AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ.

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು
ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು
TV9 Web
| Updated By: ಆಯೇಷಾ ಬಾನು|

Updated on:Jan 19, 2022 | 1:03 PM

Share

ಬೀದರ್: ಬೀನ್ಸ್, ಹಾಗಲಕಾಯಿ, ಟೊಮೆಟೊ, ಸೊಪ್ಪು ಅಬ್ಬಬ್ಬಾ.. ಒಂದಾ.. ಎರಡಾ.. ಹತ್ತಾರು ಬೆಳೆಗಳು. ಪ್ರಾಯೋಗಿಕ ಕಲಿಕೆಯಲ್ಲೇ ವಿದ್ಯಾರ್ಥಿಗಳು ರೈತರಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಭಾರಿ ಸದ್ದು ಮಾಡ್ತಿದ್ದಾರೆ. ತರಕಾರಿ, ಹೂವಿನ ಗಿಡ ಬೆಳೆಸಿ, ಫಲ ಬಂದ ಮೇಲೆ ಮಾರಾಟ ಮಾಡಿ, ಹಣಗಳಿಸುತ್ತಿದ್ದಾರೆ. ತರಕಾರಿ ಬೆಳೆಯುವುದರ ಜೊತೆಗೆ ಫಲಕೊಡುವ ಸಸಿಗಳನ್ನೇ ಬೆಳೆಸಿ, ಅವುಗಳನ್ನು ರೈತರಿಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ತಿದ್ದಾರೆ. ಈ ಮೂಲಕ ಕಾಲೇಜಿನ ಕಲಿಯುತ್ತಲೇ ಗಳಿಸುತ್ತಾ, ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಲು ಕಾಲೇಜಿನ ಪ್ರಾಧ್ಯಾಪಕರು ಇವರಿಗೆ ತರಬೇತಿ ನೀಡುತ್ತಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ. ಪಾಲಕ್ ಸೋಪ್ಪು, ಹಿರೇಕಾಯಿ, ಬದನೆ, ಬೆಂಡಿಕಾಯಿ, ಹೂಕೊಸು, ಟೊಮ್ಯಾಟೊ, ಸೀತಾಫಲ, ಕರಿಬೇವು, ಸೇವಂತಿಗೆ ಹೀಗೆ ವಿವಿಧ ಬಗೆಯ ತರಕಾರಿ ಬೆಳೆದು ಅದನ್ನ ಮಾರಾಟ ಮಾಡುತ್ತಾರೆ. ಬಂದ ಆದಾಯದಲ್ಲಿ ಶೇ.75 ರಷ್ಟು ಹಣವನ್ನ ತಾವಿಟ್ಟುಕೊಂಡು ಇನ್ನುಳಿದ ಶೇ.25 ರಷ್ಟು ಹಣವನ್ನ ಕಾಲೇಜಿಗೆ ಕೊಡುತ್ತಾರೆ. ವಿದ್ಯಾರ್ಥಿಗಳು ಬೆಳೆದ ಈ ತರಹೇವಾರಿ ಗಿಡಗಳಿಗೆ ಭಾರಿ ಬೇಡಿಕೆ ಬಂದಿದೆ.

ಇನ್ನು, ವಿವಿಧ ಬಗೆಯ ಸಸಿ ತಯಾರಿಸಿ ಮಾರಾಟ ಮಾಡೋದ್ರ ಜೊತೆಗೆ ಮಾರುಕಟ್ಟೆಯ ಜ್ಞಾನವನ್ನೂ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ.. ಪದವಿ ಮುಗಿದ ಬಳಿಕ ಸರ್ಕಾರಿ ಕೆಲಸ ಸಿಗದಿದ್ರೂ ಕೂಡಾ ಸ್ವಾವಲಂಬಿಗಳಾಗಿ ಬದುಕಲು ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗ್ತಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ: ಸುರೇಶ್, ಟಿವಿ9, ಬೀದರ್.

Bidar Student Krushi

ವಿದ್ಯಾರ್ಥಿಗಳು ಬೆಳೆದ ಬೆಳೆ

Bidar Student Krushi

ರೈತರಾದ ವಿದ್ಯಾರ್ಥಿಗಳು

Bidar Student Krushi

ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು

ಇದನ್ನೂ ಓದಿ: Vijay Mallya: ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಆಸ್ತಿ ಪರಭಾರೆ ಕೇಸ್​ ಗೆದ್ದ UBS ಬ್ಯಾಂಕ್‌

Published On - 7:43 am, Wed, 19 January 22

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?