AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಸಂಕಷ್ಟಕ್ಕೆ ಸಿಲುಕಿದ ಕಲ್ಲಂಗಡಿ ಬೆಳೆಗಾರ; ದರ ಕುಸಿತ, ಕಾಡುಹಂದಿ ಕಾಟದಿಂದ ರೈತ ಕಂಗಾಲು

ಮೂರು ತಿಂಗಳುಗಳ ಕಾಲ ಬೀದರ್​ ಜಿಲ್ಲೆಯ ಆ ರೈತ ಕಲ್ಲಂಗಡಿ ಬೆಳೆಯನ್ನ ಚೆನ್ನಾಗಿ ನೋಡಿಕೊಂಡಿದ್ದ. ಕಾಲ ಕಾಲಕ್ಕೆ ಔಷದೋಪಚಾರ, ಗೊಬ್ಬರ ಹಾಕಿ ಬೆಳೆ ಬೆಳೆಸಿದ್ದರು. ಆದರೆ, ಇನ್ನೇನು ಬೆಳೆ ಕೈಗೆ ಬಂತು ಎನ್ನುವಷ್ಟರಲ್ಲಿ ಕಾಡು ಪ್ರಾಣಿಗಳ ಕಾಟದ ಜೊತೆಗೆ ದರಕುಸಿತವಾಗಿದೆ. ಇದು ಸಹಜವಾಗಿಯೇ ಆ ರೈತನನ್ನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ.

ಬೀದರ್​: ಸಂಕಷ್ಟಕ್ಕೆ ಸಿಲುಕಿದ ಕಲ್ಲಂಗಡಿ ಬೆಳೆಗಾರ; ದರ ಕುಸಿತ, ಕಾಡುಹಂದಿ ಕಾಟದಿಂದ ರೈತ ಕಂಗಾಲು
ಕಲ್ಲಂಗಡಿ ಬೆಳೆಗಾರ
ಸುರೇಶ ನಾಯಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 23, 2024 | 3:43 PM

Share

ಬೀದರ್​, ಮೇ.23: ಈ ವರ್ಷ ಬೀದರ್(Bidar) ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಕಲ್ಲಂಗಡಿ(Watermelon)ಯನ್ನ ರೈತರು ಬೆಳೆಸಿದ್ದರು. ಮಾರ್ಚ್, ಎಪ್ರಿಲ್ ಮತ್ತು ಮೇ ಎರಡನೇ ವಾರದ ತನಕ ಕಲ್ಲಂಗಡಿಗೆ ಮಾರುಕಟ್ಟೆಯಲ್ಲಿ ಉತ್ತಮವಾದ ಬೆಲೆಯಿತ್ತು. ಆ ಸಮಯದಲ್ಲಿ ಕಟಾವಿಗೆ ಬಂದಿದ್ದ ಕಲ್ಲಂಗಡಿಯಿಂದ ರೈತರು ಉತ್ತಮವಾದ ಆದಾಯ ಗಳಿಸಿಕೊಂಡಿದ್ದರು. ಆದರೆ, ಈಗ ಕಲ್ಲಂಗಡಿ ಬೆಳೆಸಿದ ರೈತರು, ದರ ಕುಸಿತ ಹಾಗೂ ಕಾಡುಹಂದಿ ಕಾಟದಿಂದ ಆರ್ಥಿಕ ಸಂಕಷ್ಟಕ್ಕೆ  ಸಿಲುಕಿದ್ದಾರೆ.

ದರ ಕುಸಿತಕ್ಕೆ ಕಲ್ಲಂಗಡಿ ಬೆಳೆದ ರೈತ ಕಂಗಾಲು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಿಪ್ಪಾರ್ಗಾ ಗ್ರಾಮದ ರೈತ ಮಹಿಳೆ ಶಿಲ್ಪಾ ಚಂದ್ರಶೇಖರ್ ಮಾಲೀ ಪಾಟೀಲ್ ಅವರು ತಮ್ಮ ಒಂದೂವರೆ ಎಕರೆಯಷ್ಟು ಜಮೀನಿನಲ್ಲಿ ಕಲ್ಲಂಗಡಿ ಬೆಳೆಸಿದ್ದಾರೆ. ಮಾರ್ಚ್​ನಲ್ಲಿ ಕಲ್ಲಂಗಡಿ ನಾಟಿ ಮಾಡಿದ್ದ ಇವರು, ಈಗ ಮೇ ಕೊನೆಯ ವಾರದಲ್ಲಿ ಕಲ್ಲಂಗಡಿ ಕಟಾವಿಗೆ ಬಂದಿದೆ. ಇನ್ನು ಕಲ್ಲಂಗಡಿ ಬೆಳೆ ನಾಟಿ ಮಾಡುವ ಮುನ್ನ ಹನಿ ನೀರಾವರಿ ಪದ್ದತಿಯಲ್ಲಿ ಬೆಳೆಸಲಾಗಿದೆ. ಕಳೆ ಬೆಳೆಯಬಾರದೆಂದು ಪ್ಲ್ಯಾಸ್ಟಿಕ್ ಮಲಚಿಂಗ್ ಪದ್ಧತಿಯಲ್ಲಿ ಕಲ್ಲಗಂಡಿ ಬೆಳೆಸಲಾಗಿದೆ. ಇದರಿಂದಾಗಿ ಬೆಳೆ ಉತ್ತಮವಾಗಿ ಬೆಳೆದಿದ್ದು, ಒಂದೊಂದು ಕಲ್ಲಂಗಡಿ ನಾಲ್ಕರಿಂದ ಐದು ಕೆ.ಜಿವರೆಗೆ ತೂಕ ಬರುತ್ತದೆ.

ಇದನ್ನೂ ಓದಿ:ಬಿಸಿಲಿಗೆ ಬಳಲಿದ್ದ ಗೋಶಾಲೆಯ ಗೋವುಗಳಿವೆ 3 ಸಾವಿರ ಕೆ.ಜಿ ಕಲ್ಲಂಗಡಿ ಕೊಟ್ಟು ಖುಷಿಪಟ್ಟ ಯುವಕರ ತಂಡ

ಕಲ್ಲಂಗಡಿ ಕಟ್ ಮಾಡಿ ನೋಡಿದರೆ ಕೆಂಪು ಕೆಂಪಾಗಿದ್ದು, ತಿನ್ನಲೂ ಕೂಡ ರುಚಿಯಾಗಿದೆ. ಇಷ್ಟಾದರೂ ಕೂಡ ಕಲ್ಲಂಗಡಿಯನ್ನ ತೆಗೆದುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಬಂದರೂ ಕೂಡ ಕೆ.ಜಿಗೆ ಐದು ರೂಪಾಯಿವರೆಗೆ ಕೇಳುತ್ತಿದ್ದು, ಐದು ರೂಪಾಯಿ ದರಕ್ಕೆ ಕಲ್ಲಂಗಡಿ ಮಾರಾಟ ಮಾಡಿದ್ರೆ, ಜಮೀನು, ಉಳುಮೆ, ಬಿತ್ತನೆ, ಔಷದೋಪಚಾರ ಮಾಡಿದ ಖರ್ಚು ಕೂಡ ಬರುವುದಿಲ್ಲ ಎಂದು ರೈತರು ತಮ್ಮ ಅಳಲನ್ನ ತೋಡಿಕೊಳ್ಳುತ್ತಿದ್ದಾರೆ.

ದರ ಇಳಿತದ ನಡುವೆ ಕಾಡುಹಂದಿ ಕಾಟ

ಮೂರು ತಿಂಗಳುಗಳ ಕಾಲ ಕಷ್ಟಪಟ್ಟು ಕಲ್ಲಂಗಡಿಯನ್ನ ಬೆಳೆಸಿದ್ದೇವೆ. ಆದರೆ, ದರ ಕುಸಿತ ನಮ್ಮನ್ನು ಆರ್ಥಿಕ ನಷ್ಟಕ್ಕೆ ತಳ್ಳಿದೆ ಎಂದು ರೈತ ಮಹಿಳೆ ಹೇಳುತ್ತಿದ್ದಾರೆ.  ಇದರ ಜೊತೆಗೆ ಬೆಳೆದ ಕಲ್ಲಂಗಡಿಗೆ ಕಾಡು ಹಂದಿಗಳ ಕಾಟವೂ ಕೂಡ ಇದೆ. ಕಳೆದೊಂದು ತಿಂಗಳಿಂದ ಕಾಡು ಹಂದಿಗಳ ಕಾಟ ಇದ್ದು, ಕಲ್ಲಂಗಡಿ ಬೆಳೆ ಉಳಿಸಿಕೊಳ್ಳಲು ಹಗಲು ರಾತ್ರಿ ಎನ್ನದೆ ಹೊಲದಲ್ಲಿಯೇ ಇದ್ದು ಬೆಳೆ ಉಳಿಕೊಂಡಿದ್ದೇವೆ. ಆದರೆ, ಕಳೆದೊಂದು ವಾರದಿಂದಾಗಿ ಹಂದಿಗಳ ಕಾಟ ವಿಫರಿತವಾಗಿದ್ದು, ಹಿಂಡು ಹಿಂಡಾಗಿ ನುಗ್ಗುವ ಹಂದಿಗಳು ಕಲ್ಲಂಗಡಿಯನ್ನ ತಿಂದು ನಾಶಮಾಡುತ್ತಿವೆಂದು ರೈತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ:ಕಲ್ಲಂಗಡಿ ಅಥವಾ ಕರಬೂಜ, ಬೇಸಿಗೆಗೆ ಯಾವ ಹಣ್ಣು ಒಳ್ಳೆಯದು

ಹಿಂಡು ಹಿಂಡಾಗಿರುವ ಕಾಡುಹಂದಿಗಳನ್ನ ಹೊಡೆಯಲು ಹೋದ ರೈತರ ಮೇಲೆಯೇ ಕಾಡು ಹಂದಿಗಳು ದಾಳಿ ಮಾಡಿದ್ದು, ಹತ್ತಾರು ರೈತರಿಗೆ ಗಾಯಗಳಾಗಿವೆ. ಒಂದು ಕಡೆಗೆ ದರ ಕುಸಿತ, ಇನ್ನೊಂದು ಕಡೆಗೆ ಕಾಡು ಹಂದಿಗಳ ಕಾಟದಿಂದಾಗಿ ಕಲ್ಲಂಗಡಿ ಬೆಳೆಸಿದ ರೈತ ಮಹಿಳೆ ಕಂಗಾಲಾಗಿದ್ದಾಳೆ. ಕಳೆದ ಭಾರಿ ಬರದಿಂದಾಗಿ ನಷ್ಟ ಅನುಭವಿಸಿದ್ದ ರೈತ, ಬೇಸಿಗೆ ಬೆಳೆಯಾದ ಕಲ್ಲಂಗಡಿಯಲ್ಲಾದರೂ ಲಾಭ ಮಾಡಿಕೊಳ್ಳೋಣ ಎಂದರೆ, ದರ ಕುಸಿತ, ಕಾಡು ಪ್ರಾಣಿಗಳ ಹಾವಳಿಂದಾಗಿ ರೈತ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಕಷ್ಟಪಟ್ಟು ಬೆಳೆದ ಕಲ್ಲಂಗಡಿಗೆ ದರ ಕುಸಿತ, ಕಾಡು ಪ್ರಾಣಿಗಳ ಹಾವಳಿಯಿಂದಾಗಿ ರೈತರನ್ನ ಮತ್ತಷ್ಟೂ ಸಂಕಷ್ಟಕ್ಕೆ ತಳ್ಳಿದಂತಾಗಿದೆ. ಸಾಲ ಸೋಲ ಮಾಡಿ, ಬೆಳೆ ಬೆಳೆಸಿ ಕೈಗೆ ಬರುವಷ್ಠರಲ್ಲಿಯೇ ಕಲ್ಲಂಗಡಿಗೆ ದರ ಕುಸಿದಿದೆ. ಈ ಬೆಳೆ ಹಾನಿಗೆ ಸರಕಾರದಿಂದಲೂ ಯಾವುದೇ ಪರಿಹಾರವಿಲ್ಲ. ಹೀಗಾಗಿ ರೈತರು ಆತಂಕದಲ್ಲಿದ್ದು, ಸರಕಾರದಿಂದ ನಮಗೆ ಪರಿಹಾರ ಕೊಡಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುರೇಶ ನಾಯಕ
ಸುರೇಶ ನಾಯಕ

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!