AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ಬಸವಕಲ್ಯಾಣದಲ್ಲಿ ಮಠಾಧೀಶರಿಂದ ಸಭೆ: 14 ಸ್ಥಳಗಳಲ್ಲಿ ಸಾವಿರಕ್ಕೂ ಅಧಿಕ ಪೊಲೀಸರಿಂದ ಬಿಗಿ ಭದ್ರತೆ

ಸಭೆಯಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗುವ ಸಾಧ್ಯತೆಯಿದ್ದು, ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪಕ್ಕಾಗಿ ಹೋರಾಟ ನಡೆಸಲು ಶ್ರೀಗಳು ತಯಾರಿ ನಡೆಸಿಕೊಳ್ಳುತ್ತಾರೆ.

ಬೀದರ್ ಬಸವಕಲ್ಯಾಣದಲ್ಲಿ ಮಠಾಧೀಶರಿಂದ ಸಭೆ: 14 ಸ್ಥಳಗಳಲ್ಲಿ ಸಾವಿರಕ್ಕೂ ಅಧಿಕ ಪೊಲೀಸರಿಂದ ಬಿಗಿ ಭದ್ರತೆ
ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ಆಯೋಜಿಸಲಾಗಿದೆ
TV9 Web
| Edited By: sandhya thejappa|

Updated on:Jun 12, 2022 | 11:15 AM

Share

ಬೀದರ್: ಬಸವಕಲ್ಯಾಣದಲ್ಲಿ (Basavakalyana) ಇಂದು (ಜೂನ್ 12) ‘ಮಠಾಧೀಶರ ನಡೆ ಮೂಲ ಅನುಭವ ಮಂಟಪ ಕಡೆ’ ಸಭೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣದಿಂದ ಶ್ರೀಗಳು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಸಭೆಯಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗುವ ಸಾಧ್ಯತೆಯಿದ್ದು, ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪಕ್ಕಾಗಿ ಹೋರಾಟ ನಡೆಸಲು ಶ್ರೀಗಳು ತಯಾರಿ ನಡೆಸಿಕೊಳ್ಳುತ್ತಾರೆ. ಸಭೆ (Meeting) ನಡೆಯುವುದರಿಂದ ತೇರು ಮೈದಾನ ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ತೇರು ಮೈದಾನದ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಮಠಾಧೀಶರ ಸಮಾವೇಶ ನಡೆಯಲಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಎಸ್​ಪಿ, ಎಎಸ್​ಪಿ, ಮೂವರು ಡಿವೈಎಸ್​ಪಿ, ಕೆಎಸ್ಆರ್​ಪಿ ತುಕಡಿ, ಡಿಎಆರ್ ತುಕಡಿ ಸೇರಿ ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು ಸಮಾವೇಶಕ್ಕೆ ಆಗಮಿಸುವವರಿಗೆ ಮೈದಾನದಲ್ಲೇ ಊಟದ ವ್ಯವಸ್ಥೆ ಇರುತ್ತದೆ.

ಹತ್ತು ಸಾವಿರ ಜನರಿಗೆ ಆಗುವಷ್ಟು ಊಟದ ವ್ಯವಸ್ಥೆ ಇದೆ. ಗೋದಿ ಹುಗ್ಗಿ, ರೊಟ್ಟಿ, ಹಿಟ್ಟಿನ ಪಲ್ಲೆ, ಅನ್ನ, ಸಾರು ಸಿದ್ಧವಾಗುತ್ತಿದೆ. ಐವತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಅಡುಗೆ ತಯಾರಿಯಾಗುತ್ತಿದೆ. ಮುಂಜಾನೆಯಿಂದ ಬಾಣಸಿಗರು ಅಡುಗೆ ಮಾಡುತ್ತಿದ್ದಾರೆ. ಮಠಾಧೀಶರ ಜೊತೆ ಸಾರ್ವಜನಿಕರು ಕೂಡಾ ಬರುತ್ತಿರುವ ಹಿನ್ನೆಲೆ ಊಟದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ
Image
ಮೈಸೂರಿನಲ್ಲಿ ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಆನೆ ಸಾವು
Image
ಉತ್ತರ ಪ್ರದೇಶದ ಕಾನ್​ಪುರ, ಸಹರಾನ್​ಪುರಗಳಲ್ಲಿ ಬೀದಿಗಿಳಿದ ಬುಲ್​ಡೋಜರ್​ಗಳು: ಹಿಂಸಾಚಾರಕ್ಕಿಳಿದವರ ಆಸ್ತಿ ತೆರವಿಗೆ ಮುಂದಾದ ಸರ್ಕಾರ
Image
ರಷ್ಯಾ ದಾಳಿ ಅರಂಭಿಸಿದಾಗಿನಿಂದ ಇಲ್ಲಿಯವರೆಗೆ ಕನಿಷ್ಟ 287 ಮಕ್ಕಳು ಬಲಿಯಾಗಿದ್ದಾರೆ: ಉಕ್ರೇನ್
Image
Autobiography : ಆಧುನಿಕ ಶಕುಂತಲಾ ಕಥನ; ಆ ಪುಣ್ಯಭೂಮಿಯ ಸ್ಪರ್ಶವೂ, ಹೆಚ್ಚೇ ಹೊಳಪಿಟ್ಟ ನನ್ನ ಬಾಲ್ಯವೂ

ಇದನ್ನೂ ಓದಿ: ಉತ್ತರ ಪ್ರದೇಶದ ಕಾನ್​ಪುರ, ಸಹರಾನ್​ಪುರಗಳಲ್ಲಿ ಬೀದಿಗಿಳಿದ ಬುಲ್​ಡೋಜರ್​ಗಳು: ಹಿಂಸಾಚಾರಕ್ಕಿಳಿದವರ ಆಸ್ತಿ ತೆರವಿಗೆ ಮುಂದಾದ ಸರ್ಕಾರ

ಬೃಹತ್ ವೇದಿಕೆ ಸಜ್ಜು: ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಜ್ಜಾಗಿದೆ. ಸಾವಿರಕ್ಕೂ ಹೆಚ್ಚು ಜನ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸಂಘಟಕರು ಸಮಾವೇಶಕ್ಕೆ ಬರುವವರಿಗೆ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ ಮಾಡಿದ್ದಾರೆ  ವೇದಿಕೆ ಮೇಲೆ ಎಲ್​ಸಿಡಿ ಸ್ಕ್ರೀನ್ ಕೂಡಾ ಅಳವಡಿಕೆ ಮಾಡಿದ್ದಾರೆ.

ಪೀರ್ ಪಾಷಾ ದರ್ಗಾವೇ ಮೂಲ ಅನುಭವ ಮಂಟಪ ಅಂತ ಕೆಲ ಮಠಾಧೀಶರು ಹೇಳುತ್ತಿದ್ದಾರೆ. ಹೀಗಾಗಿ ಪೀರ್ ಪಾಷಾ ದರ್ಗಾವನ್ನು ಸರ್ಕಾರ ವಶ ಪಡಿಸಿಕೊಳ್ಳಬೇಕು ಅಂತ ಆಗ್ರಹಿಸುತ್ತಿರುವ ಸ್ವಾಮೀಜಿಗಳು, ಹೋರಾಟಕ್ಕೆ ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 am, Sun, 12 June 22

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!