AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agnipath Sena Bharti Rally: ಬೀದರ್ ಜಿಲ್ಲೆಯಲ್ಲಿ ಇಂದಿನಿಂದ ಅಗ್ನಿಪಥ್ ಸೇನಾ ಭರ್ತಿ ರ‍್ಯಾಲಿ

Agnipath Entry: ಬೀದರ್ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನೇಮಕಾತಿ ರ‍್ಯಾಲಿ ನಡೆಯಲಿದೆ. ಇದಕ್ಕೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಒಟ್ಟು 70,357 ಯುವಕರು ನೊಂದಣಿ ಮಾಡಿಕೊಂಡಿದ್ದಾರೆ.

Agnipath Sena Bharti Rally: ಬೀದರ್ ಜಿಲ್ಲೆಯಲ್ಲಿ ಇಂದಿನಿಂದ ಅಗ್ನಿಪಥ್ ಸೇನಾ ಭರ್ತಿ ರ‍್ಯಾಲಿ
ಬೀದರ್ ಜಿಲ್ಲೆಯಲ್ಲಿ ಇಂದಿನಿಂದ ಅಗ್ನಿಪಥ್ ಸೇನಾ ಭರ್ತಿ ರ‍್ಯಾಲಿ
TV9 Web
| Edited By: |

Updated on:Dec 05, 2022 | 9:20 AM

Share

ಬೀದರ್: ಇಂದಿನಿಂದ ಡಿಸೆಂಬರ್ 22 ರವರೆಗೆ ಬೀದರ್ ನಲ್ಲಿ ಅಗ್ನಿಪಥ್ ಸೇನಾ ಭರ್ತಿ ರ‍್ಯಾಲಿ ನಡೆಯಲಿದೆ. ಇದರಲ್ಲಿ ರಾಯಚೂರು, ಕೊಪ್ಪಳ, ಕಲ್ಬುರ್ಗಿ, ಯಾದಗಿರಿ, ಬೆಳಗಾವಿ, ಬೀದರ್ ಯುವಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬೀದರ್ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನೇಮಕಾತಿ ರ‍್ಯಾಲಿ ನಡೆಯಲಿದೆ. ಇದಕ್ಕೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಒಟ್ಟು 70,357 ಯುವಕರು ನೊಂದಣಿ ಮಾಡಿಕೊಂಡಿದ್ದಾರೆ.

ಸಾಮಾನ್ಯ ಕೆಡರ್, ಟೆಕ್ನಿಕಲ್, ಕ್ಲರ್ಕ್, ಹೌಸ್ ಕಿಪರ್, ಬಾರ್ಬರ್, ಕುಕ್ ಸೈನಿಕ ಹುದ್ದೆಗಳ ನೇಮಕಾತಿಗಾಗಿ ಈ ರ‍್ಯಾಲಿ ನಡೆಯಲಿದೆ. ಅಗ್ನಿಪಥ್ ಯೋಜನೆಯಡಿ ನಡೆಯುತ್ತಿರುವ ಮೊದಲ ರ‍್ಯಾಲಿ ಇದಾಗಿದ್ದು, ಸಾಮಾನ್ಯ ಕೆಡರ್‌ನ 63,825 ಮತ್ತು ಇತರೆ ಕೆಡರ್‌ಗಳ 6550 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ಸೇನೆ ನೇಮಕಾತಿ ವಿಭಾಗದ ಅಧಿಕಾರಿಗಳು ಕ್ರೀಡಾಂಗಣವನ್ನು ಎರಡು ದಿನಗಳ ಹಿಂದೆಯೇ ತಮ್ಮ ಸುಪರ್ದಿಗೆ ಪಡೆದು, ಶಿಸ್ತು ಮತ್ತು ವ್ಯವಸ್ಥಿತವಾಗಿ ರ‍್ಯಾಲಿ ನಡೆಸುತ್ತಿದ್ದು ಇಂದು ರಾಯಚೂರು ಜಿಲ್ಲೆಯ ಯುವಕರಿಗೆ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.

ಅಗ್ನಿಪಥ್ ನೇಮಕಾತಿ ರ‍್ಯಾಲಿಯಲ್ಲಿ ಅತಿ ಹೆಚ್ಚು ಬೆಳಗಾವಿ ಜಿಲ್ಲೆಯಿಂದ 50,646 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಇನ್ನುಳಿದಂತೆ ಬೀದರ 2772, ರಾಯಚೂರು 2049, ಕೊಪ್ಪಳ 3349, ಕಲ್ಬುರ್ಗಿ 3856 ಮತ್ತು ಯಾದಗಿರಿ ಜಿಲ್ಲೆಯಿಂದ 1153 ಅಭ್ಯರ್ಥಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ರಾಯಚೂರಿನಿಂದ ಬಂದಿದ್ದವರು ಸ್ಥಳೀಯ ನಿವಾಸಿ ಪ್ರಮಾಣ ಪತ್ರ ತರದಂತಾ ಶೇಕಡಾ 50 ರಷ್ಟು ಯುವಕರು ರ‍್ಯಾಲಿಯಿಂದ ಔಟ್ ಆಗಿದ್ದಾರೆ.

Agneepath sena Bharti

ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ

ನಿತ್ಯ ಕನಿಷ್ಠ 4 ಸಾವಿರದಿಂದ ಗರಿಷ್ಠ 4,500 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಬ್ಯಾರಿಕೇಡ್, ಶಾಮಿಯಾನ, ಕುಡಿಯುವ ನೀರು, ಶೌಚಾಲಯ ಹಾಗೂ ಸೇನಾ ನೇಮಕಾತಿ ರ‍್ಯಾಲಿಗೆ ಬೇಕಾಗುವ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ಶಿಕ್ಷಣ ಮತ್ತು ಕಂದಾಯ ಇಲಾಖೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ. ಹಾಘೂ ನಗರಸಭೆ, ಲೋಕೋಪಯೋಗಿ, ಕ್ರೀಡಾ, ಪೊಲೀಸ್ ಇಲಾಖೆ, ಶಿಕ್ಷಣ ಮತ್ತು ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ಸಹ ಸೇನಾ ನೇಮಕಾತಿ ರ‍್ಯಾಲಿಗೆ ಸಹಕಾರ ನೀಡಿವೆ.

ಗುರುದ್ವಾರದ ವತಿಯಿಂದ ರ‍್ಯಾಲಿಗೆ ಬರುವ ಅಭ್ಯರ್ಥಿಗಳಿಗಾಗಿ ಉಚಿತ ಊಟದ ವ್ಯವಸ್ಥೆ. ಕಡಿಮೆ ವೆಚ್ಚದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಡಿಸೆಂಬರ್ 5ರ ಬೆಳಿಗ್ಗೆ 3 ಗಂಟೆಯಿಂದ ಅಭ್ಯರ್ಥಿಗಳು ಕ್ರೀಡಾಂಗಣಕ್ಕೆ ಬರಲಿದ್ದಾರೆ. ಬೆಳಿಗ್ಗೆ 6ಕ್ಕೆ ರನ್ನಿಂಗ್ ಆರಂಭವಾಗಿ 8 ಗಂಟೆಗೆ ಮುಕ್ತಾಯವಾಗಲಿದೆ. ನಂತರ ಇತರೆ ಪ್ರಕ್ರಿಯೆಗಳು ನಡೆಯಲಿವೆ.

Agneepath sena Bharti

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:13 am, Mon, 5 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?