AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಕಡಿಮೆ ನೀರು, ಕಡಿಮೆ ಕರ್ಚು, ಕಡಿಮೆ ಜಮೀನಿನಲ್ಲಿ ಹಿರೇಕಾಯಿ ಬೆಳೆ ಬೆಳೆದು ತಿಂಗಳಿಗೆ ಮೂರು ಲಕ್ಷ ಲಾಭ ಪಡೆಯುವ ರೈತ

ಬೀದರ್​ ಜಿಲ್ಲೆಯ ಬೀದರ್ ತಾಲೂಕಿನ ಅತಿವಾಳ ಗ್ರಾಮದ ರೈತ ಎರಡುವರೆ ಎಕರೆ ಜಮೀನಿನಲ್ಲಿ ವಿನೂತನ ಪ್ರಯೋಗ ಮಾಡುತ್ತಾ, ಅಧಿಕ ಲಾಭ ಗಳಿಸುತ್ತಿದ್ದಾರೆ.

ಬೀದರ್​: ಕಡಿಮೆ ನೀರು, ಕಡಿಮೆ ಕರ್ಚು, ಕಡಿಮೆ ಜಮೀನಿನಲ್ಲಿ ಹಿರೇಕಾಯಿ ಬೆಳೆ ಬೆಳೆದು ತಿಂಗಳಿಗೆ ಮೂರು ಲಕ್ಷ ಲಾಭ ಪಡೆಯುವ ರೈತ
ರೈತ ಶಾಲಿವಾನ್
TV9 Web
| Edited By: |

Updated on: Nov 14, 2022 | 7:00 AM

Share

ಆ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬಿನ್, ತೊಗರಿ, ಉದ್ದು, ಬೆಳೆ ಬೆಳೆದು ಹೈರಾಣ ಆಗಿದ್ದರು. ಹೀಗಾಗಿ ಕೊಂಚ ಬದಲಾವಣೆ ಮಾಡಬೇಕು ತೋಚಿ, ಕೃಷಿಯಲ್ಲಿ ಏನಾದರೂ ಹೊಸದನ್ನು ಮಾಡಬೇಕೆಂದು ಯೋಚಿಸಿದ್ದರು. ಹೀಗೆ ಯೋಚಿಸಿದ ರೈತ ತನ್ನ ಹೊಲದಲ್ಲಿ ಹಿರೇಕಾಯಿ ಬೆಳೆದು ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತು ಈ ರೈತ ಅಕ್ಷರಶಃ ಸತ್ಯ ಮಾಡಿದ್ದಾರೆ.

ಬೀದರ್​ ಜಿಲ್ಲೆಯ ಬೀದರ್ ತಾಲೂಕಿನ ಅತಿವಾಳ ಗ್ರಾಮದ ರೈತ ಶಾಲಿವಾನ್ ತಮ್ಮ ಎರಡು ಎಕರೆಯಷ್ಟು ಜಮೀನಿನಲ್ಲಿ ಹಿರೇಕಾಯಿ ಬೆಳೆಸಿ ಎರಡು ದಿನಕ್ಕೊಮ್ಮೆ 10 ಸಾವಿರ ಆದಾಯ ಗಳಿಸುತ್ತಿದ್ದಾರೆ. ಪ್ರತಿ ವರ್ಷ ಉದ್ದು, ಸೋಯಾ, ಹೆಸರು ಮತ್ತು ಕಬ್ಬು ಬೆಳೆ ಬೆಳೆದು ರೈತ ಶಾಲಿವಾನ್ ಕೈ ಸುಟ್ಟುಕೊಳ್ಳುತ್ತಿದ್ದರು. ಈಗ ಈ ಬೆಳೆಗಳಿಗೆ ಗುಡ್ ಬೈ ಹೇಳಿ ತೋಟಗಾರಿಕೆ ಬೆಳೆಯ ಕಡೆಗೆ ಒಲವು ತೋರಿಸಿ ಅದರಲ್ಲಿ ಶ್ರಮಪಟ್ಟು ಕೆಲಸ ಮಾಡಿ ಉತ್ತಮವಾದ ಆದಾಯ ಗಳಿಸುತ್ತಿದ್ದಾರೆ.

ಹಿರೇಕಾಯಿ ಕಳೆದೊಂದು ತಿಂಗಳಿಂದ ನಿರಂತರವಾಗಿ ಒಂದು ದಿನ ಬಿಟ್ಟು ಒಂದು ಕಟಾವಿವಗೆ ಬರುತ್ತಿದೆ. ಪ್ರತಿಯೊಂದು ಸಲ ಕಟಾವು ಮಾಡಿದಾಗ ಒಂದು ಕ್ವಿಂಟಾಲ್​ವರೆಗೂ ಉತ್ತಮ ಗುಣಮಟ್ಟದ ಹಿರೇಕಾಯಿ ಮಾರಾಟಕ್ಕೆ ಲಭ್ಯವಾಗುತ್ತಿದೆ. 10 ರಿಂದ 15 ಸಾವಿರ ರೂಪಾಯಿವರೆಗು ಆದಾಯ ಬರುತ್ತಿದೆ. ಮಾರುಕಟ್ಟೆಯಲ್ಲಿಯೂ ಹಿರೇಕಾಯಿಗೆ ಉತ್ತಮವಾದ ಬೆಲೆ ಸಿಗುತ್ತಿದ್ದು ಈ ರೈತನಿಗೆ ಹೆಚ್ಚಿನ ಲಾಭ ಬರುತ್ತಿದೆ. ಹಿರೇಕಾಯಿ ಬೆಳೆಸಿ ನಾನು ಹೆಚ್ಚಿನ ಲಾಭ ಪಡೆದುಕೊಳ್ಳುತ್ತಿದ್ದು ತೋಟಗಾರಿಕೆ ಬೆಳೆ ನನಗೆ ಕೈ ಹಿಡಿದಿದೆ ಎನ್ನುತ್ತಿದ್ದಾರೆ ರೈತ ಶಾಲಿವಾನ್.

ಅತಿವಾಳ ಗ್ರಾಮದ ರೈತ ಶಾಲಿವಾನ್ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿಯನ್ನು ಆಳವಡಿಸಿಕೊಂಡು ಪ್ರಗತಿಪರ ರೈತನೆನಿಸಿಕೊಂಡಿದ್ದಾರೆ. ಪ್ರಗತಿಪರ ಶಾಲಿವಾನ್ ಕಳೆದ 20 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಹೊಸ ತಂತ್ರಜ್ಞಾನವನ್ನು ಆಳವಡಿಕೊಳ್ಳುವಲ್ಲಿ ಮುಂದಿದ್ದು, ತಮ್ಮ ಜಮೀನಿನಲ್ಲಿ ನೂತನ ಅವಿಷ್ಕಾರವನ್ನು ಮಾಡುತ್ತಿದ್ದಾರೆ. ಬಹಳಷ್ಟು ರೈತರು ಕೃಷಿಯಲ್ಲಿ ನಷ್ಟವಾಯಿತು ಎಂದು ಅಲವತ್ತುಕೊಳ್ಳುತ್ತಿದ್ದರೆ ಶಾಲಿವಾನ್ ಅವರು ಪ್ರತಿ ವರ್ಷವೂ ಒಂದಲ್ಲ ಒಂದು ವಿನೂತನ ಬೆಳೆಯಿಂದ ಲಾಭಗಳಿಸುತ್ತಿದ್ದಾರೆ.

ಇನ್ನು ಇವರು ತಮ್ಮ ಹೊಲದಲ್ಲಿ ಯಾವುದೆ ಬೆಳೆಯನ್ನು ನಾಟಿ ಮಾಡುವ ಮುನ್ನ ಅದರ ಬಗ್ಗೆ ಸಾಕಷ್ಟು ಅಧ್ಯಯನ ನಡೆಸುತ್ತಾರೆ ಜೊತೆಗೆ ಜಿಲ್ಲೆಯಲ್ಲಿನ ರೈತರು ಯಾವ ಬೆಳೆಯನ್ನ ಹೆಚ್ಚಾಗಿ ಬೆಳೆದಿದ್ದಾರೆಂದು ಮಾಹಿತಿ ಪಡೆದುಕೊಳ್ಳುತ್ತಾರೆ. ನಂತರ ರೈತರು ಹೆಚ್ಚಾಗಿ ಬೆಳೆದ ಬೆಳೆಯನ್ನ ಬಿಟ್ಟು ಇವರು ಬೇರೆ ಬೆಳೆಯನ್ನ ಆಯ್ಕೆ ಮಾಡಿಕೊಂಡು ತಮ್ಮ ಹೊಲದಲ್ಲಿ ನಾಟಿ ಮಾಡುವುದರಿಂದ ಇವರು ಬೆಳೆದ ಬೆಳೆಗೆ ಉತ್ತಮವಾದ ದರ ಸಿಗುತ್ತಿದೆ. ಜೊತೆಗೆ ಮಾರುಕಟ್ಟೆಯಲ್ಲಿಯೂ ಕೂಡ ಇವರು ತಂದ ವಸ್ತುಗಳಿಗೆ ಬೇಡಿಕೆ ಸಿಗುತ್ತಿದೆ.

ಕಳೆದ ಬಾರಿ ಎರಡು ಎಕರೆಯಷ್ಟು ಜಮೀನಿನಲ್ಲಿ ಟೋಮ್ಯಾಟೋ ಬೆಳೆಸಿದ್ದರು, ಆಗ ಇವರಿಗೆ 10 ಲಕ್ಷ ರೂಪಾಯಿಯಷ್ಟು ಲಾಭವಾಗಿತ್ತು. ಹೀಗಾಗಿ ಇವರು ನಷ್ಟ ಎಂಬುವುದೇ ಕಂಡಿಲ್ಲ. ಒಟ್ಟಿನಲ್ಲಿ ರೈತ ಶಾಲಿವಾನ್ ಕೊಳಾರೆ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ. ಇವರ ರೀತಿ ಎಲ್ಲ ರೈತರು ಪ್ರಯೋಗಾತ್ಮಕ ಕೃಷಿಯನ್ನು ಅಳವಡಿಸಿಕೊಳ್ಳಬೇಕು. ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಉತ್ತಮ ಆದಾಯ ಗಳಿಸೋ ತೋಟಗಾರಿಕೆ ಬೆಳೆ ಬೆಳೆಯಲು ಎಲ್ಲ ರೈತರು ಮುಂದೆ ಬರಬೇಕು.

ವರದಿ-ಸುರೇಶ್ ನಾಯಕ್ ಟಿವಿ9 ಬೀದರ್

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್