AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಕಲುಷಿತಗೊಳ್ಳುತ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆಯ ನೀರು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ, ಪುರಾತತ್ವ ಇಲಾಖೆ

ಅದು ನೂರಾರು ವರ್ಷದಷ್ಟು ಪುರಾತನ ಕೆರೆ, ಕೆರೆಯ ಸುತ್ತಮುತ್ತಲೂ ನೂರಾರು ಎಕರೆಯಷ್ಟು ಸುಂದರ ಅರಣ್ಯ ಪ್ರದೇಶವಿದೆ. ಇಲ್ಲಿನ ಅರಣ್ಯದಲ್ಲಿ ನೂರಾರು ವಿವಿಧ ಜಾತಿ ಔಷಧಿ ಸಸ್ಯಗಳು, ಹತ್ತಾರು ಬಗೆಯ ಪಕ್ಷಿಗಳು ಇಲ್ಲಿವೆ. ಆದರೆ ಇಂತಹ ಐತಿಹಾಸಿಕ ಕೆರೆ ಮಲೀನವಾಗುತ್ತಿದ್ದು, ಕೆರೆ ತನ್ನ ಅಂಧವನ್ನೇ ಕಳೆದುಕೊಂಡಿದೆ.

ಬೀದರ್​: ಕಲುಷಿತಗೊಳ್ಳುತ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆಯ ನೀರು; ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತ, ಪುರಾತತ್ವ ಇಲಾಖೆ
ಕಲುಷಿತಗೊಳ್ಳುತ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆಯ ನೀರು
ಕಿರಣ್ ಹನುಮಂತ್​ ಮಾದಾರ್
|

Updated on:Mar 07, 2023 | 12:49 PM

Share

ಬೀದರ್​: ಖಾಲಿಯಾಗುತ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆಯ ನೀರು. ಪ್ರತಿ ನಿತ್ಯ ಲಕ್ಷಾಂತರ ಲೀಟರ್ ನೀರು ಕೆರೆಯಿಂದ ಹೊರ ಹೋಗುತ್ತಿದೆ. ಇದರ ಜೊತೆ ಇಲ್ಲಿಗೆ ಬರುವ ಭಕ್ತರು ಪೂಜೆ ಪುನಸ್ಕಾರ ಮಾಡಿದ ವಸ್ತುಗಳನ್ನ ಕೆರೆಗೆ ತಂದು ಹಾಕುತ್ತಿದ್ದು, ಇದರಿಂದಾಗಿ ಕೆರೆಯ ನೀರು ಮಲೀನವಾಗುತ್ತಿದೆ. ಅದನ್ನ ಕುಡಿದು ವಿಷಕಾರಿ ಕುಡಿದು ಮೀನುಗಳು, ಪಕ್ಷಿಗಳು ಸಾವನ್ನಪ್ಪುತ್ತಿವೆ. ಆದರೂ ಕೂಡ ಜಿಲ್ಲಾಡಳಿತ, ಪುರಾತತ್ವ ಇಲಾಖೆ ಮಾತ್ರ ತಲೆಕೆಡಿಸಿಕೊಂಡಿಲ್ಲ.

ಹೌದು ಬೀದರ್ ನಗರದಲ್ಲಿರುವ ಪಾಪವಿನಾಶ ಮಂದಿರ ಒಂದು ಶತಮಾನದಷ್ಟು ಹಳೆಯದಾದ ದೇವಸ್ಥಾನ, ಶ್ರೀರಾಮಚಂದ್ರ ರಾವಣನನ್ನ ಯುದ್ದದಲ್ಲಿ ಹತ್ಯೆ ಮಾಡಿದಾಗ, ಶ್ರಿರಾಮ ತಪ್ಪಸ್ಸು ಮಾಡಿ ಈ ಕೆರೆಯಲ್ಲಿ ಸ್ನಾನ ಮಾಡಿ ಪಾಪನಾಶ ಮಾಡಿಕೊಂಡು ಹೋಗುತ್ತಾನೆ. ಇದರಿಂದ ಅಂದಿನಿಂದ ಈ ದೇವಸ್ಥಾನಕ್ಕೆ ಪಾಪನಾಶ ಮಂದಿರ ಎಂದು ಹೆಸರು ಬರುತ್ತದೆ. ಈ ದೇವಸ್ಥಾನದಲ್ಲಿ ಉದ್ಘವ ಲಿಂಗವಿದ್ದು, ರಾಜ್ಯವಷ್ಟೇ ಅಲ್ಲದೇ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಮಹರಾಷ್ಟ್ರದಿಂದ ಈ ಶ್ರಾವಣ ಮಾಸದಲ್ಲಿ ಸಾಗೋರಾಪಾದಿಯಲ್ಲಿ ಭಕ್ತರ ದಂಡು ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಹೋಗುತ್ತಾರೆ. ಆದರೆ ಇಂತಹ ಕೆರೆಯಿಂದು ಮಲೀನವಾಗುತ್ತಿದೆ. ಜೊತೆಗೆ ಕೆರೆಯ ಲಕ್ಷಾಂತರ ಲೀಟರ್ ನೀರು ಕೂಡ ವೇಸ್ಟ್ ಆಗಿ ಹರಿದು ಹೋಗುತ್ತಿದೆ. ಸುಮಾರು 125 ಎಕರೆ ವಿಸ್ತೀರ್ಣದ ಬೃಹತ್ತಾದ ಐತಿಹಾಸಿಕ ಕೆರೆಯ ಸುತ್ತಮುತ್ತ ನೂರಾರು ಎಕರೆಯಷ್ಟೂ ಸುಂದರ ಪರಿಸರ ಕಾಡಿದೆ. ಇಲ್ಲಿನ ಮಾನವ ನಿರ್ಮಿತ ಕಾಡಿನಲ್ಲಿ ನೂರಾರು ಔಷಧಿಯ ಸಸ್ಯಗಳಿವೆ. ಇದರ ಜೊತೆಗೆ ವಿವಿಧ ಬಗೆಯ ಚಿಟ್ಟೆಗಳು, ಪಕ್ಷಗಳು, ನವಿಲುಗಳ ವಾಸಸ್ಥಾನ ಇದಾಗಿದೆ. ಆದರೆ ಇಂದು ಈ ಕೆರೆ ಮಲೀನವಾಗುತ್ತಿದ್ದು, ಜಲಚರಗಳ, ಪಕ್ಷಿಗಳ ಸಾವಿಗೆ ಕಾರಣವಾಗುತ್ತಿದೆ.

ಇದನ್ನೂ ಓದಿ:Vijaya Sankalp Yatra:ಇಂದು ಕಿತ್ತೂರಿನಲ್ಲಿ ಬಿಜೆಪಿ ಪವರ್ ಶೋ..ನಾಳೆ ಬೀದರ್​ನಲ್ಲಿ ‘ಶಾ’ಗಾಗಿ ಭರ್ಜರಿ ಗಿಫ್ಟ್​ ರೆಡಿ

ಇನ್ನು ದೇವಸ್ಥಾನದ ಪಕ್ಕದಲ್ಲಿರುವ ಶಿವನಗರದ ಬಡಾವಣೆಯ ಸಾವಿರಾರು ಲೀಟರ್ ಡ್ರೈನೇಜ್ ನೀರು ಇಲ್ಲಿನ ಕೆರೆಗೆ ಸೇರುತ್ತಿದೆ. ಇದರಿಂದ ಕೆರೆಯ ನೀರು ಮಲೀನವಾಗುತ್ತಿದ್ದು ಮೀನುಗಳು ಸಾವನ್ನಪ್ಪುತ್ತಿವೆ. ಈ ದೇವಸ್ಥಾನಕ್ಕೆ ಬರುವ ಭಕ್ತರು ಕೂಡ ತಮ್ಮ ಮನೆಯಲ್ಲಿ ಪೂಜೆ ಪುನಸ್ಕಾರ ಮಾಡಿದ ವಸ್ತುಗಳನ್ನ ತಂದು ಈ ಕೆರೆಯಲ್ಲಿ ಹಾಕುತ್ತಿದ್ದಾರೆ ಇದರಿಂದ ಕೆರೆಯ ನೀರು ವಿಷವಾಗತೊಡಗಿದ್ದು ಇಂದರಿಂದಾಗಿ ಕೆರೆಯಲ್ಲಿರುವ ಜಲಚರಗಳ ಪ್ರಾಣಹಾನಿಗೂ ಕೂಡಾ ಕಾರಣವಾಗುತ್ತಿವೆ. ಇದು ಸಹಜವಾಗಿಯೇ ಇಲ್ಲಿಗೆ ಬರುವ ಭಕ್ತರಲ್ಲಿ ಅಸಮಾದಾನಕ್ಕೆ ಕಾರಣವಾಗುತ್ತಿದ್ದು ಇಲ್ಲಿನ ಕೆರೆಯನ್ನ ಸ್ವಚ್ಚಗೊಳಿಸಿ ಸುಂದರವಾದ ಪರಿಸರ ಕಾಪಾಡಿ ಎಂದು ಇಲ್ಲಿನ ಭಕ್ತರು ವಿನಂತಿಸುತ್ತಿದ್ದಾರೆ.

ಪ್ರತಿನಿತ್ಯ ಲಕ್ಷಾಂತರ ಲೀಟರ್​ ನೀರು ಈ ಕೆರೆಯಿಂದ ಹರಿದುಹೋಗುತ್ತಿದ್ದು , ಇದೇ ನೀರನ್ನ ಖಾಸಗಿ ವ್ಯಕ್ತಿಗಳಿಗೆ ಸೇರಿದ ಹತ್ತಾರು ಎಕರೆಯ ಜಮೀನುಗಳಿಗೆ ಬಳಸಿಕೊಂಡು ತಮ್ಮ ಹೊಲದಲ್ಲಿ ತರಕಾರಿ ಸೇರಿದಂತೆ ಇನ್ನಿತರ ಬೆಳೆಯನ್ನ ಬೆಳೆಯುತ್ತಿದ್ದಾರೆ. ಇದರಿಂದ ಖಾಸಗಿ ವ್ಯಕ್ತಿಗಳು ಜಮೀನು ಹಸಿರಾಗಿದ್ದು ಅವರು ಬೆಳೆ ಬೆಳೆದುಕೊಂಡು ಹಣ ಗಳಿಸುತ್ತಿದ್ದಾರೆ. ಆದರೆ ಕೆರೆಯ ನೀರು ಖಾಲಿಯಾಗುತ್ತಿರುವುದರಿಂದ ಜಲಚರ, ಪಕ್ಷಿಗಳ ಸಾವಿಗೆ ಕಾರಣವಾಗಲಿದ್ದು, ಕೆರೆಯ ನೀರನ್ನ ಹೊರಗೆ ಬಿಡುವುದನ್ನ ನೀಲ್ಲಿಸಿ ಎಂದು ಇಲ್ಲಿನ ಜನರು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಬೀದರ್​​​: ಪ್ರತ್ಯೇಕ ಘಟನೆಗಳಲ್ಲಿ ತಾಯಿಯ ಕಣ್ಣೆದುರೇ ಮಗನ ಕೊಲೆ, ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಇನ್ನು ಪ್ರತಿವರ್ಷ ಈ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಹಣವನ್ನ ದೇಣಿಗೆ ರೂಪದಲ್ಲಿ ಕೊಡುತ್ತಿದ್ದಾರೆ. ಆದರೆ ಇಲ್ಲಿಗೆ ಬಂದಿರುವ ಹಣವನ್ನ ಸರಕಾರ ಪಡೆದುಕೊಳ್ಳುತ್ತಿದ್ದು, ದೇವಾಲಯದ ಕೆರೆಯ ಸ್ವಚ್ಚತೆಗೆ ಮಾತ್ರ ಗಮನಹರಿಸದಿರುವುದು ವಿಪರ್ಯಾಸವೇ ಸರಿ. ಲಕ್ಷಾಂತರ ಭಕ್ತರನ್ನ ಹೊಂದಿರುವ ಈ ದೇವಾಲಯಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವ ಅನಿವಾರ್ಯತೆ ಈಗ ಸರಕಾರದ ಮೇಲಿದೆ. ಏನೇ ಇರಲಿ ಕೆರೆಗೆ ಸೇರುತ್ತಿರುವ ವಿಷಕಾರಿ ನೀರನ್ನ ತಡೆದು ಸ್ವಚ್ಚವಾಗಿ ಇಡಿ ಎಂದು ಇಲ್ಲಿನ ಭಕ್ತರು ಮನವಿ ಮಾಡುತ್ತಿದ್ದಾರೆ.

ವರದಿ: ಸುರೇಶ್ ನಾಯಕ್ ಟಿವಿ9 ಬೀದರ್

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:48 pm, Tue, 7 March 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ