AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ.

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು
ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು
TV9 Web
| Edited By: |

Updated on:Jan 19, 2022 | 1:03 PM

Share

ಬೀದರ್: ಬೀನ್ಸ್, ಹಾಗಲಕಾಯಿ, ಟೊಮೆಟೊ, ಸೊಪ್ಪು ಅಬ್ಬಬ್ಬಾ.. ಒಂದಾ.. ಎರಡಾ.. ಹತ್ತಾರು ಬೆಳೆಗಳು. ಪ್ರಾಯೋಗಿಕ ಕಲಿಕೆಯಲ್ಲೇ ವಿದ್ಯಾರ್ಥಿಗಳು ರೈತರಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಭಾರಿ ಸದ್ದು ಮಾಡ್ತಿದ್ದಾರೆ. ತರಕಾರಿ, ಹೂವಿನ ಗಿಡ ಬೆಳೆಸಿ, ಫಲ ಬಂದ ಮೇಲೆ ಮಾರಾಟ ಮಾಡಿ, ಹಣಗಳಿಸುತ್ತಿದ್ದಾರೆ. ತರಕಾರಿ ಬೆಳೆಯುವುದರ ಜೊತೆಗೆ ಫಲಕೊಡುವ ಸಸಿಗಳನ್ನೇ ಬೆಳೆಸಿ, ಅವುಗಳನ್ನು ರೈತರಿಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ತಿದ್ದಾರೆ. ಈ ಮೂಲಕ ಕಾಲೇಜಿನ ಕಲಿಯುತ್ತಲೇ ಗಳಿಸುತ್ತಾ, ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಲು ಕಾಲೇಜಿನ ಪ್ರಾಧ್ಯಾಪಕರು ಇವರಿಗೆ ತರಬೇತಿ ನೀಡುತ್ತಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ. ಪಾಲಕ್ ಸೋಪ್ಪು, ಹಿರೇಕಾಯಿ, ಬದನೆ, ಬೆಂಡಿಕಾಯಿ, ಹೂಕೊಸು, ಟೊಮ್ಯಾಟೊ, ಸೀತಾಫಲ, ಕರಿಬೇವು, ಸೇವಂತಿಗೆ ಹೀಗೆ ವಿವಿಧ ಬಗೆಯ ತರಕಾರಿ ಬೆಳೆದು ಅದನ್ನ ಮಾರಾಟ ಮಾಡುತ್ತಾರೆ. ಬಂದ ಆದಾಯದಲ್ಲಿ ಶೇ.75 ರಷ್ಟು ಹಣವನ್ನ ತಾವಿಟ್ಟುಕೊಂಡು ಇನ್ನುಳಿದ ಶೇ.25 ರಷ್ಟು ಹಣವನ್ನ ಕಾಲೇಜಿಗೆ ಕೊಡುತ್ತಾರೆ. ವಿದ್ಯಾರ್ಥಿಗಳು ಬೆಳೆದ ಈ ತರಹೇವಾರಿ ಗಿಡಗಳಿಗೆ ಭಾರಿ ಬೇಡಿಕೆ ಬಂದಿದೆ.

ಇನ್ನು, ವಿವಿಧ ಬಗೆಯ ಸಸಿ ತಯಾರಿಸಿ ಮಾರಾಟ ಮಾಡೋದ್ರ ಜೊತೆಗೆ ಮಾರುಕಟ್ಟೆಯ ಜ್ಞಾನವನ್ನೂ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ.. ಪದವಿ ಮುಗಿದ ಬಳಿಕ ಸರ್ಕಾರಿ ಕೆಲಸ ಸಿಗದಿದ್ರೂ ಕೂಡಾ ಸ್ವಾವಲಂಬಿಗಳಾಗಿ ಬದುಕಲು ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗ್ತಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ: ಸುರೇಶ್, ಟಿವಿ9, ಬೀದರ್.

Bidar Student Krushi

ವಿದ್ಯಾರ್ಥಿಗಳು ಬೆಳೆದ ಬೆಳೆ

Bidar Student Krushi

ರೈತರಾದ ವಿದ್ಯಾರ್ಥಿಗಳು

Bidar Student Krushi

ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು

ಇದನ್ನೂ ಓದಿ: Vijay Mallya: ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಆಸ್ತಿ ಪರಭಾರೆ ಕೇಸ್​ ಗೆದ್ದ UBS ಬ್ಯಾಂಕ್‌

Published On - 7:43 am, Wed, 19 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ