AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಬೀದರ್​​: ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಮತ್ತೆ ಭೂಕಂಪನ: ಭಯಪಡದಂತೆ ಗ್ರಾಮಸ್ಥರಿಗೆ ಡಿಸಿ ಮನವಿ

Earthquake: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಾದ ವಡ್ಡನಕೇರಾ, ಮದರಗಾಂವ್ ಗ್ರಾಮಗಳಲ್ಲಿ ಮತ್ತೆ ಭೂಕಂಪನ ಉಂಟಾಗಿದೆ. ಬೀದರ್​ನ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಕೇಂದ್ರದಲ್ಲಿ 2.4ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನ ಪ್ರಮಾಣ ಕಡಿಮೆ ಹಿನ್ನೆಲೆ ಭಯಪಡದಂತೆ ಗ್ರಾಮಸ್ಥರಿಗೆ ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಮನವಿ ಮಾಡಿದ್ದಾರೆ.

Earthquake: ಬೀದರ್​​: ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಮತ್ತೆ ಭೂಕಂಪನ: ಭಯಪಡದಂತೆ ಗ್ರಾಮಸ್ಥರಿಗೆ ಡಿಸಿ ಮನವಿ
ಪ್ರಾತಿನಿಧಿಕ ಚಿತ್ರ
ಸುರೇಶ ನಾಯಕ
| Edited By: |

Updated on:Nov 08, 2023 | 6:49 PM

Share

ಬೀದರ್, ನವೆಂಬರ್​​ 8: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಾದ ವಡ್ಡನಕೇರಾ, ಮದರಗಾಂವ್ ಗ್ರಾಮಗಳಲ್ಲಿ ಮತ್ತೆ ಭೂಕಂಪನ (Earthquake) ಉಂಟಾಗಿದೆ. ಬೀದರ್​ನ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಕೇಂದ್ರದಲ್ಲಿ 2.4ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನ ಪ್ರಮಾಣ ಕಡಿಮೆ ಹಿನ್ನೆಲೆ ಭಯಪಡದಂತೆ ಗ್ರಾಮಸ್ಥರಿಗೆ ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಮನವಿ ಮಾಡಿದ್ದಾರೆ. ಗ್ರಾಮಗಳಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ನ.6ರಂದು ವಡ್ಡನಕೇರಾ, ಮದರಗಾಂವ್​ನಲ್ಲಿ ಭೂಮಿ ಕಂಪಿಸಿತ್ತು.

ಹುಮ್ನಾಬಾದ್ ತಾಲೂಕಿನ ವಡ್ಡನಕೇರಾ ಮದರಗಾಂವ್ ಗ್ರಾಮದಲ್ಲಿ ನ.6ರಂದು ಬೆಳಗ್ಗೆ 4:28ರ ಸುಮಾರಿಗೆ ಭೂಕಂಪನ ಉಂಟಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದಲ್ಲಿ 1.9 ರಷ್ಟು ತಿವ್ರತೆ ದಾಖಲಾಗಿತ್ತು. ಭೂಕಂಪ ಪ್ರಮಾಣ ಕಡಿಮೆಯಿರುವ ಕಾರಣ ಭಯಗೊಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದರು.

ಇದನ್ನೂ ಓದಿ: ಬೀದರ್​​​: ಹುಮ್ನಾಬಾದ್​ನಲ್ಲಿ ಭೂಕಂಪನ: 1.9 ರಷ್ಟು ತಿವ್ರತೆ ದಾಖಲು

ವಡ್ಡನಕೇರಾ ಗ್ರಾಮದ 1.7 ಕಿಮೀ ಎನ್‌ಎನ್‌ಇ, ಮದರಗಾಂವ್ ಜಿಪಿ, ಹುಮ್ನಾಬಾದ್ ತಾಲೂಕಿನಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆ ಆಗಿತ್ತು. ಈ ರೀತಿಯ ಭೂಕಂಪನಗಳು ಸ್ಥಳೀಯವಾಗಿ ಯಾವುದೇ ಹಾನಿಯನ್ನು ಉಂಟುಮಾಡುವುದಿಲ್ಲ. ಏಕೆಂದರೆ ಭೂಕಂಪನದ ತೀವ್ರತೆಗಳು ತುಂಬಾ ಕಡಿಮೆ ಆಗಿರುತ್ತದೆ.

ವಿಜಯಪುರ ಜಿಲ್ಲೆಯಲ್ಲಿ ಕೆಲ ತಿಂಗಳ ಹಿಂದೆ ಭೂಕಂಪನದ ಅನುಭವವಾಗಿತ್ತು. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಜು.25ರ ಬೆಳಿಗ್ಗೆ 9:55ಕ್ಕೆ 2.4 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಮನಗೂಳಿ ಪಟ್ಟಣದಿಂದ 2.9 ಕಿ.ಮೀ ದೂರದಲ್ಲಿ ಭೂಕಂಪವಾಗಿತ್ತು.

ಇದನ್ನೂ ಓದಿ: ರಾಯಚೂರು: ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ: 2.7ರಷ್ಟು ತೀವ್ರತೆ ದಾಖಲು

ಭೂಕಂಪನದ ‘ಸೆಸ್ಮಿಕ್ ಇಂಟೆನ್ಸಿಟಿ ಮ್ಯಾಪ್’ ಪ್ರಕಾರ, ತೀವ್ರತೆಯು ತುಂಬಾ ಕಡಿಮೆ ಇದೆ. ಭೂಮಿಯ 15 ರಿಂದ 20 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿತ್ತು.

ಬರ ವೀಕ್ಷಣೆ ಮಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

ಜಿಲ್ಲೆಯಲ್ಲಿಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬರ ವೀಕ್ಷಣೆಗೆ ಆಗಮಿಸಿದರು. ಬಿಜೆಪಿ ಶಾಸಕರಿರುವ ತಾಲೂಕಿನಲ್ಲಿ ಬರ ವೀಕ್ಷಣೆ ಮಾಡಿದ್ದಾರೆ. ಬಸವಕಲ್ಯಾಣ ಹುಮ್ನಾಬಾದ್ ಬೀದರ್ ದಕ್ಷಿಣ ಹಾಗೂ ಔರಾದ್ ನಲ್ಲಿ ಬರ ವೀಕ್ಷಣೆ ಮಾಡಲಾಗಿದೆ. ಒಂದೇ ದಿನ ನಾಲ್ಕು ವಿಧಾನ ಸಭಾ ಕ್ಷೇತ್ರದಲ್ಲಿ ಬರ ವೀಕ್ಷಣೆ ಮಾಡಿದ್ದಾರೆ. ಮಾಜಿ ಸಚಿವ ಪ್ರಭು ಚೌಹಾನ್, ಶಾಸಕರಾದ ಶರಣು ಸಲಗರ್, ಬೀದರ್ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಳೆ ಸಾಥ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:34 pm, Wed, 8 November 23

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ