AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಶಾರ್ಟ್ ಸರ್ಕ್ಯೂಟ್​ ಪರಿಣಾಮ; ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ

ರಾಮಲಿಂಗ ಬಿರಾದಾರಗೆ ಸೇರಿದ‌ 4 ಎಕರೆ ಕಬ್ಬು ಬೆಂಕಿಗಾಹುತಿ ಆಗಿದೆ. ಕಟಾವಿಗೆ ಬಂದಿದ್ದ ಕಬ್ಬು ಸುಟ್ಟಿರುವ ಕಾರಣ ಐದು ಲಕ್ಷದ ವರೆಗೆ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಈ ನಷ್ಟಕ್ಕೆ ಕಾರಣರಾದವರಿಂದಲೆ ಪರಿಹಾರಕ್ಜೆ ರೈತ ಆಗ್ರಹ ವ್ಯಕ್ತಪಡಿಸಿದ್ದಾರೆ.

ಬೀದರ್: ಶಾರ್ಟ್ ಸರ್ಕ್ಯೂಟ್​ ಪರಿಣಾಮ; ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ
ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ
TV9 Web
| Edited By: |

Updated on: Mar 22, 2022 | 11:22 AM

Share

ಬೀದರ್: ಇಲ್ಲಿನ ಬಸವಕಲ್ಯಾಣ ತಾಲೂಕಿನ ಗುಂಡೂರ ಗ್ರಾಮದ ರೈತ ರಾಮಲಿಂಗ ಬಿರಾದಾರಗೆ ಸೇರಿದ 4 ಎಕರೆ ಹೊಲದಲ್ಲಿ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಕಬ್ಬು ಬೆಳೆ ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಹೊಲಕ್ಕೆ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ. ರಾಮಲಿಂಗ ಬಿರಾದಾರಗೆ ಸೇರಿದ‌ 4 ಎಕರೆ ಕಬ್ಬು ಬೆಂಕಿಗಾಹುತಿ ಆಗಿದೆ. ಕಟಾವಿಗೆ ಬಂದಿದ್ದ ಕಬ್ಬು ಸುಟ್ಟಿರುವ ಕಾರಣ ಐದು ಲಕ್ಷದ ವರೆಗೆ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಈ ನಷ್ಟಕ್ಕೆ ಕಾರಣರಾದವರಿಂದಲೆ ಪರಿಹಾರಕ್ಜೆ ರೈತ ಆಗ್ರಹ ವ್ಯಕ್ತಪಡಿಸಿದ್ದಾರೆ.

ರಾಯಚೂರು: ಚಿನ್ನದಂಗಡಿಯಲ್ಲಿ ಕೆಲಸಕ್ಕಿದ್ದು ಅಲ್ಲೇ ಕಳ್ಳತನ ಮಾಡುತ್ತಿದ್ದವರ ಬಂಧನ

ಚಿನ್ನದಂಗಡಿಯಲ್ಲಿ ಕೆಲಸಕ್ಕಿದ್ದು, ಅಲ್ಲೆ ನಿತ್ಯ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಉಂಡ ಮನೆಗೆ ದ್ರೋಹ ಬಗೆದ ಕೆಲಸಗಾರರನ್ನು ಅರೆಸ್ಟ್ ಮಾಡಲಾಗಿದೆ. ಸಿಸಿಟಿವಿ ಆಫ್ ಮಾಡಿ ನಿತ್ಯ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ರಾಯಚೂರು ನಗರದ ಚಿನ್ನದಂಗಡಿಯೊಂದರಲ್ಲಿ ಕಳ್ಳತನ ನಡೆದಿತ್ತು. ನೇತಾಜಿನಗರ ಪೊಲೀಸರಿಂದ ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್ ಆಗಿದ್ದಾರೆ. ನಿಖಿಲ್ (18) ಹಾಗೂ ಲಕ್ಷ್ಮಿಕಾಂತ (24) ಬಂಧಿತ ಆರೋಪಿಗಳು. ಬಂಧಿತರಿಂದ 11 ಲಕ್ಷ 86 ಸಾವಿರ ಮೌಲ್ಯದ 205 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಬಂಗಾರದ ಉಂಗುರಗಳು, ತಾಳಿಸರ, ಸರಗಳು, ನೆಕ್ಲೆಸ್ ಜಪ್ತಿ ಮಾಡಲಾಗಿದೆ. ಕಳೆದೊಂದು ವರ್ಷದಿಂದ ಕೆಲಸ ಮಾಡುತ್ತಿದ್ದ ಆರೋಪಿ ನಿಖಿಲ್ ಮತ್ತು ಲಕ್ಷ್ಮೀಕಾಂತ್, ಲಾಕರ್ ನಂಬರ್ ಹಾಗೂ ಸಿಸಿಟಿವಿ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದರು. ಮಾಲೀಕರಿಲ್ಲದ ವೇಳೆ ಸಿಸಿಟಿವಿ ಕನೆಕ್ಷನ್ ಆಫ್ ಮಾಡಿ ಸಣ್ಣ ಪ್ರಮಾಣದಲ್ಲಿ ಚಿನ್ನ ಕಳ್ಳತನ ಮಾಡುತ್ತಿದ್ದರು. ಹೀಗೆ ಕಳೆದೊಂದು ತಿಂಗಳಿಂದ ನಿತ್ಯ ಚಿನ್ನ ಕದಿಯುತ್ತಿದ್ದ ಆರೋಪಿಗಳು, ಲಕ್ಷಾಂತರ ರೂ.ಮೌಲ್ಯದ ಒಟ್ಟು 251 ಗ್ರಾಂ ಚಿನ್ನಾಭರಣವನ್ನು ಆರೋಪಿಗಳು ಕದ್ದಿದ್ದರು. ಇತ್ತೀಚೆಗೆ ರಿಪೇರಿ ಸಂಬಂಧ ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಲಾಗಿತ್ತು. ಆಗ ನಿತ್ಯ ಸಿಸಿಟಿವಿ ಆಫ್ ಆಗುತ್ತಿರೋದು ಬೆಳಕಿಗೆ ಬಂದಿದೆ. ನಂತರ ಅಂಗಡಿಯಲ್ಲಿನ ಚಿನ್ನಾಭರಣದ ಮಾಹಿತಿ ಪಡೆದಾಗ ಕಳ್ಳತನ ಬೆಳಕಿಗೆ ಬಂದಿದೆ. ಈ ಬಗ್ಗೆ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಜಯನಗರ: ಸುಟ್ಟ ಗಾಯಗಳಿಂದ ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ಸಾವು

ಸುಟ್ಟ ಗಾಯಗಳಿಂದ ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ಎ.ನಾಗರಾಜ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಾ.1 ರಂದು ಹೊಸಪೇಟೆ ತಾಲೂಕಿನ ಡಣಾಪುರ ಬಳಿಯ ಬಿಎಂಎಂ ಇಸ್ಪಾತ್ ಕಾರ್ಖಾನೆಯಲ್ಲಿ ವೇಸ್ಟ್ ಮೆಟೀರಿಯಲ್ ಮೈ ಮೇಲೆ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೀದರ್: ಸಕ್ಕರೆ ಕಾರ್ಖಾನೆ ತ್ಯಾಜ್ಯ ಹಳ್ಳದ ನೀರಿಗೆ; ನಾಲ್ಕೈದು ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ

ಇದನ್ನೂ ಓದಿ: Crime News: ಕೌಟುಂಬಿಕ ಕಲಹ ಹಿನ್ನೆಲೆ; ಚಾಕುವಿನಿಂದ ಪತ್ನಿ ಕುತ್ತಿಗೆ ಕೊಯ್ದು ಪತಿ ಆತ್ಮಹತ್ಯೆಗೆ ಯತ್ನ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ