AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಪ್ರೀತಿ ಮಾಡಿ ಮದುವೆಗೆ ನಿರಾಕರಿಸಿದ ಯುವತಿಯನ್ನ ಕತ್ತು ಹಿಸಿಕಿ ಕೊಲೆ ಮಾಡಿದ ಪಾಗಲ್​ ಪ್ರೇಮಿ

ಅವಳಿಗಿನ್ನೂ 19 ಮುಗಿದು 20 ನೇ ವಯಸ್ಸಿಗೆ ಕಾಲಿಡುವ ಮುನ್ನವೇ 25 ವರ್ಷ ವಯಸ್ಸಿನ ಯುವಕನ ಪ್ರೇಮದ ಬಲೆಗೆ ಬಿದ್ದಿದ್ದವಳು ಇಂದು ದುರಂತ ಸಾವಿಗೀಡಾಗಿದ್ದಾಳೆ. ಮದುವೆಗೆ ಒಪ್ಪದ ಪ್ರಿಯತಮೆಯನ್ನ ಕತ್ತುಹಿಸುಕಿ ಕೊಲೆ ಮಾಡಿದ್ದು ಮಗಳನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಬೀದರ್​: ಪ್ರೀತಿ ಮಾಡಿ ಮದುವೆಗೆ ನಿರಾಕರಿಸಿದ ಯುವತಿಯನ್ನ ಕತ್ತು ಹಿಸಿಕಿ ಕೊಲೆ ಮಾಡಿದ ಪಾಗಲ್​ ಪ್ರೇಮಿ
ಮದುವೆ ನಿರಾಕರಿಸಿದಳೆಂದು ಪ್ರೀತಿಸಿದ ಯುವತಿಯನ್ನ ಕೊಲೆಗೈದ ಪಾಗಲ್​ ಪ್ರೇಮಿ
TV9 Web
| Edited By: |

Updated on: Feb 12, 2023 | 12:50 PM

Share

ಬೀದರ್: ನಗರದ ಮಂಗಲ್ ಪೇಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವಲೀಲಾ ಹಾಗೂ ಶ್ರೀನಿವಾಸ್, ಒಂದೇ ಓಣಿಯಲ್ಲಿ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದುದ್ದರಿಂದ ಇಬ್ಬರ ನಡುವೆ ಪರಿಚಯವಾಗಿದೆ. ಇದೇ ಪರಿಚಯ ಪ್ರೀತಿಗೆ ತಿರುಗಿ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿ ಮಾಡಲು ಶುರುಮಾಡಿದ್ದಾರೆ. ಯಾವಾಗ ಇವರಿಬ್ಬರ ನಡುವೆ ಪ್ರೀತಿ ಗಾಢವಾಯಿತೋ ಆವಾಗ ಶ್ರೀನಿವಾಸ್ ಮದುವೆ ಮಾಡಿಕೊಳ್ಳುವಂತೆ ಒತ್ತಡ ಹಾಕಲು ಶರು ಮಾಡಿದ್ದಾನೆ. ಓದುವ ಹೊತ್ತಿನಲ್ಲಿ ಮದುವೆ ಬೇಡ ಎಂದು ಶಿವಲೀಲಾ ಶ್ರೀನಿವಾಸ್​ಗೆ ಹೇಳಿದ್ದಾಳೆ. ನಂತರ ಶಿವಲೀಲಾ ತಾಯಿ ವಿಜಯಲಕ್ಷ್ಮೀಗೆ ನಿಮ್ಮ ಮಗಳನ್ನ ಮದುವೆ ಮಾಡಿಕೊಡಿ ಎಂದು ಒತ್ತಡ ಹಾಕಲು ಶುರುಮಾಡಿದ್ದಾನೆ. ಬಳಿಕ ತಾಯಿ ಮಗಳು ಮನೆ ಖಾಲಿ ಮಾಡಿ ಬೇರೆ ಊರಿಗೆ ಹೋಗಿದ್ದಾರೆ. ಇಷ್ಟಾದರೂ ಬಿಡದ ಶ್ರೀನಿವಾಸ್ ಜನವರಿ 8 ರಂದು​ ಆಕೆ ಓದುತ್ತಿರುವ ಕಾಲೇಜಿಗೆ ಹೋಗಿ, ಶಿವಲೀಲಾನನ್ನು ಫುಸಲಾಯಿಸಿ ನಗರದ ಪಕ್ಕದಲ್ಲಿರುವ ಸೋಲಪುರ ಗ್ರಾಮದ ಬಳಿಗೆ ಕರೆದುಕೊಂಡು ಹೋಗಿ ಆಕೆಯ ವೇಲ್​ನಿಂದಲೇ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ, ಶ್ರೀನಿವಾಸ್​ನನ್ನ ಪೊಲೀಸರು ಹಿಡಿದು ಈಗ ಜೈಲಿಗಟ್ಟಿದ್ದಾರೆ. ಮದುವೆ ಮಾಡಿಕೊಳ್ಳಲು ನಿರಾಕರಿಸಿದ ಒಂದೇ ಒಂದು ಕಾರಣಕ್ಕೆ ನನ್ನ ಮಗಳನ್ನ ಕೊಲೆ ಮಾಡಿದ್ದ ಶ್ರೀನಿವಾಸ್​ಗೆ ಕಠಿಣ ಶಿಕ್ಷೆಯಾಗಬೇಕೆಂದು ತಾಯಿ ಒತ್ತಾಯಿಸುತ್ತಿದ್ದಾರೆ.

ಮೂಲತಃ ಬೀದರ್ ತಾಲೂಕಿನ ಮಲ್ಲಿಕ್ ಮಿರ್ಜಾಪೂರ್ ಗ್ರಾಮದ ಶಿವಲೀಲಾ ನಗರದ ಮಂಗಲ್ ಪೇಟೆಯಲ್ಲಿ ತಾಯಿ ಜೊತೆ ವಾಸವಾಗಿದ್ದಳು. ಶಿವಲೀಲಾ ಹುಟ್ಟಿದ್ದಾಗಲೇ ಈಕೆಯ ತಂದೆ ತೀರಿಹೋಗಿದ್ದಾನೆ. ಅಪ್ಪನ ಆಸರೆಯಿಲ್ಲದೆ ಬೆಳೆದ ಶಿವಲೀಲಾ ಓದಿನಲ್ಲಿ ಚುರುಕಾಗಿದ್ದಳು. ಒಂದನೇ ತರೆಗತಿಯಿಂದ ದ್ವೀತಿಯ ಪಿಯುಸಿವರೆಗೆ ರ್ಯಾಂಕ್​ನಲ್ಲಿಯೇ ಪಾಸು ಮಾಡಿದ ಶಿವಲೀಲಾ ಮುಂದೆ ಬೀದರ್ ಬ್ರೀಮ್ಸ್ ನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದು ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡಿ ನನ್ನ ಮಗಳು ಹೆಸರು ಮಾಡುತ್ತಾಳೆ ಎಂದು ತಾಯಿ ಕನಸು ಕಂಡಿದ್ದಳು. ಆದ್ರೆ ಶ್ರೀನಿವಾಸ ಎಂಬ 25 ವರ್ಷದ ಯುವಕ ಹುಡುಗಿಯನ್ನು ಪ್ರೀತಿಯ ಬಲೆಗೆ ಬಿಳಿಸಿಕೊಂಡು ಆಕೆಯನ್ನ ಕೊಲೆ ಮಾಡಿದ್ದಾನೆ. ತಾಯಿ ಕನಸು ನೂಚ್ಚು ನೂರು ಮಾಡಿದ್ದು ಅಲ್ಲದೆ ಮಗಳನ್ನು ಕೊಲೆ ಮಾಡಿ ತಾಯಿಯನ್ನು ಕಣ್ಣೀರಿನಲ್ಲಿ ಕೈತೊಳಿಯುವಂತೆ ಮಾಡಿದ್ದಾನೆ. ಈ ಕುರಿತು ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಉಡುಪಿ: ಮೊಬೈಲ್ ಕರೆಯನ್ನ ಆಧರಿಸಿ ಹೋಗಿದ್ದ ವ್ಯಕ್ತಿಯ ಬರ್ಬರ ಕೊಲೆ

ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದು, ಒಪ್ಪದೇ ಇದ್ದಾಗ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕತ್ತು ಹಿಸಿಕಿ ಕೊಲೆ ಮಾಡಿದ್ದು ದುರಂತವೇ ಸರಿ. ನರ್ಸಿಂಗ್ ಕನಸು ಕಂಡಿದ್ದ ಹುಡುಗಿ ಪ್ರೀತಿಯ ಹೆಸರಿನಲ್ಲಿ ಬಲಿಯಾಗಿದ್ದು ಕುಟುಂಬಕ್ಕೆ ಆಘಾತ ನೀಡಿದೆ. ಇನ್ನಾದ್ರು ಪ್ರೀತಿ ಬಲೆಗೆ ಬೀಳುವ ಮುನ್ನಾ ಎಲ್ಲಾ ಹುಡುಗಿಯ ಹುಷಾರ್ ಆಗಿರಬೇಕಿದೆ.

ವರದಿ: ಸುರೇಶ್ ನಾಯಕ್ ಟಿವಿ9 ಬೀದರ್

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​