AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಇತ್ತ ತುಮಕೂರಿನಲ್ಲಿ ವಿಎಒ ಭುವನಾ ಸಾವಿಗೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಕಂದಾಯ ನೌಕರರ ಪ್ರತಿಭಟನೆ ತೀವ್ರಗೊಂಡಿದೆ. ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲವೂ ವ್ಯಕ್ತವಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು
ಮೃತ ಸುನೀಲ್​​Image Credit source: Tv9 Kannada and PTI
ಸುರೇಶ್ ನಾಯಕ್
| Edited By: |

Updated on:Jul 05, 2026 | 2:16 PM

Share

ಮುಖ್ಯಾಂಶಗಳು

  • ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದ್ದ BLO ಹೃದಯಾಘಾತದಿಂದ ಸಾವು
  • ಬೀದರ್ ತಾಲೂಕಿನ ಅಮಲಾಪುರದಲ್ಲಿ ನಡೆದಿರುವ ಆಘಾತಕಾರಿ ಘಟನೆ
  • ಸರ್ವೇ ನಡೆಸುತ್ತಿದ್ದ ವೇಳೆ ತೀವ್ರ ಎದೆನೋವಿನಿಂದ ಸುಸ್ತಾಗಿ ಬಿದ್ದಿದ್ದ ಬಿಎಲ್​​ಒ

ಬೀದರ್​​/ ತುಮಕೂರು, ಜುಲೈ 05: SIR ಕರ್ತವ್ಯಕ್ಕೆ ತೆರಳುವಾಗ ಬೈಕ್​​​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಎಒ ಭುವನಾ ಮೃತಪಟ್ಟಿರುವ ವಿಚಾರವಾಗಿ ತುಮಕೂರಲ್ಲಿ (Tumakuru) ಪ್ರತಿಭಟನೆ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದ್ದ BLO ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಬೀದರ್ ತಾಲೂಕಿನ ಅಮಲಾಪುರದಲ್ಲಿ ನಡೆದಿದೆ. ಮೃತರನ್ನು ಬೀದರ್ ಜಿಲ್ಲೆಯ ಭಾಲ್ಕಿ ಮೂಲದವರಾಗಿರುವ ಸುನೀಲ್​​ ಎಂದು ಗುರುತಿಸಲಾಗಿದೆ.

ಆಗಿದ್ದೇನು?

ಬೀದರ್ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಸರ್ವೇ ನಡೆಸುತ್ತಿದ್ದ ವೇಳೆ ತೀವ್ರ ಎದೆನೋವಿನಿಂದ ಸುಸ್ತಾಗಿ ಸುನೀಲ್​​ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರ ಸಹಾಯದಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರದೃಷ್ಟವಶಾತ್​​ ಅಲ್ಲಿ ಸ್ಟಂಟ್ ಅಳವಡಿಸುವ ವೇಳೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಗಾಂಧಿ‌ಗಂಜ್ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ‌ ನಡೆದಿದೆ.

ಇದನ್ನೂ ಓದಿ: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

ತುಮಕೂರಲ್ಲಿ ಮುಂದುವರಿದ ಪ್ರತಿಭಟನೆ

ಮತ್ತೊಂದೆಡೆ ಇತ್ತ ತುಮಕೂರಿನಲ್ಲಿ ವಿಎಒ ಭುವನಾ ಸಾವು ಖಂಡಿಸಿ ಡಿಸಿ ಕಚೇರಿ ಬಳಿ ಕಂದಾಯ ನೌಕರರ ಪ್ರತಿಭಟನೆ ಮುಂದುವರಿದಿದೆ. ನಿನ್ನೆ ತಿಪಟೂರು ತಾಲೂಕಿನಲ್ಲಿ ಕರ್ತವ್ಯದ ವೇಳೆ ಅಪಘಾತದವಾಗಿ ಗಾಯಗೊಂಡಿದ್ದ ವಿಎಒ ಯಶಸ್ವಿನಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಕಾಲಿಗೆ ಗಂಭೀರ ಗಾಯವಾಗಿದ್ದರೂ, ಹೋರಾಟದಲ್ಲಿ ಭಾಗವಹಿಸುವ ಮೂಲಕ ಭುವನಾ ಸಾವಿಗೆ ನ್ಯಾಯ ಕೊಡುವಂತೆ ಅವರು ಆಗ್ರಹಿಸಿದ್ದಾರೆ. ಈ ನಡುವೆ ಧರಣಿಯಲ್ಲಿ ಭಾಗಿಯಾಗುವಂತೆ ಸಂಘದಿಂದ ಎಲ್ಲಾ ನೌಕರರಿಗೆ ಬುಲಾವ್​​​ ನೀಡಲಾಗಿದ್ದು, ಮೇಲಧಿಕಾರಿಗಳ ಒತ್ತಡವೇ ಭುವನಾ ಸಾವಿಗೆ ಕಾರಣ ಎಂದು ಪ್ರತಿಭಟನಾಕಾರರು ಮೇಲಿಂದ ಮೇಲೆ ಹೇಳುತ್ತಿದ್ದಾರೆ.

ನಿನ್ನೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗುವಂತೆ ಒತ್ತಡ ಹೇರಲಾಗಿದ್ದು, ಆರೋಪ ಸಂಬಂಧ ಆಡಿಯೋವನ್ನು ಸಹ ಹೋರಾಟಗಾರರು ಹೊಂದಿದ್ದಾರೆ. ತಹಶೀಲ್ದಾರ್​​ ಮಾತಾಡಿದ್ದಾರೆ ಎನ್ನಲಾದ ಆಡಿಯೋ ಇರುವ ಮಾಹಿತಿ ಇದ್ದು, ಆಡಿಯೋದಲ್ಲಿ ಬೆಳಗ್ಗೆ 6.30ಕ್ಕೆ ಕೆಲಸಕ್ಕೆ ಬರುವಂತೆ ಅಧಿಕಾರಿ ಹೇಳಿದ್ದಾರೆ. ಇದು ತಹಶೀಲ್ದಾರ್, ಎಸಿ​​​​​ ನಿರ್ಧಾರವೋ? ಅಥವಾ ಡಿಸಿ ನಿರ್ಧಾರವೋ? ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಈ ರೀತಿ ಸೂಚನೆ ಕೊಟ್ಟು ಕಿರುಕುಳ ನೀಡಿದವರ ವಿರುದ್ಧ ಕ್ರಮಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:07 pm, Sun, 5 July 26

Follow Us
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?