AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸದ್ದು ಮಾಡುತ್ತಿದೆ ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ: ಏನಿದು ಪ್ರಕರಣ? ಈವರೆಗೆ ಏನೇನಾಯ್ತು? ಇಲ್ಲಿದೆ ವಿವರ

Bhovi Corporation; ಭೋವಿ ಅಭಿವೃದ್ಧಿ ನಿಗಮದಲ್ಲಿ ಮತ್ತೆ ಅವ್ಯವಹಾರದ ಆರೋಪ ಕೇಳಿಬಂದಿದೆ. ನಿಗಮದಿಂದ ಅಕ್ರಮ ಹಣಕಾಸು ವರ್ಗಾವಣೆ ಮಾಡಿದ ಆರೋಪ ಕಳೆದ ವರ್ಷ ಕೇಳಿಬಂದಿತ್ತು. ಇದೀಗ ನಿಗಮದ ಅಧ್ಯಕ್ಷರ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಅಧ್ಯಕ್ಷರ ರಾಜೀನಾಮೆಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದೂ ಹೇಳಲಾಗಿದೆ. ಆದರೆ, ತಮ್ಮ ವಿರುದ್ಧದ ಆರೋಪಗಳನ್ನು ಅಧ್ಯಕ್ಷ ಎಸ್ ರವಿಕುಮಾರ್ ಅಲ್ಲಗಳೆದಿದ್ದಾರೆ. ಈ ವಿಚಾರವಾಗಿ ಇಲ್ಲಿವರೆಗೆ ನಡೆದಿರುವ ಬೆಳವಣಿಗೆಗಳ ವಿವರ ಇಲ್ಲಿದೆ.

ಮತ್ತೆ ಸದ್ದು ಮಾಡುತ್ತಿದೆ ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ: ಏನಿದು ಪ್ರಕರಣ? ಈವರೆಗೆ ಏನೇನಾಯ್ತು? ಇಲ್ಲಿದೆ ವಿವರ
ಭೋವಿ ಅಭಿವೃದ್ಧಿ ನಿಗಮದ ಲೋಗೋ ಮತ್ತು ಅಧ್ಯಕ್ಷ ಎಸ್ ರವಿಕುಮಾರ್
ಗಣಪತಿ ಶರ್ಮಾ
|

Updated on: Sep 03, 2025 | 11:43 AM

Share

ಬೆಂಗಳೂರು, ಸೆಪ್ಟೆಂಬರ್ 3: ಭೋವಿ ಅಭಿವೃದ್ಧಿ ನಿಗಮದಲ್ಲಿ (Bhovi Development Corporation)ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ಕಳೆದ ವರ್ಷ (2024) ಆಗಸ್ಟ್​​ನಲ್ಲಿ ಬೆಂಗಳೂರಿನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ (CID) ಅಧಿಕಾರಿಗಳು ದಾಳಿ ನಡೆಸಿದ್ದರು. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವ ಆಮಿಷವೊಡ್ಡಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದ ಆಧಾರದಲ್ಲಿ ಸಿಐಡಿ ದಾಳಿ ನಡೆದಿತ್ತು. ಆ ವಿಚಾರದಲ್ಲಿ ತನಿಖೆಯೂ ನಡೆಯುತ್ತಿದೆ. ಇದೀಗ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆಯೇ ಆರೋಪ ಕೇಳಿಬಂದಿದೆ.

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರ ವಿರುದ್ಧದ ಆರೋಪವೇನು?

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್​. ರವಿಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಯೋಜನೆಗಳಡಿ ಸವಲತ್ತು ಒದಗಿಸಿಕೊಡಲು ರವಿಕುಮಾರ್ ಶೇಕಡ 60 ರಷ್ಟು ಲಂಚ ಕೇಳುತ್ತಿದ್ದಾರೆ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಗಂಭೀರ ಆರೋಗ್ಯ ಮಾಡಿದ್ದರು. ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, 2021-22 ರಲ್ಲಿ ನಿಗಮದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಮಧ್ಯವರ್ತಿಗಳೊಂದಿಗೆ ಶಾಮೀಲಾಗಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿದ್ದರು ಎಂದು ಆರೋಪಿಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದರು. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರ ರಾಜೀನಾಮೆಗೆ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರ ವಿರುದ್ಧದ ಲಂಚದ ಆರೋಪ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿದ್ದರು. ರಾಜೀನಾಮೆ ನೀಡುವಂತೆ ರವಿಕುಮಾರ್​​ಗೆ ಅವರಿ ಸೂಚಿಸಿದ್ದಾರೆ ಎಂದು ಮಂಗಳವಾರ ಮೂಲಗಳು ತಿಳಿಸಿದ್ದವು. ಆದರೆ, ಅದಾದ ನಂತರವೂ ರವಿಕುಮಾರ್ ರಾಜೀನಾಮೆ ನೀಡಿಲ್ಲ.

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವಿಕುಮಾರ್ ಹೇಳಿದ್ದೇನು?

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವಿಕುಮಾರ್ ಇದೀಗ ಶಿವಮೊಗ್ಗದಲ್ಲಿ ದಿಢೀರ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಇದು ತಮ್ಮ ವಿರುದ್ಧ ಮಾಡಿರುವ ಷಡ್ಯಂತ್ರ ಎಂದಿರುವ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಅಲ್ಲದೆ, ಎಐ ತಂತ್ರಜ್ಞಾನ ಬಳಕೆ ಮಾಡಿ ಕೆಲ ಸಂಗತಿಗಳನ್ನು ತಿರುಚಿದ್ದಾರೆ. ನಿಗಮದಲ್ಲಿ ಎಲ್ಲಾ ಕೆಲಸಗಳನ್ನು ಪಾರದರ್ಶಕವಾಗಿ ಮಾಡಿದ್ದೇನೆ. ಅದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?