AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮದಾರ ಸಾಹೆಬ್ ಉರೂಸ್​ಗೆ ಹಿಂದೂಗಳದ್ದೇ ಸಾರಥ್ಯ! ಕೋಮು ಸೌಹಾರ್ದತೆಗೆ ಸಾಕ್ಷಿ ಕೋಹಿನೂರು ಜಾತ್ರೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರು ಗ್ರಾಮದಲ್ಲಿ ಹಿಂದೂ ಮುಸ್ಲಿಮರು ಒಂದಾಗಿ ಮದಾರ ಸಾಹೇಬ್ ಉರೂಸ್ ಅದ್ದೂರಿಯಾಗಿ ಆಚರಿಸುತ್ತಾರೆ. ಭೇದಭಾವ ಮರೆತು ಹಿಂದೂ ಮುಸ್ಲಿಮರು ಸೇರಿಕೊಂಡು ಉರೂಸ್ ಆಚರಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಉರೂಸ್​ಗೆ ಸಾವಿರಾರು ಸಂಖ್ಯೆಯಲ್ಲಿ ಉಭಯ ಸಮುದಾಯಗಳ ಜನ ಬಂದು ಭಾಗವಹಿಸುತ್ತಾರೆ.

ಬೀದರ್: ಮದಾರ ಸಾಹೆಬ್ ಉರೂಸ್​ಗೆ ಹಿಂದೂಗಳದ್ದೇ ಸಾರಥ್ಯ! ಕೋಮು ಸೌಹಾರ್ದತೆಗೆ ಸಾಕ್ಷಿ ಕೋಹಿನೂರು ಜಾತ್ರೆ
ಉರೂಸ್​ನಲ್ಲಿ ದೀಪದ ಮೆರವಣಿಗೆ
Follow us
ಸುರೇಶ ನಾಯಕ
| Updated By: Ganapathi Sharma

Updated on: Nov 25, 2024 | 8:09 AM

ಬೀದರ್, ನವೆಂಬರ್ 24: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರು ಗ್ರಾಮದ ಹೊವಲಯದಲ್ಲಿರುವ ಜಿಂದಾಶಾ ಮದಾರ ಸಾಹೇಬ್ ದರ್ಗಾದ ಜಾತ್ರೆಯೂ ಹಿಂದೂ ಹಾಗೂ ಮುಸ್ಲಿಂ ಸಹೋದರತ್ವದ ಪ್ರತೀಕವಾಗಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಜಾತ್ರೆಯಿದಾಗಿದ್ದು ಗ್ರಾಮದ ಹಿರಿಯರು ಹಲವಾರು ವರ್ಷಗಳಿಂದ ಭೇದಭಾವ ಇಲ್ಲದೆ ಎಲ್ಲರೂ ಸೇರಿಕೊಂಡು ಮದಾರ ಸಾಹೇಬ್ ಉರೂಸು (ಜಾತ್ರೆಯನ್ನ) ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಜಿಂದಾಶಾ ಮದಾರಸಾಹೇಬ್ ಸಮಾಧಿಗೆ ಹಿಂದೂಗಳ ಮನೆಯಿಂದ ಗಂಧ, ಎಣ್ಣೆ, ದೀಪ ತಂದು ಅರ್ಪಿಸುವ ಸಂಪ್ರದಾಯ ಶತಮಾನದಿಂದಲೂ ರೂಢಿಯಲ್ಲಿದೆ. ಇಲ್ಲಿನ ಬಹುತೇಕ ಚಟುವಟಿಗೆ ಹಿಂದೂಗಳೇ ಸಾರಥ್ಯವಹಿಸುವುದು ವಿಶೇಷವಾಗಿದೆ.

ಕೋಹಿನೂರು ಪಹಾಡ್!

ಶ್ರೀ ಶರಣ, ಸೂಫಿ ಸಂತ ಜಿಂದಾ ಶಾ ಮದಾರ್​ ಸಾಹೇಬರ ದರ್ಗಾ ಕೋಹಿನೂರು ಗ್ರಾಮದಿಂದ 2 ಕಿಲೋ ಮೀಟರ್ ದೂರದಲ್ಲಿದೆ. ಎತ್ತರದ ಗುಡ್ಡ ಪ್ರದೇಶದಲ್ಲಿರುವ ಕಾರಣ ಇದನ್ನ ಕೋಹಿನೂರು ಪಹಾಡ್​ ಎಂದು ಕರೆಯಲಾಗುತ್ತದೆ.

ಮದಾರ್​ ಸಾಹೇಬರ ಹಿನ್ನೆಲೆ

ಸುಮಾರು 600 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಿಂದ ಇಲ್ಲಿಗೆ ವಲಸೆ ಬಂದಿದ್ದ ಮದಾರ್​ ಸಾಹೇಬರು ಇಲ್ಲೇ ನೆಲೆಗೊಂಡಿದ್ದರು. ಇವರಯ ಸೂಫಿ ಸಂತರಾಗಿದ್ದರು. ಜತೆಗೆ ಆಯುರ್ವೇದ ವೈದ್ಯರಾಗಿದ್ದರು. ಸರ್ವ ಧರ್ಮ ಸಮನ್ವಯ ತತ್ವವನ್ನ ಈ ಭಾಗದಲ್ಲಿ ಹರಡಿದ್ದ ಅವರು ಮುಂದೆ ಇದೇ ಸ್ಥಳದಲ್ಲೇ ಜೀವಂತ ಸಮಾಧಿಯಾದರು ಎಂಬ ಪ್ರತೀತಿ ಇದೆ. ಇದೇ ಕಾರಣಕ್ಕೆ ಜಿಂದಾ ಶಾ ಮದಾರ್​ ಸಾಹೇಬರು ಎಂದು ಕರೆಯಲಾಗುತ್ತದೆ. ಮುಂದೆ ಆ ಕಾಲಕ್ಕೆ ಸಲಗರ್ ಎಂಬ ಊರನ್ನು ಆಳುತ್ತಿದ್ದ ರಾಜಾ ವಾಜೀರ್​ ಖಾನ್​ ಮಕ್ಕಳಾಗದ ಕಾರಣ ಮದಾರ್ ಸಾಹೇಬರ ಸಮಾಧಿ ದರ್ಶನ ಪಡೆದಿದ್ದರು. ಬಳಿಕ ಅವರಿಗೆ ಮಕ್ಕಳಾಗಿದ್ದರು. ಹೀಗಾಗಿ ಖುದ್ದು ರಾಜನೇ ಇಲ್ಲೊಂದು ದರ್ಗಾ ಕಟ್ಟಿಸಿದ್ದರು ಎಂದು ಇತಿಹಾಸ ಹೇಳುತ್ತದೆ.

ಮೂರು ದಿನಗಳ ಕಾಲ ಅದ್ದರೂರಿ ಉರೂಸ್

ಪ್ರತಿ ವರ್ಷವೂ ಕೂಡಾ ಮೂರು ದಿನಗಳ ಕಾಲ ಅದ್ದೂರಿಯಾಗಿ ಜಾತ್ರೆ ನಡೆಯುತ್ತದೆ. ದಿಪೋತ್ಸವ, ಅಂತರ್ ರಾಜ್ಯ ಕುಸ್ತಿ ಪಂದ್ಯಗಳು ನಡೆಯುತ್ತವೆ. ಜಾತ್ರೆಯ ಮೊದಲ ದಿನ ಗ್ರಾಮದ ಶಿವಶರಣಪ್ಪ ಅಕ್ಕಾ ಮತ್ತು ಯುಸೂಫ್​ ಸಾಬ್ ಅವರ ಮನೆಯಿಂದ ಶ್ರೀಗಂಧವನ್ನ ರಾತ್ರಿ 11ಗಂಟೆಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ.

Bidar: Madara Saheb Uroos is supported by Hindus, Kohinoor Village Festival is a witness of communal harmony

ಪೈಲ್ವಾನರ ಕುಸ್ತಿ ಪಂದ್ಯ

ಎರಡನೇ ದಿನ ಗ್ರಾಮದ ಬಸವರಾಜ ಮಹಾಜನ್ ಮನೆಯಿಂದ ರಾತ್ರಿ 10 ಕ್ಕೆ ದೀಪವನ್ನು ಅದ್ಧೂರಿ ಮೆರವಣಿಗೆ ಮೂಲಕ ದರ್ಗಾಕ್ಕೆ ತೆಗೆದುಕೊಂಡು ಹೋಗಿ ಸಮಾಧಿಗೆ ಬೆಳಗಲಾಗುತ್ತದೆ. ಇನ್ನು ಮೂರನೇ ದಿನ ಮಧ್ಯಾಹ್ನ 2ಗಂಟೆಗೆ ಜಂಗೀ ಪೈಲ್ವಾನರ ಭರ್ಜರಿ ಕುಸ್ತಿ ಪಂದ್ಯಗಳು ನಡೆಯುತ್ತವೆ.

ಇದನ್ನೂ ಓದಿ: ಬೀದರ್​: 18.6 ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು, 11 ವರ್ಷದಿಂದ ಕಚೇರಿಗೆ ಅಲೆಯುತ್ತಿರುವ ರೈತ

ಈ ಭಾವೈಕತೆಯೆ ಜಾತ್ರೆಗೆ ನೂರಾರು ಹಿಂದೂ ಮುಸ್ಲಿಮರು ಬಂದು ತಮ್ಮ ಇಷ್ಟಾರ್ಥಗಳನ್ನ ಈಡೆರಿಸಿಕೊಂಡು ಹೋಗುತ್ತಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ