AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಕಾಡುಹಂದಿ ದಾಳಿಗೆ ಮಹಿಳೆ ಸಾವು; ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಈಶ್ವರ್​ ಖಂಡ್ರೆ

ಬೀದರ್(Bidar) ತಾಲೂಕಿನ ಹೊಕ್ರಾಣ(ಕೆ) ಗ್ರಾಮದ ಮಹಿಳೆ ಕವಿತಾ (45) ಎಂಬುವವರ ಮೇಲೆ ಕಾಡುಹಂದಿ ದಾಳಿ ಮಾಡಿತ್ತು. ಗಂಭೀರ ಗಾಯಗೊಂಡಿದ್ದ ಮಹಿಳೆ ಇದೀಗ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬದ ಮನೆಗೆ ಅರಣ್ಯಾಧಿಕಾರಿಗಳ ಜೊತೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿದ್ದಾರೆ. ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ.

ಬೀದರ್: ಕಾಡುಹಂದಿ ದಾಳಿಗೆ ಮಹಿಳೆ ಸಾವು; ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಈಶ್ವರ್​ ಖಂಡ್ರೆ
ಕಾಡು ಹಂದಿ ದಾಳಿಯಿಂದ ಸಾವನ್ನಪ್ಪಿದ ಕುಟುಂಬಕ್ಕೆ ಪರಿಹಾರ ವಿತರಿಸಿದ ಖಂಡ್ರೆ
ಸುರೇಶ ನಾಯಕ
| Edited By: |

Updated on: Mar 08, 2024 | 3:56 PM

Share

ಬೀದರ್, ಮಾ.08: ಕಾಡುಹಂದಿ ದಾಳಿಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಇದೀಗ ಕೊನೆಯುಸಿರೆಳೆದಿದ್ದಾರೆ. ಬೀದರ್ (Bidar) ತಾಲೂಕಿನ ಹೊಕ್ರಾಣ(ಕೆ) ಗ್ರಾಮದ ಮಹಿಳೆ ಕವಿತಾ (45) ಮೃತ ರ್ದುದೈವಿ. ರೈತನ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋದಾಗ ಕಾಡುಹಂದಿ ದಾಳಿ ಮಾಡಿತ್ತು. ಹೊಟ್ಟೆಗೆ ಕಚ್ಚಿದ್ದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ಕುರಿತು ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬದ ಮನೆಗೆ ಅರಣ್ಯಾಧಿಕಾರಿಗಳ ಜೊತೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿದ್ದಾರೆ. ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಇನ್ಮುಂದೆ ಇಂತಹ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಕೊರಟಗೆರೆಯಲ್ಲಿ ಹುಚ್ಚು ನಾಯಿ ದಾಳಿ; ವೃದ್ದೆ ಸೇರಿದಂತೆ 10ಕ್ಕೂ ಹೆಚ್ಚು ಜನರಿಗೆ ಗಾಯ

ಬೈಕ್​ಗೆ ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ: ತಾಲೂಕಿನ ಕುಸಗಲ್​ನಲ್ಲಿ ಬೈಕ್​ಗೆ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಇಂಗಳಹಳ್ಳಿಯ ರಾಜೇಸಾಬ ಕೊಲ್ಯಾಡಿ(24) ಮೃತ ದುರ್ದೈವಿ. ಬೈಕ್ ಟ್ಯಾಂಕ್ ಮೇಲೆ ಕುಳಿತಿದ್ದ 12 ವರ್ಷದ ಬಾಲಕ ಅದೃಷ್ಷವಶಾತ್ ಪಾರಾಗಿದ್ದು, ಕುಡಿದ ಮತ್ತಿನಲ್ಲಿ ಚಾಲಕ ಟಿಪ್ಪರ್​ನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆಂಬ ಮಾಹಿತಿ ಇದ್ದು, ಟಿಪ್ಪರ್ ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಾಳು ಮಹಿಳೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ