AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥ; ಗ್ರಾಮ ಪಂಚಾಯತ್​ ಪಿಡಿಒ ಅಮಾನತು

ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೀದರ್ ತಾಲೂಕು ಪಂಚಾಯಿತಿ ಪಿಡಿಒ ಅನ್ನು ಅಮಾನತು ಮಾಡಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. 

ಬೀದರ್​: ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥ; ಗ್ರಾಮ ಪಂಚಾಯತ್​ ಪಿಡಿಒ ಅಮಾನತು
ಗ್ರಾಮ ಪಂಚಾಯತ್​ ಕಾರ್ಯಾಲಯ
ಸುರೇಶ ನಾಯಕ
| Edited By: |

Updated on:Aug 01, 2023 | 1:28 PM

Share

ಬೀದರ್​ ಆ.1: ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಟನಳ್ಳಿ ಗ್ರಾಮ ಪಂಚಾಯಿತಿ (Gram Panchayat) ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬೀದರ (Bidar) ತಾಲ್ಲೂಕಿನ ಚಟನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರೀದಾಬಾದ ಗ್ರಾಮದಲ್ಲಿ ಚರಂಡಿ ಕಾಮಗಾರಿಯನ್ನು ಕೈಗೊಂಡಿದ್ದರು. ಈ ವಿಚಾರವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳ ತಿಳಿಸದೆ ಕಾಮಗಾರಿ ಕೈಗೊಂಡಿದ್ದಾರೆ. ಈ ಕಾಮಗಾರಿಯನ್ನು ಕುಡಿಯುವ ನೀರಿನ ಪೈಪ್​ಲೈನ್​ ಹಾದು ಹೋದ ದಾರಿಯಲ್ಲೇ ನಡೆದಿದೆ.

ಇದರಿಂದ ಕುಡಿಯುವ ನೀರಿನ ಪೈಪ್​​ಲೈನ್​ಗೆ ಹಾನಿಯಾಗಿ ಜು. 25 ರಂದು ಚರಂಡಿಯ ಕಲುಷಿತ ನೀರು ಪೈಪ್‌ಲೈನ್ ನೀರಿಗೆ ಸೇರಿದೆ. ಇದೇ ನೀರನ್ನು ಕುಡಿದು 21 ಜನರು ಅಸ್ವಸ್ಥಗೊಂಡಿದ್ದಾರೆ. ಇವರನ್ನು ಕೂಡಲೆ ಜಿಲ್ಲಾ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 11 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದ 10 ಜನ ಬೀದರನ ವಾಸು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ, ಬಸವಕಲ್ಯಾಣದಲ್ಲಿ ಪೈಶಾಚಿಕ ಕೃತ್ಯ!

ಇನ್ನು ಪ್ರಕರಣ ಜು.25 ರಂದು ನಡೆದಿದ್ದು, ಗ್ರಾಮ ಪಂಚಾಯತಿ ಪಿಡಿಒ ದೇವೆಂದ್ರಪ್ಪ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಅವರಿಗೆ ಕೂಡಲೆ ವರದಿ ನೀಡದೆ ಜು.28 ರಂದು ಸಾಯಂಕಾಲ 5:30 ಕ್ಕೆ ತಡವಾಗಿ ವರದಿ ನೀಡಿದ ಹಿನ್ನೆಲೆ ಕರ್ತವ್ಯ ಲೋಪ ಎಸಗಿದ್ದಾರೆಂದು ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Tue, 1 August 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ