AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಗ್ರಾಮ ಪಂಚಾಯ್ತಿ ಅಧಿಕಾರಿಗೆ ಲಂಚ ನೀಡಲು ಹಣವಿಲ್ಲದೆ, ಎತ್ತುಗಳನ್ನೇ ನೀಡಲು ಮುಂದಾದ ರೈತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಂಜೂರಾದ ಅನುದಾನವನ್ನು ನೀಡಲು ಗ್ರಾಮ ಪಂಚಾಯತ್ ಅಧಿಕಾರಿ ಲಂಚ ಕೇಳಿದ್ದು, ಹಣ ನೀಡಲು ಸಾಧ್ಯವಾಗದೆ ರೈತ ಎತ್ತುಗಳನ್ನೇ ನೀಡಲು ಮುಂದಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.

ಬೀದರ್​: ಗ್ರಾಮ ಪಂಚಾಯ್ತಿ ಅಧಿಕಾರಿಗೆ ಲಂಚ ನೀಡಲು ಹಣವಿಲ್ಲದೆ, ಎತ್ತುಗಳನ್ನೇ ನೀಡಲು ಮುಂದಾದ ರೈತ
ರೈತ ಪ್ರಶಾಂತ್​ ಬಿರಾದಾರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 28, 2023 | 3:32 PM

Share

ಬೀದರ್​: ಕೆಲ ದಿನಗಳ ಹಿಂದೆ ಹಾವೇರಿಯಲ್ಲಿ (Haveri) ಲಂಚ ಕೇಳಿದ್ದ ಪುರಸಭೆ ಅಧಿಕಾರಿಗೆ ರೈತರೊಬ್ಬರು ಎತ್ತು ಮತ್ತು ಚಕ್ಕಡಿಗಳನ್ನು ನೀಡಲು ಮುಂದಾಗಿದ್ದ ಘಟನೆಗೆ ಹೋಲುವಂತೆ ಮೊತ್ತೊಂದು ಘಟನೆ ಕಲ್ಯಾಣ ಕರ್ನಾಟಕದ ಬೀದರ್​ನಲ್ಲಿ ನಡೆದಿದೆ. ​ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (MNREGA Yojana) ಮಂಜೂರಾದ ಅನುದಾನವನ್ನು ನೀಡಲು ಗ್ರಾಮ ಪಂಚಾಯತ್ (Gram Panchayat) ಅಧಿಕಾರಿ ಲಂಚ ಕೇಳಿದ್ದು, ಹಣ ನೀಡಲು ಸಾಧ್ಯವಾಗದೆ ರೈತ (Farmer) ಎತ್ತುಗಳನ್ನೇ ನೀಡಲು ಮುಂದಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basavakalyan) ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.

ಬಗದೂರಿ ಗ್ರಾಮದ ನಿವಾಸಿ ರೈತ ಪ್ರಶಾಂತ ಬಿರಾದಾರ ಉದ್ಯೋಗ ಖಾತ್ರಿಯೊಜನೆಯಡಿ ಕಳೆದ ವರ್ಷ ತಮ್ಮ ಜಮೀನಿನಲ್ಲಿರುವ ಹಳ್ಳಕ್ಕೆ ತಡೆಗೊಡೆ ನಿರ್ಮಾಣ ಮಾಡಿಸಿದ್ದರು. ಈ ಕಾಮಗಾರಿಗೆ 1 ಲಕ್ಷ ರೂ. ಅನುದಾನ ಮಂಜೂರಾಗಿತ್ತು. ಕಾಮಗಾರಿಗೆ ಸಂಬಂಧಿಸಿದಂತೆ ರೈತನಿಗೆ 55 ಸಾವಿರ ರೂ. ಕೂಲಿ ಹಣ ಪಾವತಿ ಮಾಡಲಾಗಿದೆ. ಉಳಿದ 45 ಸಾವಿರ ರೂ. ಮಟಿರಿಯಲ್ ಹಣ ಪಾವತಿಯಾಗಿಲ್ಲ. ಹೀಗಾಗಿ ಮಟಿರಿಯಲ್ ಹಣ ಪಾವತಿಗೆ ಮನವಿ ಮಾಡಿದಾಗ ಯೋಜನೆಯಡಿ ಕೆಲಸ ಮಾಡುವ ಜೆಇ ಅವರು 5 ಸಾವಿರ ರೂ. ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಲಂಚ ಕೇಳಿದ ಪುರಸಭೆ ಅಧಿಕಾರಿಗೆ ಎತ್ತು, ಚಕ್ಕಡಿ ನೀಡಿದ ರೈತ

ಆದರೆ ಲಂಚದ ಹಣ ನೀಡಲು ತಮ್ಮ ಬಳಿ ಅಷ್ಟೊಂದು ಹಣ ಇಲ್ಲ ಎಂದು ರೈತ ಹೇಳಿದ ಹಿನ್ನೆಲೆ ಬಿಲ್ ಪಾವತಿಗೆ ತಡೆ ಹಿಡಿಯಲಾಗಿದೆ. ಇದರಿಂದ ಬೆಸರಗೊಂಡ ರೈತ ಪ್ರಶಾಂತ ಬಿರಾದಾರ ಅವರು, ತಮ್ಮ 2 ಎತ್ತುಗಳು ಸಹಿತ ನಗರದ ತಾಲೂಕು ಪಂಚಾಯ್ತಗೆ ಆಗಮಿಸಿ ಎತ್ತುಗಳನ್ನೇ ಲಂಚದ ರೂಪದಲ್ಲಿ ಪಡೆದು, ತನಗೆ ಬರಬೇಕಾದ 45 ಸಾವಿರ ರೂ. ನೀಡಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಘಟನೆಯಿಂದ ತಾಲೂಕು ಪಂಚಾಯಿತಿ ಕಚೇರಿಯ ಅಧಿಕಾರಿ ವರ್ಗದವರಿಗೆ ಮುಜುಗರವಾಗಿದೆ. ಸುದ್ದಿ ತಿಳಿದ ತಾಲೂಕು ಪಂಚಾಯಿತಿ ಎಡಿ ಸಂತೋಷ ಚವ್ಹಾಣ್ ಸ್ಥಳಕ್ಕೆ ಬಂದು ರೈತನನ್ನು ಭೇಟಿಮಾಡಿ ವಿಷಯದ ಕುರಿತು ಚರ್ಚಿಸಿ ಬಿಲ್ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತ ತಮ್ಮ ಎತ್ತುಗಳ ಸಹಿತ ಮನೆಗೆ ವಾಪಾಸ್ ಆಗಿದ್ದಾರೆ.

ಗ್ರಾಮ ಪಂಚಾಯತ್‌ಗಳ ಮೂಲಕ ಅನುಷ್ಠಾಗೊಳಿಸಲಾಗುತ್ತಿರುವ ಉದ್ಯೋಗ ಖಾತ್ರಿ ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಲಂಚ ನೀಡದೆ ಯಾವುದೇ ಬಿಲ್‌ಗಳು ಪಾವತಿಯಾಗುತ್ತಿಲ್ಲ ಎನ್ನುವ ಆರೋಪಗಳಿಗೆ ಇಂದಿನ ಈ ಘಟನೆ ಪುಷ್ಟಿ ನೀಡಿದಂತಾಗಿದೆ. ಮೇಲಾಧಿಕಾರಿಗಳು ಎಚ್ಚೆತ್ತುಗೊಂಡು ಭ್ರಷ್ಠಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ