AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: 2 ವರ್ಷದ ಮಗುವಿಗೆ ಕಚ್ಚಿದ ಹುಚ್ಚು ನಾಯಿ: ಮಗುವಿನ ಮುಖಕ್ಕೆ 32 ಹೊಲಿಗೆ ಹಾಕಿದ ವೈದ್ಯರು

Bidar news: ಹುಚ್ಚುನಾಯಿ ದಾಳಿಗೆ ಎರಡು ವರ್ಷದ ಮಗು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದು, ಗಾಯಗೊಂಡ ಸ್ಥಳಕ್ಕೆ ವೈದ್ಯರು ಒಟ್ಟು 32 ಹೊಲಿಗೆ ಹಾಕಿದ್ದಾರೆ.

ಬೀದರ್​: 2 ವರ್ಷದ ಮಗುವಿಗೆ ಕಚ್ಚಿದ ಹುಚ್ಚು ನಾಯಿ: ಮಗುವಿನ ಮುಖಕ್ಕೆ 32 ಹೊಲಿಗೆ ಹಾಕಿದ ವೈದ್ಯರು
ಬೀದರ್​ನಲ್ಲಿ ಹುಚ್ಚು ನಾಯಿ ಕಡಿತ, ಗಂಭೀರವಾಗಿ ಗಾಯಗೊಂಡ 2 ವರ್ಷದ ಮಗು
TV9 Web
| Edited By: Rakesh Nayak Manchi|

Updated on:Nov 22, 2022 | 5:36 PM

Share

ಬೀದರ್: ರಾಜ್ಯದಲ್ಲಿ ಹುಚ್ಚುನಾಯಿ, ಬೀದಿನಾಯಿ ದಾಳಿಗಳು ಹೆಚ್ಚಾಗುತ್ತಿವೆ. ವಾರದ ಹಿಂದೆಯಷ್ಟೇ ಚಿಕ್ಕಬಳ್ಳಾಪುರದಲ್ಲಿ ಓರ್ವ ಬಾಲಕನ ಮೇಲೆ ಬೀದಿ ನಾಯಿಗಳು ಎರಗಿ ಮುಖಕ್ಕೆ ಗಾಯಗೊಳಿಸಿದ್ದವು. ಇದೀಗ ಹುಚ್ಚುನಾಯಿ ದಾಳಿಗೆ ಎರಡು ವರ್ಷದ ಮಗು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಬಸವಕಲ್ಯಾಣದ ಗಾಡವಾನ್ ಗಲ್ಲಿಯಲ್ಲಿ ನಡೆದಿದೆ. ಅಂಗಡಿಗೆ ತೆರಳುತ್ತಿದ್ದ ಅಸ್ಮಾ ಸಮೀರ್ ಶೇಕ್‌ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ ಗಂಭೀರವಾಗಿ ಗಾಯಗೊಳಿಸಿದೆ. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ನಗರದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಘಟನೆಯಲ್ಲಿ ಮಗುವಿನ ಮುಖಕ್ಕೆ ಗಾಯಗಳಾಗಿದ್ದು, ವೈದ್ಯರು ಗಾಯಗಳಿಗೆ 32 ಹೊಲಿಗೆ ಹಾಕಿದ್ದಾರೆ.

ಈ ಹಿಂದೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪಟ್ಟಣದಲ್ಲಿ ಬೀದಿ ನಾಯಿ ದಾಳಿಗೆ 8 ವರ್ಷದ ಬಾಲಕ ಗಾಯಗೊಂಡಿದ್ದ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ರಸ್ತೆಗೆ ಇಳಿಯಲು ಭಯ ಆಗುತ್ತದೆ ಎಂದು ಭೀತಿ ಹೊರಹಾಕುತ್ತಲೇ ಇದ್ದಾರೆ. ಸಾರ್ವಜನಿಕರು ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಶುಕ್ರವಾರ (ನ 11) ದಸ್ತಗೀರ್ ಎಂಬ 8ವರ್ಷದ ಬಾಲಕನು ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳ ಹಿಂಡು ಬಾಲಕನ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿತ್ತು. ಈ ಬಾಲಕ ತನಗೆ ಆದ ನೋವು ಬೇರೆ ಯಾರಿಗೂ ಆಗಬಾರದು ಎಂದು ಶಿಡ್ಲಘಟ್ಟ ನಗರಸಭೆಯ ಮುಂದೆ ಧರಣಿ ಆರಂಭಿಸಿದ್ದನು.

ಬೀದಿ ನಾಯಿಗಳ ಹಾವಳಿಗೆ ಬೇಸತ್ತಿದ್ದ ಸಂತೋಷನಗರ ಹಾಗೂ ತೈಬಾ ಬಡಾವಣೆಯ ಜನರು ಬಾಲಕನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಈ ಹಿಂದೆ ಕೂಡ ಬೀದಿ ನಾಯಿ ದಾಳಿಯಿಂದ ನಗರದಲ್ಲಿ ಒಂದು ಮಗು ಮೃತಪಟ್ಟಿತ್ತು. ಮತ್ತೊಮ್ಮೆ ಅಂಥದ್ದೇ ಅನಾಹುತ ಸಂಭವಿಸಿರುವುದರಿಂದ ನಗರಸಭೆ ಶೀಘ್ರ ಗಮನ ಹರಿಸಬೇಕು ಎಂದು ಮಗುವಿನ ಸಂಬಂಧಿಕರು ಶಿಡ್ಲಘಟ್ಟ ನಗರಸಭೆ ಆಯುಕ್ತ ಶ್ರೀಕಾಂತ್ ಅವರಿಗೆ ಮನವಿ ಮಾಡಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Tue, 22 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ