AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನ ಗುರುದ್ವಾರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬಂತು ಬೆದರಿಕೆ ಸಂದೇಶ!

ನಿನ್ನೆಯಷ್ಟೆ ಬೆಂಗಳೂರಿನ 40 ಶಾಲೆಗಳಿಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆಯ ಇ-ಮೇಲ್​ಗಳು ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಬೀದರ್‌ನ ಅಮೃತ ಕುಂಡ ಯಾತ್ರಿಕ ನಿವಾಸದಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ. ವಿಷಯ ತಿಳಿದ ಪೊಲೀಸರು ಗುರುದ್ವಾರವನ್ನು ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ.

ಬೀದರ್​ನ ಗುರುದ್ವಾರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬಂತು ಬೆದರಿಕೆ ಸಂದೇಶ!
ಗುರುದ್ವಾರ
ಸುರೇಶ ನಾಯಕ
| Edited By: |

Updated on:Jul 19, 2025 | 11:47 AM

Share

ಬೀದರ್​, ಜುಲೈ 19: ಕಳೆದ ಕೆಲ ತಿಂಗಳಿಂದ ಕರ್ನಾಟಕದ (Karnataka) ಹಲವೆಡೆ ಕಿಡಿಗೇಡಿಗಳಿಂದ ಹುಸಿ ಬಾಂಬ್​ ಬೆದರಿಕೆಯ ಇ-ಮೇಲ್​ಗಳು (Bomb threat) ಬಂದಿವೆ. ನಿನ್ನೆ (ಶುಕ್ರವಾರ)ದಂದು ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು. ಇದೀಗ ಅದರ ಬೆನ್ನಲ್ಲೇ ನಗರದ ಗುರುದ್ವಾರ ಅಮೃತ ಕುಂಡ ಯಾತ್ರಿಕ ನಿವಾಸದಲ್ಲಿ ಸ್ಫೋಟ ಆಗುತ್ತೆಂದು ಕಿಡಿಗೇಡಿಗಳಿಂದ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿದೆ.

ವಕೀಲ ಅಲೀಂ ಅಲ್ ಬುಕಾರಿ ಎಂಬ ವ್ಯಕ್ತಿಯಿಂದ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್​ ಕಳುಹಿಸಲಾಗಿದೆ. ಮೇಲ್ ಬಂದಿರುವ ಕುರಿತು ಪೊಲೀಸ್ ಇಲಾಖೆಗೆ ಗುರುದ್ವಾರ ಆಡಳಿತ ಮಂಡಳಿ‌ ಮಾಹಿತಿ ನೀಡಿದೆ.

ಇದನ್ನೂ ಓದಿ: ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ

ಇದನ್ನೂ ಓದಿ
Image
ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್
Image
ಹಾಸನ: ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ
Image
ಪಾಸ್​​ಪೋರ್ಟ್​ ಕಚೇರಿ, ಸಿಎಂ ಮನೆಗೆ ಬಾಂಬ್ ಇಡುವುದಾಗಿ ಬೆದರಿಕೆ ಸಂದೇಶ
Image
ಬೆಂಗಳೂರಿನ ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ ಸಂದೇಶ

ಸುದ್ದಿ ತಿಳಿಯುತ್ತಿದ್ದಂತೆ ನಿನ್ನೆ ಗುರುದ್ವಾರದಲ್ಲಿ ಎಸ್​ಪಿ, ಡಿವೈಎಸ್​ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿ 30ಕ್ಕೂ ಹೆಚ್ಚು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕಾಡ್ ಸೇರಿ ವಿಶೇಷ ತಂಡದಿಂದ ಪರಿಶೀಲನೆ ಮಾಡಲಾಗಿದ್ದು, ಯಾವುದೇ ರೀತಿ ಸ್ಫೋಟಕ ಪದಾರ್ಥಗಳು ಪತ್ತೆಯಾಗಿಲ್ಲ.

ಬೆದರಿಕೆ ಇ-ಮೇಲ್​​ನಲ್ಲಿ ಏನಿದೆ?

ತಮಿಳುನಾಡಿನ ಡ್ರಗ್ಸ್ ಸ್ಮಗ್ಲರ್ ಜಾಫರ್ ಸಾದಿಕ್ ಕೃತಿಗಾ ಉದಯನಿಧಿ ಹೆಸರನ್ನು ಬಾಂಬ್​ ಬೆದರಿಕೆ ಇ-ಮೇಲ್​ನಲ್ಲಿ​ ಉಲ್ಲೇಖಿಸಲಾಗಿದೆ. ನಿವೇತಾ ಪೇತುರಾಜ್- ಉದಯನಿಧಿ ಪ್ರಕರಣಗಳು ಬೇರೇಡೆ ಸೆಳೆಯಲು ಸ್ಫೋಟಿಸಲಾಗುತ್ತಿದೆ. ಪಾಕ್​ನ ಐಎಸ್ಐ ಸೆಲ್ಸ್​ಗಳು ಬಾಂಬ್ ಸ್ಫೋಟದ ಸಂಚು ರೂಪಿಸಿವೆ. ಭಕ್ತರ ಮೈಕ್ರೋ ಮೊಬೈಲ್ ಫೋನ್ ಸಿಗ್ನಲ್ ಬಳಸಿ ಸ್ಫೋಟಗೊಳಿಸಲಿದ್ದಾರೆಂದು ಉಲ್ಲೇಖಿಸಲಾಗಿದೆ.

ಬೆಂಗಳೂರಿನ 40 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ: ಪೋಷಕರು, ಮಕ್ಕಳಲ್ಲಿ ಆತಂಕ

ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು. roadkill333@atomicmail.io ಐಡಿಯಿಂದ ಬಂದಿದ್ದ ಇಮೇಲ್​​ನಲ್ಲಿ, ಸ್ಫೋಟಕಗಳನ್ನು ಕಪ್ಪು ಬಣ್ಣದ ಪ್ಲಾಸ್ಟಿಕ್ ಚೀಲಗಳಲ್ಲಿ ಇರಿಸಿದ್ದೇನೆ. ಪೋಷಕರ ಗೋಳಾಟ, ಮಕ್ಕಳ ನರಳಾಟ ನೋಡ್ಬೇಕು. ಸ್ಫೋಟದ ಸಾವಿನ ದೃಶ್ಯ ನೋಡಿದ ಬಳಿಕ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಸಂದೇಶ ಬಂದಿತ್ತು.

ಇದನ್ನೂ ಓದಿ: ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುತ್ತೇವೆ ಎಂದ ದುಷ್ಕರ್ಮಿಗಳು

ಇದನ್ನ ಓದಿ ಆತಂಕಕ್ಕೆ ಒಳಗಾಗಿದ್ದ ಶಾಲಾ ಸಿಬ್ಬಂದಿ ಪೊಲೀಸರಿಗೆ ಕರೆಮಾಡಿದ್ದರು. ಕೆಲ ನಿಮಿಷಗಳಲ್ಲೇ ಪೊಲೀಸರು, ಬಾಂಬ್​​ ಸ್ಕ್ವಾಡ್​​​ ಶಾಲೆಗಳಿಗೆ ಬಂದಿತ್ತು. ಶಾಲೆಗಳ ಮೂಲೆ ಮೂಲೆಗಳನ್ನ ಜಾಲಾಡಿದರೂ ಎಲ್ಲಿಯೂ ಬಾಂಬ್​ ಪತ್ತೆಯಾಗಿಲ್ಲ. ಕೊನೆಗೆ ಇದೊಂದು ಸುಳ್ಳು ಸಂದೇಶ ಅಂತ ನಿಟ್ಟುಸಿರು ಬಿಟ್ಟಿದ್ದರು.

ಸಿಎಂ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಹುಸಿಬಾಂಬ್ ಕರೆ ತಡೆಗಟ್ಟಲು ನೂತನ ಕಾನೂನು ಜಾರಿ ಮಾಡುತ್ತೇವೆ ಎಂದಿದ್ದರು. ಜೊತೆಗೆ ಸುಳ್ಳು ಹೇಳಿಕೆ, ಪ್ರಚೋದನಾ ಭಾಷಣ ತಡೆಗೂ ಕಾನೂನು ಜಾರಿ ತರೋದಾಗಿ ತಿಳಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:45 am, Sat, 19 July 25

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್