AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ಬಸವಕಲ್ಯಾಣದಲ್ಲಿ ಮಠಾಧೀಶರಿಂದ ಸಭೆ: 14 ಸ್ಥಳಗಳಲ್ಲಿ ಸಾವಿರಕ್ಕೂ ಅಧಿಕ ಪೊಲೀಸರಿಂದ ಬಿಗಿ ಭದ್ರತೆ

ಸಭೆಯಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗುವ ಸಾಧ್ಯತೆಯಿದ್ದು, ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪಕ್ಕಾಗಿ ಹೋರಾಟ ನಡೆಸಲು ಶ್ರೀಗಳು ತಯಾರಿ ನಡೆಸಿಕೊಳ್ಳುತ್ತಾರೆ.

ಬೀದರ್ ಬಸವಕಲ್ಯಾಣದಲ್ಲಿ ಮಠಾಧೀಶರಿಂದ ಸಭೆ: 14 ಸ್ಥಳಗಳಲ್ಲಿ ಸಾವಿರಕ್ಕೂ ಅಧಿಕ ಪೊಲೀಸರಿಂದ ಬಿಗಿ ಭದ್ರತೆ
ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ಆಯೋಜಿಸಲಾಗಿದೆ
TV9 Web
| Edited By: |

Updated on:Jun 12, 2022 | 11:15 AM

Share

ಬೀದರ್: ಬಸವಕಲ್ಯಾಣದಲ್ಲಿ (Basavakalyana) ಇಂದು (ಜೂನ್ 12) ‘ಮಠಾಧೀಶರ ನಡೆ ಮೂಲ ಅನುಭವ ಮಂಟಪ ಕಡೆ’ ಸಭೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣದಿಂದ ಶ್ರೀಗಳು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಸಭೆಯಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗುವ ಸಾಧ್ಯತೆಯಿದ್ದು, ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪಕ್ಕಾಗಿ ಹೋರಾಟ ನಡೆಸಲು ಶ್ರೀಗಳು ತಯಾರಿ ನಡೆಸಿಕೊಳ್ಳುತ್ತಾರೆ. ಸಭೆ (Meeting) ನಡೆಯುವುದರಿಂದ ತೇರು ಮೈದಾನ ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ತೇರು ಮೈದಾನದ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಮಠಾಧೀಶರ ಸಮಾವೇಶ ನಡೆಯಲಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಎಸ್​ಪಿ, ಎಎಸ್​ಪಿ, ಮೂವರು ಡಿವೈಎಸ್​ಪಿ, ಕೆಎಸ್ಆರ್​ಪಿ ತುಕಡಿ, ಡಿಎಆರ್ ತುಕಡಿ ಸೇರಿ ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು ಸಮಾವೇಶಕ್ಕೆ ಆಗಮಿಸುವವರಿಗೆ ಮೈದಾನದಲ್ಲೇ ಊಟದ ವ್ಯವಸ್ಥೆ ಇರುತ್ತದೆ.

ಹತ್ತು ಸಾವಿರ ಜನರಿಗೆ ಆಗುವಷ್ಟು ಊಟದ ವ್ಯವಸ್ಥೆ ಇದೆ. ಗೋದಿ ಹುಗ್ಗಿ, ರೊಟ್ಟಿ, ಹಿಟ್ಟಿನ ಪಲ್ಲೆ, ಅನ್ನ, ಸಾರು ಸಿದ್ಧವಾಗುತ್ತಿದೆ. ಐವತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಅಡುಗೆ ತಯಾರಿಯಾಗುತ್ತಿದೆ. ಮುಂಜಾನೆಯಿಂದ ಬಾಣಸಿಗರು ಅಡುಗೆ ಮಾಡುತ್ತಿದ್ದಾರೆ. ಮಠಾಧೀಶರ ಜೊತೆ ಸಾರ್ವಜನಿಕರು ಕೂಡಾ ಬರುತ್ತಿರುವ ಹಿನ್ನೆಲೆ ಊಟದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ
Image
ಮೈಸೂರಿನಲ್ಲಿ ಉದ್ದನೆಯ ದಂತಗಳಿಂದ ಪ್ರಖ್ಯಾತವಾಗಿದ್ದ ಆನೆ ಸಾವು
Image
ಉತ್ತರ ಪ್ರದೇಶದ ಕಾನ್​ಪುರ, ಸಹರಾನ್​ಪುರಗಳಲ್ಲಿ ಬೀದಿಗಿಳಿದ ಬುಲ್​ಡೋಜರ್​ಗಳು: ಹಿಂಸಾಚಾರಕ್ಕಿಳಿದವರ ಆಸ್ತಿ ತೆರವಿಗೆ ಮುಂದಾದ ಸರ್ಕಾರ
Image
ರಷ್ಯಾ ದಾಳಿ ಅರಂಭಿಸಿದಾಗಿನಿಂದ ಇಲ್ಲಿಯವರೆಗೆ ಕನಿಷ್ಟ 287 ಮಕ್ಕಳು ಬಲಿಯಾಗಿದ್ದಾರೆ: ಉಕ್ರೇನ್
Image
Autobiography : ಆಧುನಿಕ ಶಕುಂತಲಾ ಕಥನ; ಆ ಪುಣ್ಯಭೂಮಿಯ ಸ್ಪರ್ಶವೂ, ಹೆಚ್ಚೇ ಹೊಳಪಿಟ್ಟ ನನ್ನ ಬಾಲ್ಯವೂ

ಇದನ್ನೂ ಓದಿ: ಉತ್ತರ ಪ್ರದೇಶದ ಕಾನ್​ಪುರ, ಸಹರಾನ್​ಪುರಗಳಲ್ಲಿ ಬೀದಿಗಿಳಿದ ಬುಲ್​ಡೋಜರ್​ಗಳು: ಹಿಂಸಾಚಾರಕ್ಕಿಳಿದವರ ಆಸ್ತಿ ತೆರವಿಗೆ ಮುಂದಾದ ಸರ್ಕಾರ

ಬೃಹತ್ ವೇದಿಕೆ ಸಜ್ಜು: ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಜ್ಜಾಗಿದೆ. ಸಾವಿರಕ್ಕೂ ಹೆಚ್ಚು ಜನ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸಂಘಟಕರು ಸಮಾವೇಶಕ್ಕೆ ಬರುವವರಿಗೆ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ ಮಾಡಿದ್ದಾರೆ  ವೇದಿಕೆ ಮೇಲೆ ಎಲ್​ಸಿಡಿ ಸ್ಕ್ರೀನ್ ಕೂಡಾ ಅಳವಡಿಕೆ ಮಾಡಿದ್ದಾರೆ.

ಪೀರ್ ಪಾಷಾ ದರ್ಗಾವೇ ಮೂಲ ಅನುಭವ ಮಂಟಪ ಅಂತ ಕೆಲ ಮಠಾಧೀಶರು ಹೇಳುತ್ತಿದ್ದಾರೆ. ಹೀಗಾಗಿ ಪೀರ್ ಪಾಷಾ ದರ್ಗಾವನ್ನು ಸರ್ಕಾರ ವಶ ಪಡಿಸಿಕೊಳ್ಳಬೇಕು ಅಂತ ಆಗ್ರಹಿಸುತ್ತಿರುವ ಸ್ವಾಮೀಜಿಗಳು, ಹೋರಾಟಕ್ಕೆ ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 am, Sun, 12 June 22

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ