್ ಗ್ರಾಮದಲ್ಲಿ ನೂರಾರು ಎಕರೆ ಬೆಳೆ ಪ್ರವಾಹದ ನೀರಲ್ಲಿ ಮುಳುಗಿದೆ. ನದಿ ಪ್ರದೇಶದ ಸುತ್ತ ಸುಮಾರು ಒಂದು ಕಿಲೋಮೀಟರ್​ ವ್ಯಾಪ್ತಿಯವರೆಗೂ ಪ್ರವಾಹದ ನೀರು ನುಗ್ಗಿದ್ದು, ಭತ್ತ ಹಾಗೂ ಹತ್ತಿ ಬೆಳೆದಿದ್ದ ಜಮೀನು ಸಮುದ್ರದ ರೀತಿ ಕಾಣತೊಡಗಿದೆ. ಇದರ ಜೊತೆಗೆ ಯಾದಗಿರಿ ಜಿಲ್ಲೆಯಲ್ಲೂ ವರುಣ ಅಬ್ಬರಿಸುತ್ತಿದ್ದು, ಮಳೆಯ ಹೊಡೆತಕ್ಕೆ ಅನ್ನದಾತರು ಕಂಗೆಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 12:29 pm, Sat, 27 September 25

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ