AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ತೊಗರಿ ಬೆಳೆಯ ನಡುವೆ ಗಾಂಜಾ ಗಿಡ ಬೆಳೆಸಿದ್ದ ರೈತ ಅರೆಸ್ಟ್

ರಾಥೋಡ್ ತೊಗರಿ ಮತ್ತು ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ. ಈ ಕುರಿತು ಮೂಲಗಳಿಂದ ಖಚಿತ ಮಾಹಿತಿ ಪಡೆದ ಸಂತಪುರ ಪೊಲೀಸರು ಎಸ್ಪಿ ಚೆನ್ನಬಸವಣ್ಣ ಮಾರ್ಗದರ್ಶನದಲ್ಲಿ ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಬೀದರ್: ತೊಗರಿ ಬೆಳೆಯ ನಡುವೆ ಗಾಂಜಾ ಗಿಡ ಬೆಳೆಸಿದ್ದ ರೈತ ಅರೆಸ್ಟ್
ಬೀದರ್: ತೊಗರಿ ಬೆಳೆಯ ನಡುವೆ ಗಾಂಜಾ ಗಿಡ ಬೆಳೆಸಿದ್ದ ರೈತ ಅರೆಸ್ಟ್
Follow us
TV9 Web
| Updated By: Ganapathi Sharma

Updated on:Oct 24, 2023 | 5:54 PM

ಬೀದರ್, ಅಕ್ಟೋಬರ್: ಬೀದರ್ (Bidar) ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ (Ganja) ಬೆಳೆದಿದ್ದ ರೈತರೊಬ್ಬರನ್ನು ಬಂಧಿಸಲಾಗಿದೆ. ರೈತ ತೊಗರಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಗಿಡ ಬೆಳೆಸಿದ್ದರು. ಆರೋಪಿಯನ್ನು ಶಿವಾಜಿ ರಾಥೋಡ್ ಎಂದು ಗುರುತಿಸಲಾಗಿದ್ದು, ಈತ ಜಿಲ್ಲೆಯ ತೆಲಂಗಾಣದ ಗಡಿಯಲ್ಲಿ ಜಮೀನು ಹೊಂದಿದ್ದಾರೆ. ರಾಥೋಡ್ ಅವರ ಜಮೀನಿನಲ್ಲಿ 25.54 ಲಕ್ಷ ಮೌಲ್ಯದ 63.86 ಕೆಜಿ ತೂಕದ 179 ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಥೋಡ್ ತೊಗರಿ ಮತ್ತು ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ. ಈ ಕುರಿತು ಮೂಲಗಳಿಂದ ಖಚಿತ ಮಾಹಿತಿ ಪಡೆದ ಸಂತಪುರ ಪೊಲೀಸರು ಎಸ್ಪಿ ಚೆನ್ನಬಸವಣ್ಣ ಮಾರ್ಗದರ್ಶನದಲ್ಲಿ ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ರೈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಅಂತರ್ ರಾಜ್ಯ ದರೋಡೆಕೋರರ ಹೆಡೆ ಮುರಿ ಕಟ್ಟಿದ ಬೀದರ್ ಪೊಲೀಸ್: 94 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಈ ಮಧ್ಯೆ, ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ, ದರೋಡೆ, ಮನೆಗಳ್ಳತನ ಸೇರಿ ಒಟ್ಟು ಐದು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು 9 ದರೋಡೆಕೋರರನ್ನು ಬಂಧಿಸಿದ್ದಾರೆ. 94 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಂಟೆನರ್ ಡ್ರೈವರ್​ಗೆ ಮತ್ತುಬರುವ ಇಂಜೆಕ್ಷನ್ ಚುಚ್ಚಿ ಲಾರಿ ಕದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 50 ಲಕ್ಷ 76 ಸಾವಿರ ಮೌಲ್ಯದ 694 ಫ್ಯಾನ್ ಬಾಕ್ಸ್ ಲಾರಿ ವಶಕ್ಕೆ ಪಡೆಯಲಾಗಿದೆ. ಹಾಗೂ 12 ಲಕ್ಷ 82 ಸಾವಿರ ಮೌಲ್ಯದ 180 ಗ್ರಾಮ್ ಬಂಗಾರದ ಆಭರಣ, ಎರಡು ಕೆಜಿಯಷ್ಟು ಬೆಳ್ಳಿಯ ಆಭರಣ ಒಂದು ಬೈಕ್ 20 ಸಾವಿರ ನಗದು ಹಣ ವಶಕ್ಕೆ ಪಡೆಯಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:51 pm, Tue, 24 October 23

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ