AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ
ರೈತರ ಪ್ರತಿಭಟನೆ
TV9 Web
| Edited By: |

Updated on: Sep 14, 2022 | 3:24 PM

Share

ಬೀದರ್: ಕಾರಂಜಾ ಡ್ಯಾಂ (Karanja Dam) ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು (Farmers) ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಶ ಮುಂಡನೆ ಮಾಡಿಸಿಕೊಳ್ಳುವ‌ ಮುಕಾಂತರ ಸರಕಾರದ ಗಮನ ಸೇಳೆಯಲು ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ, ರೈತರು ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ 76 ದಿನದಿಂದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.

ಡ್ಯಾಂ‌ ನಿರ್ಮಾಣದ ವೇಳೆ ಸೂಕ್ತ ವೈಜ್ಞಾನಿಕ ಪರಿಹಾರ ಕೊಡುವುದಾಗಿ ಸರ್ಕಾರ ರೈತರ ಜಮೀನು ‌ಸ್ವಾಧೀನ‌ ಪಡಿಸಿಕೊಂಡಿತ್ತು. ಡ್ಯಾಂ‌ ನಿರ್ಮಾಣದಿಂದ ರೈತರು 15 ಸಾವಿರ ಎಕರೆಯಷ್ಟು ‌ಜಮೀನು‌ ಕಳೆದುಕೊಂಡಿದ್ದರು. ಜಮೀನು ಕಳೆದುಕೊಂಡ ‌ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ಕೊಡದೆ ಎಕರೆಗೆ ಹತ್ತು ಸಾವಿರ ಕೊಟ್ಟಿತ್ತು. ರೈತರು ಸೂಕ್ತ ಪರಿಹಾರ ಕೊಡುವಂತೆ 1975 ರಿಂದ ಪ್ರತಿಭಟನೆ ‌ಮಾಡುತ್ತಲೆ ಬಂದಿದ್ದಾರೆ.

ಆದರೆ ಇಲ್ಲಿಯ ವರೆಗೂ ಕೂಡಾ ಯಾವ ಸರಕಾರ ರೈತರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ ರೈತರು ಕಳೆದ 76 ದಿನಗಳಿಂದ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಕಾರಂಜಾ ಜಲಾಶಯ ದಿಂದ 28 ಹಳ್ಳಿಗಳ ರೈತರು ಭೂಮಿ ಮನೆಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ