AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ.

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು
ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು
TV9 Web
| Edited By: ಆಯೇಷಾ ಬಾನು|

Updated on:Jan 19, 2022 | 1:03 PM

Share

ಬೀದರ್: ಬೀನ್ಸ್, ಹಾಗಲಕಾಯಿ, ಟೊಮೆಟೊ, ಸೊಪ್ಪು ಅಬ್ಬಬ್ಬಾ.. ಒಂದಾ.. ಎರಡಾ.. ಹತ್ತಾರು ಬೆಳೆಗಳು. ಪ್ರಾಯೋಗಿಕ ಕಲಿಕೆಯಲ್ಲೇ ವಿದ್ಯಾರ್ಥಿಗಳು ರೈತರಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಭಾರಿ ಸದ್ದು ಮಾಡ್ತಿದ್ದಾರೆ. ತರಕಾರಿ, ಹೂವಿನ ಗಿಡ ಬೆಳೆಸಿ, ಫಲ ಬಂದ ಮೇಲೆ ಮಾರಾಟ ಮಾಡಿ, ಹಣಗಳಿಸುತ್ತಿದ್ದಾರೆ. ತರಕಾರಿ ಬೆಳೆಯುವುದರ ಜೊತೆಗೆ ಫಲಕೊಡುವ ಸಸಿಗಳನ್ನೇ ಬೆಳೆಸಿ, ಅವುಗಳನ್ನು ರೈತರಿಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ತಿದ್ದಾರೆ. ಈ ಮೂಲಕ ಕಾಲೇಜಿನ ಕಲಿಯುತ್ತಲೇ ಗಳಿಸುತ್ತಾ, ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಲು ಕಾಲೇಜಿನ ಪ್ರಾಧ್ಯಾಪಕರು ಇವರಿಗೆ ತರಬೇತಿ ನೀಡುತ್ತಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ. ಪಾಲಕ್ ಸೋಪ್ಪು, ಹಿರೇಕಾಯಿ, ಬದನೆ, ಬೆಂಡಿಕಾಯಿ, ಹೂಕೊಸು, ಟೊಮ್ಯಾಟೊ, ಸೀತಾಫಲ, ಕರಿಬೇವು, ಸೇವಂತಿಗೆ ಹೀಗೆ ವಿವಿಧ ಬಗೆಯ ತರಕಾರಿ ಬೆಳೆದು ಅದನ್ನ ಮಾರಾಟ ಮಾಡುತ್ತಾರೆ. ಬಂದ ಆದಾಯದಲ್ಲಿ ಶೇ.75 ರಷ್ಟು ಹಣವನ್ನ ತಾವಿಟ್ಟುಕೊಂಡು ಇನ್ನುಳಿದ ಶೇ.25 ರಷ್ಟು ಹಣವನ್ನ ಕಾಲೇಜಿಗೆ ಕೊಡುತ್ತಾರೆ. ವಿದ್ಯಾರ್ಥಿಗಳು ಬೆಳೆದ ಈ ತರಹೇವಾರಿ ಗಿಡಗಳಿಗೆ ಭಾರಿ ಬೇಡಿಕೆ ಬಂದಿದೆ.

ಇನ್ನು, ವಿವಿಧ ಬಗೆಯ ಸಸಿ ತಯಾರಿಸಿ ಮಾರಾಟ ಮಾಡೋದ್ರ ಜೊತೆಗೆ ಮಾರುಕಟ್ಟೆಯ ಜ್ಞಾನವನ್ನೂ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ.. ಪದವಿ ಮುಗಿದ ಬಳಿಕ ಸರ್ಕಾರಿ ಕೆಲಸ ಸಿಗದಿದ್ರೂ ಕೂಡಾ ಸ್ವಾವಲಂಬಿಗಳಾಗಿ ಬದುಕಲು ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗ್ತಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ: ಸುರೇಶ್, ಟಿವಿ9, ಬೀದರ್.

Bidar Student Krushi

ವಿದ್ಯಾರ್ಥಿಗಳು ಬೆಳೆದ ಬೆಳೆ

Bidar Student Krushi

ರೈತರಾದ ವಿದ್ಯಾರ್ಥಿಗಳು

Bidar Student Krushi

ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು

ಇದನ್ನೂ ಓದಿ: Vijay Mallya: ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಆಸ್ತಿ ಪರಭಾರೆ ಕೇಸ್​ ಗೆದ್ದ UBS ಬ್ಯಾಂಕ್‌

Published On - 7:43 am, Wed, 19 January 22

Follow Us
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ