AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಚಿತ್ರಾನ್ನ ತಿಂದು ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ

ಬೀದರ್​ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳು ಬುಧವಾರ ಬೆಳಗ್ಗೆ ಉಪಹಾರಕ್ಕೆ ಚಿತ್ರಾನ್ನ ತಿಂದಿದ್ದಾರೆ. ಬಳಿಕ ವಾಂತಿ-ಭೇದಿಯಿಂದ ಬಳಲಿದ್ದಾರೆ.

ಬೀದರ್​: ಚಿತ್ರಾನ್ನ ತಿಂದು ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ
ಮಕ್ಕಳು
ಸುರೇಶ್ ನಾಯಕ್
| Edited By: ವಿವೇಕ ಬಿರಾದಾರ|

Updated on:Nov 20, 2024 | 2:03 PM

Share

ಬೀದರ್, ನವೆಂಬರ 13: ಹುಮ್ನಾಬಾದ್ (Humnabad) ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ ಚಿತ್ರಾನ್ನ ಸೇವಿಸಿದ್ದಾರೆ. ಬಳಿಕ, ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ, ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ರಾತ್ರಿ ಉಳಿದ ಅನ್ನಕ್ಕೆ ಬೆಳಗ್ಗೆ ಒಗ್ಗರಣೆ ಹಾಕಿ, ಮಕ್ಕಳಿಗೆ ತಿನ್ನಲು ನೀಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಎಂಎಲ್​ಸಿ ಭೀಮರಾವ್ ಪಾಟೀಲ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಕಲುಷಿತ ನೀರು ಸೇವಿಸಿ ಗ್ರಾಮಸ್ಥರು ಅಸ್ವಸ್ಥ

ಎರಡು ತಿಂಗಳ ಹಿಂದೆ ಬೀದರ ತಾಲ್ಲೂಕಿನ ಚಟನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರೀದಾಬಾದ ಗ್ರಾಮದಲ್ಲಿ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ವಿಚಾರವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳಿಗೆ ತಿಳಿಸದೆ ಕಾಮಗಾರಿ ಕೈಗೊಳ್ಳಲಾಗಿತ್ತು. ಈ ಕಾಮಗಾರಿ ಕುಡಿಯುವ ನೀರಿನ ಪೈಪ್​ಲೈನ್​ ಹಾದು ಹೋದ ದಾರಿಯಲ್ಲೇ ನಡೆದಿತ್ತು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

ಇದರಿಂದ ಕುಡಿಯುವ ನೀರಿನ ಪೈಪ್​​ಲೈನ್​ಗೆ ಹಾನಿಯಾಗಿ ಜು. 25 ರಂದು ಚರಂಡಿಯ ಕಲುಷಿತ ನೀರು ಪೈಪ್‌ಲೈನ್ ನೀರಿಗೆ ಸೇರಿತ್ತು. ಇದೇ ನೀರನ್ನು ಕುಡಿದು 21 ಜನರು ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಜಿಲ್ಲಾ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Wed, 13 November 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ