AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನ ಬರಡು ಭೂಮಿಯಲ್ಲಿ ‘ಪಪ್ಪಾಯಿ’ ಬೆಳೆದು ಸೈ ಎನಿಸಿಕೊಂಡ ರೈತ; ತಿಂಗಳ ಆದಾಯವೆಷ್ಟು ಗೊತ್ತಾ?

ಗಡಿ ಜಿಲ್ಲೆ ಬೀದರ್ ಅಂದರೆ ಸಾಕು ಮೊದಲಿಗೆ ನೆನಪಿಗೆ ಬರುವುದು ಬರ. ಸದಾ ಸಂಕಷ್ಟದಲ್ಲಿ ಬದುಕು ಸಾಗಿಸುವ ಇಲ್ಲಿನ ರೈತರ ಗೋಳು ಹೇಳತೀರದು. ಜೊತೆಗೆ ಆಗಾಗ ಸಾಲದ ಬಾಧೆಗೆ ನೇಣಿಗೆ ಕೊರಳು ಕೊಡುವ ಇಲ್ಲಿನ ರೈತರ ಗೋಳು ಯಾರಿಗೂ ಕೇಳಿಸೋದೆ ಇಲ್ಲ. ಆದ್ರೆ, ಇಲ್ಲೋಬ್ಬ ರೈತ ಇಂತಹ ಹತ್ತಾರು ಸಮಸ್ಯೆಗಳ ನಡುವೆ ಬರಡು ಭೂಮಿಯಲ್ಲಿ ಪಪ್ಪಾಯಿ ಬೆಳೆದು ಸೈ ಎನಿಸಿಕೊಂಡಿದ್ದಾನೆ. ತಿಂಗಳಿಗೆ ಉತ್ತಮ ಆದಾಯ ಘಳಿಸಿ ನೆಮ್ಮಂದಿಯ ಜೀವನ ನಡೆಸುತ್ತಿದ್ದಾನೆ.

ಬೀದರ್​ನ ಬರಡು ಭೂಮಿಯಲ್ಲಿ ‘ಪಪ್ಪಾಯಿ’ ಬೆಳೆದು ಸೈ ಎನಿಸಿಕೊಂಡ ರೈತ; ತಿಂಗಳ ಆದಾಯವೆಷ್ಟು ಗೊತ್ತಾ?
ಪಪ್ಪಾಯಿ ಬೆಳೆದು ಯಶಸ್ಸು ಕಂಡ ರೈತ ಚನ್ನಬಸಪ್ಪ ಗೋರಶೇಟ್ಟಿ
ಸುರೇಶ ನಾಯಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 30, 2024 | 5:52 PM

Share

ಬೀದರ್​, ಜು.30: ಬೀದರ್(Bidar) ಜಿಲ್ಲೆ ಅಂದರೆ ಹಿಂದುಳಿದ , ಬರದನಾಡು ಎಂದು ಹೆಸರುವಾಸಿಯಾದ ಜಿಲ್ಲೆಯಾಗಿದೆ. ಈ ಭಾಗದಲ್ಲಿ ಪ್ರತಿವರ್ಷವೂ ಮಳೆ ಕಡಿಮೆ, ಜೊತೆಗೆ ಆಗಾದ ಬಿಸಿಲು ಕೂಡ ಸಾಕಷ್ಟು ಪ್ರಮಾಣದಲ್ಲಿ ಬಿಳುತ್ತದೆ. ಇನ್ನು ನೀರಿನ ಸಮಸ್ಯೆಯೂ ಇಲ್ಲಿ ಅತಿ ಹೆಚ್ಚಾಗಿ ಕಂಡು ಬರುತ್ತದೆ. ಇಲ್ಲಿನ ಬಹುತೇಕ ರೈತರು ಮಳೆಯಾಶ್ರಿತ ಕೃಷಿಯಿಂದಲೇ ಬೆಳೆ ಬೆಳೆದು ತಮ್ಮ ಬದುಕಿನ ಬಂಡಿಯನ್ನ ಸಾಗಿಸುತ್ತಾರೆ. ಈ ಭಾಗದಲ್ಲಿ ಬಾವಿ. ಬೋರವೆಲ್ ಕೊರೆಸಿದರು ನೀರು ಬರುವುದು ವಿರಳ. ಇಂತಹ ಹತ್ತಾರು ಸಮಸ್ಯೆಯ ನಡುವೆಯೂ ಇಲ್ಲೊಬ್ಬ ರೈತ, ತನ್ನ ಹೊಲದಲ್ಲಿ ಪಪ್ಪಾಯಿ(papaya) ಬೆಳೆಯನ್ನ ಬೆಳೆಯುವುದರ ಮೂಲಕ ತನ್ನ ಕುಟುಂಬವನ್ನ ಸಾಗಿಸುತ್ತಿದ್ದಾನೆ.

ಆ ಗ್ರಾಮದ ರೈತ ಚನ್ನಬಸಪ್ಪ ಗೋರಶೇಟ್ಟಿ ಎಂಬುವವರು ಹತ್ತಾರು ವರ್ಷದಿಂದ ಸೋಯಾಬಿನ್, ತೊಗರಿ, ಉದ್ದು, ಹೀಗೆ ಒಂದೆ ಬೆಳೆ ಬೆಳೆದು ಹೈರಾಣ ಆಗಿದ್ದರು. ಆದ್ರೆ, ಕೊಂಚ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿದ ರೈತ, ತನ್ನ ಹೊಲದಲ್ಲಿ ಪಪ್ಪಾಯಿ ಬೆಳೆದು ಕೈತುಂಬಾ ಹಣ ಘಳಿಸುತ್ತಿದ್ದಾನೆ. ಕಡಿಮೆ ನೀರಿದ್ದರೂ ಹನಿ ನೀರಾವರಿ ಪದ್ದತ್ತಿಯನ್ನ ಅಳವಡಿಸಿಕೊಂಡು ಪಪ್ಪಾಯಿ ಬೆಳೆಸಿದ್ದಾರೆ. ಕೈ ಕೆಸರಾದರೆ ಬಾಯಿ ಮೊಸರು ಎನ್ನುವ ಮಾತು ಈ ರೈತ ಅಕ್ಷರಶಃ ಸತ್ಯ ಮಾಡಿದ್ದಾನೆ.

ಇದನ್ನೂ ಓದಿ:ಚಾಮರಾಜನಗರ: ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ

ರೆಡ್ ಲೇಡಿ ತೈವಾನ್ ಪಪ್ಪಾಯಿ ಬೆಳೆದು ಯಶಸ್ವಿ

ಬೀದರ್ ತಾಲೂಕಿನ ಮಂದಕನಳ್ಳಿ ಗ್ರಾಮದ ಚನ್ನಬಸಪ್ಪ ಗೋರಶೇಟ್ಟಿ ಎಂಬ ರೈತ ಕಲ್ಲುಭೂಮಿಯನ್ನೇ ಕೃಷಿ ಭೂಮಿಯನ್ನಾಗಿ ಮಾಡಿ ತನ್ನ ಮೂರು ಎಕರೆಯಷ್ಟು ಪ್ರದೇಶದಲ್ಲಿ ರೆಡ್ ಲೇಡಿ ತೈವಾನ್ ಪಪ್ಪಾಯಿಯನ್ನ ಜಿಲ್ಲೆಯಲ್ಲಿ ಮೊದಲ ಸಲ ಈ ರೈತರ ಬೆಳೆಸಿ ಸೈ ಎನಿಸಿಕೊಂಡಿದ್ದಾರೆ. ಈ ರೆಡ್ ಲೇಡಿ ತೈವಾನ್ ಪಪ್ಪಾಯಿಯನ್ನ ರೈತರು ಬೆಳೆಯೋದಕ್ಕೆ ಹಿಂಜರಿಯುತ್ತಾರೆ. ಅದಕ್ಕೆ ಕಾರಣವೆಂದರೆ ಈ ತಳಿಗೆ ಜಾಸ್ತಿ ಬಿಸಿಲು ಇರಬಾರದು, ಒಂದೆ ಸಮನಾದ ವಾತಾವರಣ ಈ ಪಪ್ಪಾಯಿಗೆ ಬೇಕು. ಜೊತೆಗೆ ರೋಗವೂ ಕೂಡ ಈ ಪಪ್ಪಾಯಿ ಗಿಡಕ್ಕೆ ಬೇಗ ಅಂಟಿಕೊಳ್ಳುವುದರಿಂದಾಗಿ ರೆಡ್ ಲೇಡಿ 76 ತೈವಾನ್ ಪಪ್ಪಾಯಿಯನ್ನ ರೈತರು ಬೆಳೆಸೋದಿಲ್ಲ. ಆದರೆ. ಈ ರೈತರ ತನ್ನ ಕೃಷಿಯ ಅನುಭವದಿಂದಾಗಿ ಈ ಪಪ್ಪಾಯಿನ್ನ ಬೆಳೆಸುವುದರ ಮೂಲಕ ಸೈ ಎನಿಸಿಕೊಂಡಿದ್ದಾನೆ.

ಎರಡೇ ವಾರದಲ್ಲಿ ಎರಡು ಲಕ್ಷಕ್ಕೂ ಅಧಿಕ ಲಾಭ

ಜನವರಿಯಲ್ಲಿ ಈ ಪಪ್ಪಾಯಿಯನ್ನ ನಾಟಿ ಮಾಡಿದ್ದು, ಈಗ 15 ದಿನಗಳಿಂದ ಪಪ್ಪಾಯಿ ಕಟಾವು ಮಾಡುತ್ತಿದ್ದಾರೆ. ಎರಡೇ ವಾರದಲ್ಲಿ ಎರಡು ಲಕ್ಷಕ್ಕೂ ಅಧಿಕ ಲಾಭವನ್ನ ಮಾಡಿಕೊಂಡಿದ್ದಾರೆ. ಈ ರೈತನ ಹೊಲಕ್ಕೆ ಬಂದು ಕೆ.ಜಿಗೆ 17 ರೂಪಾಯಿಯಂತೆ ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ. ಕೆಜಿಗೆ 30 ರೂಪಾಯಿ ವರೆಗೆ ಹೋಗಬಹುದೆಂದು ರೈತ ಹೇಳುತ್ತಿದ್ದಾರೆ. ಇನ್ನೂ ಮೂರು ಎಕರೆಯಲ್ಲಿ ರೆಡ್ ಲೇಡಿ 76 ತೈವಾನ್ ಪಪ್ಪಾಯಿಯನ್ನ ನಾಟಿ ಮಾಡಿದ್ದು, 2 ಸಾವಿರದಾ 8 ನೂರು ಸಸಿಗಳನ್ನ ಬೋದಿನಿಂದಾ ಬೀದಿಗೆ 8 ಅಡಿ, ಗಿಡದಿಂದಾ ಗಿಡಕ್ಕೆ 6 ಅಡಿ ಅಂತರದಲ್ಲಿ ನಾಟಿ ಮಾಡಿದ್ದಾರೆ.

ಇದನ್ನೂ ಓದಿ:ರೆಡ್ ಲೇಡಿ ಎಂಬ ತೈವಾನ್ ಪಪ್ಪಾಯಿ ತಳಿ ಪರಿಚಯಿಸಿದ ಮಾಜಿ ಸಚಿವ ಪ್ರಗತಿಪರ ರೈತ ಹೆಚ್ ಏಕಾಂತಯ್ಯಗೆ ಗೌರವ ಡಾಕ್ಟರೇಟ್

ದೆಹಲಿ- ಹೈದರಾಬಾದ್​ನಲ್ಲಿ ತುಂಬಾ ಬೇಡಿಕೆ

ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ತಾಲೂಕಿನ ಮೋಳ್ ಗ್ರಾಮದಿಂದ ಪಪ್ಪಾಯಿ ಸಸಿಗಳನ್ನ ತಂದು ನಾಟಿ ಮಾಡಿದ್ದು, ಮೂರು ಎಕರೆಯಷ್ಟು ಜಮೀನಿನಲ್ಲಿ ಪಪ್ಪಾಯಿ ನಾಟಿ ಮಾಡಲು ಸುಮಾರು ಎರಡೂವರೆ ಲಕ್ಷ ದಷ್ಟು ಖರ್ಚಾಗಿದೆ. 3 ಎಕರೆ ಜಮೀನಿನಲ್ಲಿ ಸಾವಯವ ಕೃಷಿಯ ಪದ್ದತಿ ಮೂಲಕ ” ರೆಡ್ ಲೇಡಿ 76 ತೈವಾನ್” ಮೂಲದ ಪಪ್ಪಾಯಿ ತಳಿ ಬೆಳೆಯುತ್ತಿದ್ದಾರೆ. ಈ ತಳಿಯ ಹಣ್ಣುಗಳಿಗೆ ದೆಹಲಿ- ಹೈದರಾಬಾದ್​ನಲ್ಲಿ ತುಂಬಾ ಬೇಡಿಕೆ ಇದೆ. ಹೀಗಾಗಿ ಇವರು ತಾವು ಬೆಳೆದ ಪಪ್ಪಾಯಿ ಬೆಳೆಯನ್ನು ಮಾರುಕಟ್ಟೆಗಳಿಗೆ ಕಳಿಹಿಸಿ ಉತ್ತಮ ಲಾಭ ಪಡೆಯುತ್ತಿದ್ದಾರೆ.

ಒಟ್ಟಿನಲ್ಲಿ ರೈತ ಚನ್ನಬಸಪ್ಪ ಗೋರಶೇಟ್ಟಿ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ. ಈ ಕುರಿತು ಮಾತನಾಡಿದ ರೈತ ಚನ್ನಬಸಪ್ಪ,  ‘ಈಗಾಗಲೇ 4 ಬಾರಿ ಕಟಾವುಗೆ ಎಕರೆಗೆ 30 ರಿಂದ 35 ಟನ್ ಇಳುವರಿ ಬಂದಿದ್ದು, 1 ಎಕರೆಗೆ ಸದ್ಯ 70 ಸಾವಿರ ದಂತೆ 2 ಲಕ್ಷಕ್ಕೂ ಅಧಿಕ ಆದಾಯ ಬಂದಿದೆ ಎಂದು ಹೇಳುತ್ತಿದ್ದಾರೆ. ಎಲ್ಲ ರೈತರು ಪ್ರಯೋಗಾತ್ಮಕ ಕೃಷಿ, ಬೆಳೆ ಬೆಳೆಯಬೇಕು. ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಉತ್ತಮ ಆದಾಯ ಗಳಿಸುವ ತೋಟಗಾರಿಕೆ ಬೆಳೆ ಬೆಳೆದು, ಎಲ್ಲ ರೈತರು ಯಶಸ್ಸು ಆಗಬೇಕು ಎನ್ನುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!