AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬದ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ

ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬದ ನಡುವೆ ಗಲಾಟೆಯಾಗಿ ಸಿದ್ದರಾಮಪ್ಪ ಎನ್ನುವ 65 ವರ್ಷದ ಮುದುಕನನ್ನ ಕೊಲೆ ಮಾಡಲಾಗಿದೆ. ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಬೀದರ್: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬದ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ
ಮೃತ ಸಿದ್ದರಾಮಪ್ಪ(65)
ಕಿರಣ್ ಹನುಮಂತ್​ ಮಾದಾರ್
|

Updated on: Apr 05, 2023 | 3:01 PM

Share

ಬೀದರ್​: ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬದ ನಡುವೆ ಗಲಾಟೆಯಾಗಿ ಸಿದ್ದರಾಮಪ್ಪ ಎನ್ನುವ 65 ವರ್ಷದ ಮುದುಕನನ್ನ ಕೊಲೆ ಮಾಡಲಾಗಿದೆ. ಎರಡು ಕುಟುಂಬಗಳ ಗಲಾಟೆಯಲ್ಲಿ ಸಿದ್ದರಾಮಪ್ಪನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾರೆ. ಬಳಿಕ ಗಾಯಗೊಂಡ ಅಜ್ಜನನ್ನ ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಆತ ಮೃತಪಟ್ಟಿದ್ದಾನೆ. ಇನ್ನು ಘಟನೆ ಕುರಿತು ಐವರ ವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಐವರು ಪರಾರಿಯಾಗಿದ್ದಾರೆ.

ಗೃಹಿಣಿ ಅನುಮಾನಾಸ್ಪದ ಸಾವು; ಪತಿ ವಿರುದ್ದ ಹತ್ಯೆ ಆರೋಪ

ಚಿತ್ರದುರ್ಗ: ತಾಲೂಕಿನ ಗಾರೇಹಟ್ಟಿ ಗ್ರಾಮದಲ್ಲಿ ಗೃಹಿಣಿ ಪೂರ್ಣಿಮಾ(22) ಎಂಬುವವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪತಿ ಚಿತ್ರಲಿಂಗಪ್ಪ ವಿರುದ್ಧ ಹತ್ಯೆ ಆರೋಪ ಕೇಳಿ ಬಂದಿದೆ. 1 ವರ್ಷದ ಹಿಂದೆ ಚಿತ್ರಲಿಂಗಪ್ಪ ಹಾಗೂ ಪೂರ್ಣಿಮಾ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ಬೇರೆ ಜಾತಿ ಎಂಬ ಕಾರಣಕ್ಕೆ ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನ ಹತ್ಯೆ ಮಾಡಲಾಗಿದೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ಚಿತ್ರದುರ್ಗ ಮಹಿಳಾ‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಬೇಸಿಗೆ ರಜೆ ನಿಮಿತ್ತ ಅಜ್ಜಿ ಮನೆಗೆ ಬಂದಿದ್ದ ಬಾಲಕ ಶವವಾಗಿ ಪತ್ತೆ: ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ

ಪತ್ನಿಯನ್ನು ಕೊಂದು ಶವವನ್ನು ಯಮುನಾ ನದಿಯಲ್ಲಿ ಎಸೆದಿದ್ದ ಪತಿ ಅರೆಸ್ಟ್

ನೊಯಿಡಾ: ಅನೈತಿಕ ಸಂಬಂಧ ಆರೋಪಿಸಿ ಪತಿಯೊಬ್ಬ ತನ್ನ ಪತ್ನಿಯನ್ನ ಕೊಲೆ ಮಾಡಿ ಇಟ್ಟಿಗೆಗಳಿಂದ ಕಟ್ಟಿ ಯಮುನಾ ನದಿಗೆ ಎಸೆದ ಘಟನೆ ನಡೆದಿದೆ. ಹೌದು ಜೇವರ್ ಪೊಲೀಸ್ ಠಾಣೆ ವ್ಯಾಪ್ತಿಯ ಛತಂಗಾ ಖುರ್ದ್ ಗ್ರಾಮದಲ್ಲಿ ಶ್ರವಣ್ ಮತ್ತು ಉಷಾ ದಂಪತಿಗಳು ವಾಸಿಸುತ್ತಿದ್ದರು. ಸೋಮವಾರ(ಏ.3) ಶ್ರವಣ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಮತ್ತು ಅದೇ ದಿನ ಅಲಿಘರ್‌ನಲ್ಲಿ ಇರುವ ಉಷಾ ಅವರ ಕುಟುಂಬಸ್ಥರು ಕೂಡ ಆಕೆಯ ಪತಿ ಶ್ರವಣ್​ ಉಷಾಳನ್ನ ಕೊಂದಿದ್ದಾರೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಷಾಳ ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪತಿ ಶ್ರವಣ್​ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಹೌದು ಭಾನುವಾರದ ಮಧ್ಯರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಶವವನ್ನು ಗೋಣಿಚೀಲದಲ್ಲಿ ಹಾಕಿ ಅದರೊಳಗೆ ಅನುಮಾನ ಬರದಂತೆ ಕೆಲವು ಇಟ್ಟಿಗೆಗಳನ್ನ ತುಂಬಿ ಯಮುನಾ ನದಿಯಲ್ಲಿ ಎಸೆದಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:ಕೊಲೆ ಪ್ರಕರಣದ ಅಪರಾಧಿಯೊಂದಿಗೆ ವಿವಾಹವಾಗಲು ಬಯಸಿದ ಯುವತಿ; ಪ್ರಿಯಕರನಿಗೆ ಪೆರೋಲ್ ನೀಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್

ದಿನಗೂಲಿಗಾರನಾದ ಶ್ರವಣ್ ತನ್ನ ಹೆಂಡತಿಯು ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಆರೋಪಿಸಿದ್ದು, ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ್ಗೆ ಜಗಳವಾಗುತ್ತಿದ್ದು, ಜಗಳ ವಿಕೋಪಕ್ಕೆ ತಿರುಗಿ ಭಾನುವಾರ ರಾತ್ರಿ ಈ ಕೃತ್ಯ ಎಸೆಗಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ. ಈ ಕುರಿತು ಮಂಗಳವಾರ ಜೇವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡ ಯಮುನಾ ನದಿಯಿಂದ ಮೃತದೇಹವನ್ನು ಹೊರತೆಗೆಯಲು ತೊಡಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ