AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬಿದ ಬೀದರ್​ ಜಿಲ್ಲಾಸ್ಪತ್ರೆಯ ವೈದ್ಯರು

ದಿನ ಕಳೆದಂತೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿಗೆ ಜನ ಭಯಭೀತರಾಗಿದ್ದಾರೆ. ಹೀಗಿರುವಾಗ ಧೈರ್ಯವೊಂದೇ ರೋಗಕ್ಕೆ ಮದ್ದು ಎಂಬ ಕಾರಣಕ್ಕೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕು ಆಸ್ಪತ್ರೆ ವೈದ್ಯರು ರೋಗಿಗಳಿಗೆ ತಿಳುವಳಿಕೆಯ ಮಾತುಗಳನ್ನಾಡಿ ಧೈರ್ಯ ಹೇಳಿದ್ದಾರೆ.

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬಿದ ಬೀದರ್​ ಜಿಲ್ಲಾಸ್ಪತ್ರೆಯ ವೈದ್ಯರು
ರೋಗಿಗಳಿಗೆ ಧೈರ್ಯ ತುಂಬಿದ ಬೀದರ್​ ಜಿಲ್ಲಾಸ್ಪತ್ರೆಯ ವೈದ್ಯರು
shruti hegde
|

Updated on: May 09, 2021 | 10:14 AM

Share

ಬೀದರ್: ದಿನ ಕಳೆದಂತೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿಗೆ ಜನ ಭಯಭೀತರಾಗಿದ್ದಾರೆ. ಹೀಗಿರುವಾಗ ಧೈರ್ಯವೊಂದೇ ರೋಗಕ್ಕೆ ಮದ್ದು ಎಂಬ ಕಾರಣಕ್ಕೆ ಜಿಲ್ಲೆಯ ಬಸವಕಲ್ಯಾಣ ತಾಲೂಕು ಆಸ್ಪತ್ರೆ ವೈದ್ಯರು ರೋಗಿಗಳಿಗೆ ತಿಳುವಳಿಕೆಯ ಮಾತುಗಳನ್ನಾಡಿ ಧೈರ್ಯ ಹೇಳಿದ್ದಾರೆ. ಇದರಿಂದ ಖುಷಿಗೊಂಡ ರೋಗಿಗಳು ಆಸ್ಪತ್ರೆಯ ಬೆಡ್​ ಮೇಲೆಯೇ ಕುಣಿದು ಕುಪ್ಪಳಿಸಿದ್ದಾರೆ.

ಕೊವಿಡ್​ನಿಂದ ರಾಜ್ಯದೆಲ್ಲೆಡೆ ಉಂಟಾದ ಪರಿಸ್ಥಿತಿ ನೋಡಿ ಕೊವಿಡ್ ಪಾಸಿಟಿವ್​ ವರದಿ ಕೇಳಿದಾಕ್ಷಣ ಹೆದರುವ ಸ್ಥಿತಿ ಎದುರಾಗಿದೆ. ಕೊರೊನಾ ಸೋಂಕು ದೃಢ ಪಟ್ಟಿದ್ದೆ ಜನರೆಲ್ಲಾ ಭಯಗೊಳ್ಳುತ್ತಿದ್ದಾರೆ. ಹೀಗಿರುವಾಗ ಅವರಿಗೆ ಧೈರ್ಯ ತುಂಬಿ ಸಂತೈಸಿ ಹೆಗಲು ಕೊಡುವವರು ಬೇಕಿತ್ತು. ಇದೇ ಸಮಯದಲ್ಲಿ ಜಿಲ್ಲಾ ಆಸ್ಪತ್ರೆಯ ವೈದ್ಯರು ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿರುವುದು ರೋಗಿಗಳಿಗೆ ಆತ್ಮಸ್ಥೈರ್ಯ ಮೂಡಿದೆ. ಇದರಿಂದ ಸೋಂಕಿನಿಂದ ಹೋರಾಡಬಹುದು ಎಂಬ ಧೈರ್ಯ ರೋಗಿಗಳಿಗೆ ಬಂದಿದೆ.

ನಿಮ್ಮ ಜೊತೆ ನಾವಿದ್ದೇವೆ, ಯಾವುದಕ್ಕೂ ಹೆದರದಿರಿ ಎಂದು ವೈದ್ಯರು ಹೇಳಿದ ಮಾತುಗಳನ್ನು ಕೇಳಿದ ರೋಗಿಗಳು ಖುಷಿಯಿಂದ ಆಸ್ಪತ್ರೆಯ ಬೆಡ್​ ಮೇಲೆಯೇ ಕುಣಿದಿದ್ದಾರೆ. ಇದನ್ನು ಗಮನಿಸಿದ ವೈದ್ಯರು, ರೋಗಿಗಳಿಗೆ ಚಿಕಿತ್ಸೆಯ ಜೊತೆಗೆ ಧೈರ್ಯವೇ ಮದ್ದು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬೀದರ್: ಬ್ರಿಮ್ಸ್ ಅವ್ಯವಸ್ಥೆ ಕಂಡು ಸಚಿವ ಡಾ.ಕೆ.ಸುಧಾಕರ್ ಕೆಂಡಾಮಂಡಲ

Corona Curfew ಸರ್ಕಾರದ ಆದೇಶಕ್ಕೆ ತಲೆ ಕೆಡಿಸಿಕೊಳ್ಳದ ಬೀದರ್ ಜಿಲ್ಲಾಡಳಿತ.. ಕಲಬುರಗಿಯಲ್ಲಿ ಬೇಕಾಬಿಟ್ಟಿ ತಿರುಗಿದವರಿಗೆ ಲಾಠಿ ಏಟು

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು