ಬೀದರ್ ನಲ್ಲೊಂದು ಅಮಾನವೀಯ ಘಟನೆ: ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ

ಬೀದರ್ ನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಲತಾಯಿಯೇ ಪಟ್ಟಕಂದಮ್ಮನನ್ನ ಮೂರನೇ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾಳೆ. ನಂತರ ಮಗು ತಾನೇ ಮೂರನೇ ಮಹಡಿಯಿಂದ ಬಿದ್ದಿದೆ ಎಂದು ನಾಟಕಮಾಡಿ ಅಮಾಯಕಿಯಂತೆ ತಿರುಗಾಡುತ್ತಿದ್ದಳು. ಆದರೆ ಪಕ್ಕದ ಮನೆಯ ಸಿಸಿ ಕ್ಯಾಮೆರಾದಲ್ಲಿ ಮಲತಾಯಿಯ ಕ್ರೂರತೆ ಬಯಲಾಗಿದೆ.

ಬೀದರ್ ನಲ್ಲೊಂದು ಅಮಾನವೀಯ ಘಟನೆ: ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ
Shanvi
Updated By: ರಮೇಶ್ ಬಿ. ಜವಳಗೇರಾ

Updated on: Sep 15, 2025 | 10:30 PM

ಬೀದರ್, (ಸೆಪ್ಟೆಂಬರ್ 15): ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ನೂಕಿ ಮಲತಾಯಿ ಜೀವ ತೆಗೆದಿರುವ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಆಗಸ್ಟ್​ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಾನವಿ ಮೃತ ಬಾಲಕಿ.ಆಗಸ್ಟ್ 27ರಂದು ಶಾನವಿ ಮೃತಪಟ್ಟಾಗ ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದ್ರೆ ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದ್ದು, ಈ ಘಟನೆ ಸಂಬಂಧ ಮಲತಾಯಿ ರಾಧಾಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೃತ ಶಾನವಿ ತಾಯಿ ಖಾಯಿಲೆಗೆ ತುತ್ತಾಗಿ ಕಳೆದ 6 ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದಳು. ಇದಾದ ಬಳಿಕ ಮೃತ ಶಾನವಿ ತಂದೆ ಸಿದ್ಧಾಂತ, 2023ರಲ್ಲಿ ರಾಧಾ ಜೊತೆ 2ನೇ ವಿವಾಹವಾಗಿದ್ದರು. ಸಿದ್ಧಾಂತ ಹಾಗೂ ರಾಧಾಗೆ ಎರಡು ಅವಳಿ ಮಕ್ಕಳು ಹುಟ್ಟಿದ ಬಳಿಕ ಸಿದ್ಧಾಂತರ ಮೊದಲನೇ ಮಗಳ ತಮ್ಮಗೆ ಹೊರೆಯಾಗ್ತಾಳೆಂದು 2ನೇ ಪತ್ನಿ ಜೀವ ತೆಗೆದಿದ್ದಾಳೆ. ಆಗಸ್ಟ್ 27ರಂದು ಶಾನವಿ ಮೃತಪಟ್ಟಾಗ, ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದಾರೆ. ಆದ್ರೆ ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದೆ. ರಾಧಾ ಬಾಲಕಿ ಜೊತೆ ಟೇರಸ್ ಮೇಲೆ ಸಂಶಯಾಸ್ಪದ ರೀತಿ ಓಡಾಡುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಮಕ್ಕಳನ್ನ ಬಕೆಟ್​ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ, ತಾಯಿ ಬಚಾವ್​​

ಈ ಸಿಟಿಟಿವಿ ದೃಶ್ಯವನ್ನ ಸೆಪ್ಟೆಂಬರ್ 12ರಂದು ಬಾಲಕಿ ತಂದೆ ಸಿದ್ಧಾಂತ ವಾಟ್ಸಾಪ್‌ಗೆ ಪಕ್ಕದ ಮನೆ ಮಾಲೀಕ ಕಳುಹಿಸಿದ್ದಾರೆ. ಮೇಲ್ಮಹಡಿಯಲ್ಲಿ ಖುರ್ಚಿ ಇಟ್ಟು ಅದರ ಮೇಲೆ ಬುಟ್ಟಿ ಉಲ್ಟಾ ಇಟ್ಟು ಶಾನವಿಯನ್ನ ಕೂರಿಸಿರೊದು ಪತ್ತೆಯಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಮೃತ ಬಾಲಕಿ ಅಜ್ಜಿ, ರಾಧಾ ವಿರುದ್ಧ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.