AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ

ಬೀದರ್‌ನ ಭಾಲ್ಕಿ ತಾಲ್ಲೂಕಿನ ದಟ್ಟ ಕಾಡಿನಲ್ಲಿ 1000 ವರ್ಷಗಳ ಪುರಾತನ ವಿಷ್ಣು ದೇವಾಲಯ ಪತ್ತೆಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಶಿವಾಜಿರಾವ್ ಅವರು ದೇವಾಲಯದ ಪವಾಡದ ಹೊಂಡದ ನೀರು ಕುಡಿದು ಹೊಸ ಜೀವನ ಕಂಡರು. ಇದೀಗ ಜೀರ್ಣೋದ್ಧಾರಗೊಂಡ ದೇಗುಲಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಹೊಂಡದ ನೀರಿಗೆ ಔಷಧೀಯ ಗುಣಗಳ ನಂಬಿಕೆಯೂ ಇದೆ.

ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ
ಬೀದರ್ ವಿಷ್ಣು ದೇವಾಲಯ
ಸುರೇಶ ನಾಯಕ
| Edited By: |

Updated on: Dec 31, 2025 | 4:34 PM

Share

ಬೀದರ್, ಡಿ.31: ಇಂದಿನ ಆಧುನಿಕ ಕಾಲದಲ್ಲೂ ಆಧ್ಯಾತ್ಮಿಕ ವಿಚಾರಗಳ ಮೇಲೆ ನಂಬಿಕೆ ಇದೆ. ಈ ನಂಬಿಕೆಗೆ ಕೆಲವೊಂದು ಅಚ್ಚರಿಯ ಸಂಗತಿಗಳು ಕಾರಣ. ಭಾರತದ ಅನೇಕ ಕಡೆ ಕಳೆದ 10 ವರ್ಷಗಳಿಂದ ಪುರಾತನ ದೇವಾಲಯಗಳು ಪತ್ತೆಯಾಗುತ್ತಿದೆ. ಜತೆಗೆ ಅವುಗಳ ಜೀರ್ಣೋದ್ಧಾರ ಕೂಡ ನಡೆಯುತ್ತಿದೆ. ಇದೀಗ ಇಂತಹದೇ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾದ ಬಳಿಯ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಪುರಾತನ ವಿಷ್ಣು ದೇವಸ್ಥಾನಯೊಂದು (Bidar Ancient Vishnu Temple) ಐದು ವರ್ಷಗಳ ಹಿಂದೆ ಪತ್ತೆಯಾಗಿತ್ತು. ಇದೀಗ ಈ ದೇವಾಲಯದಲ್ಲಿ ದಿನ ನಿತ್ಯ ಪೂಜೆಗಳು ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಇಲ್ಲಿಗೆ ಸಾವಿರಾರೂ  ಭಕ್ತರು ಆಗಮಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಈ ದೇವಾಲಯದ ಜೀರ್ಣೋದ್ಧಾರ ನಡೆದಿದೆ. ನೂರಾರು ವರ್ಷಗಳ ಇತಿಹಾಸವಿರುವ ದೇವಾಲಯ ಈ ಕಾಡಿನಲ್ಲಿತ್ತು ಎಂಬುದನ್ನು ಯಾರಿಗೂ ಗೊತ್ತಿರಲಿಲ್ಲ. ಹಾಗಾದರೆ ಈ ದೇವಾಲಯ ಇರುವುದು ಗೊತ್ತಾಗಿರುವುದು ಹೇಗೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಈ ವಿಷ್ಣುವಿನ ದೇವಾಲಯ ಇರುವ ಬಗ್ಗೆ ಹೇಳಿದ್ದು ಒಬ್ಬ ಸಾಮಾನ್ಯ ವ್ಯಕ್ತಿ, ಐದು ವರ್ಷದ ಹಿಂದೆ ಸೇವಾನಗರ ತಾಂಡಾದ ನಿವಾಸಿ ಶಿವಾಜಿರಾವ್ ಜೀವನದಲ್ಲಿ ಯಾವುದೂ ಕೈಹಿಡಿಯದೆ, ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು, ಈ ಕಾಡಿನ ಒಳಗೆ ಶಿವಾಜಿರಾವ್ ಬಂದಾಗ, ಒಂದು ದೊಡ್ಡ ಆಲದ ಮರ ಅವರಿಗೆ ಸಿಕ್ಕಿದೆ. ಇದಕ್ಕೆ ನೇಣು ಬಿಗಿದುಕೊಳ್ಳಬೇಕು ಎಂದು ಯೋಚನೆ ಮಾಡುತ್ತಿದ್ದಾಗ ಇವರ ಕಣ್ಣಿಗೆ ಪುರಾತನ ನೀರಿನ ಹೊಂಡ ಕಂಡಿದೆ. ಸಾವಿನ ಕೊನೆಯಲ್ಲೂ ಅವರಿಗೆ ಬಾಯರಿಕೆ ಆಗಿ, ನೀರು ಕುಡಿಯುವ ಎಂದು ಆ ಹೊಂಡದ ನೀರು ಕುಡಿಯುತ್ತಾರೆ. ಅಚ್ಚರಿ ಎಂಬಂತೆ ಈ ನೀರು ಕುಡಿದ ನಂತರ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂಬ ಯೋಚನೆ ಬದಲಾಯಿತು ಎಂದು ಹೇಳಿದ್ದಾರೆ. ಅಷ್ಟಕ್ಕೂ ಈ ನೀರಿನಲ್ಲಿರುವ ಶಕ್ತಿ ಏನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ನೀರು ಕುಡಿಯುತ್ತಿದ್ದ ವೇಳೆ ಹೊಂಡ ಗೋಡೆಯಲ್ಲಿ ವಿಷ್ಣು ಹಾವಿನ ಮೇಲೆ ನಿದ್ರಿಸುವ ಭಂಗಿಯಲ್ಲಿರುವ ಮೂರ್ತಿ ನೋಡಿದ್ದಾರೆ. ತಕ್ಷಣ ಕೈ ಮುಗಿದು, ಮರಳಿ ಊರಿಗೆ ಬಂದು ತಾಂಡಾ ಜನರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಕೂಡ ಈ ಸ್ಥಳಕ್ಕೆ ಬಂದು ನೋಡಿದ್ದಾರೆ. ಅಲ್ಲಿ ವಿಷ್ಣುವಿನ ಮೂರ್ತಿ ನೋಡಿ, ಹಿರಿಯರ ಮಾರ್ಗದರ್ಶದಂತೆ ಅದನ್ನು ಜೀರ್ಣೋದ್ಧಾರ ಮಾಡಲು ಹಣ ಸಂಗ್ರಹ ಮಾಡಿ. ದೊಡ್ಡ ದೇವಸ್ಥಾನವನ್ನು ಕಟ್ಟಿದ್ದಾರೆ. ಇಲ್ಲಿಗೆ ಬರುವ ಭಕ್ತರಿಗೆ ಒಂದು ರೀತಿಯ ನೆಮ್ಮದಿ ಸಿಕ್ಕಿದೆ ಎಂದು ಹಲವು ಭಕ್ತರು ಹೇಳಿದ್ದಾರೆ.

ಇದನ್ನು ಓದಿ: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ

ಒಂದು ಸಾವಿರ ವರ್ಷ ಹಳೆಯ ದೇವಾಲಯ:

ಈ ದೇವಸ್ಥಾನದ ಇತಿಹಾಸ ನೋಡುವುದಾರೆ ಸುಮಾರು ಒಂದು ಸಾವಿರ ವರ್ಷದಷ್ಟು ಹಳೆಯದಾದ ಪುರಾತನ ವಿಷ್ಣುವಿನ ಮೂರ್ತಿ ಹಾಗೂ ಈ ನೀರಿನ ಹೊಂಡ ಆಗಿರಬಹುದು ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತಮುತ್ತಲಿನ ಬೆಟ್ಟ ಹಲವಾರು ವಿಸ್ಮಯಗಳನ್ನೊಳಗೊಂಡಿದೆ ಎಂದು ಇಲ್ಲಿನ ಭಕ್ತರು ಹೇಳುತ್ತಿದ್ದಾರೆ. ಹೊರ ರಾಜ್ಯದ ಜನರು ಕೂಡ ಈ ದೇವಾಲಯಕ್ಕೆ ಬರುತ್ತದೆ. ಈ ಬಗ್ಗೆ ಟಿವಿ9 ಕನ್ನಡ ಒಂದು ವರದಿ ಮಾಡಿದ ನಂತರ ಈ ಪ್ರದೇಶದಲ್ಲಿ ಇಂತಹ ಒಂದು ವಿಸ್ಮಯಕಾರಿ ದೇವಾಲಯ ಇದೆ ಎಂಬುದು ಗೊತ್ತಾಗಿದೆ. ಇನ್ನು ಈ ಹೊಂಡದಲ್ಲಿರುವ ನೀರು ಯಾವತ್ತು ಬತ್ತಿ ಹೋಗಲ್ಲ ಎಂದು ಹೇಳಲಾಗಿದೆ. ನಿರಂತರವಾಗಿ ಹರಿಯುವ ನೀರನ್ನ ಔಷಧಿ ರೂಪದಲ್ಲಿಯೂ ಪ್ರತಿನಿತ್ಯ ಕುಡಿಯುವುದರಿಂದ ನಮ್ಮ ದೇಹದಲ್ಲಿರುವ ಖಾಯಿಲೆಗಳು ವಾಸಿಯಾಗುತ್ತದೆಂಬ ನಂಬಿಕೆ ಇಲ್ಲಿನ ಗ್ರಾಮಸ್ಥರದ್ದು, ಈ ನೀರಿನ ಹೊಂಡ ಸುಮಾರು ಹದಿನೈದು ಅಡಿಯಷ್ಟು ಆಳವಾಗಿದೆ. ಈ ನೀರು ಬೆಸಿಗೆಯ ಸಮಯದಲ್ಲಿ ಪ್ರಾಣಿ, ಪಕ್ಷೀಗಳಿಗೆ ನೀರಿನ ದಾಹ ಇಂಗಿಸುತ್ತದೆ ಈ ನೀರು ಶುದ್ಧವಾಗಿದ್ದ ರುಚಿಕರವಾಗಿದೆ ಎಂದು ಇಲ್ಲಿ ಭಕ್ತ ಸಮೂಹ ಹೇಳಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?