AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್​​ಗೆ ಭಾರಿ ಡಿಮ್ಯಾಂಡ್, ಬೀದರ್​ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ

ಬೀದರ್​ನಲ್ಲಿ ಕಳೆದೆರಡು ವಾರ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಕುಡಿಯುವ ನೀರು ಕೂಡ ಬಿಸಿಯಾಗುತ್ತಿದ್ದು ಜನರು ತಮ್ಮ ತಮ್ಮ ಮನೆಯಲ್ಲಿ ತಂಪು ನೀರು ಇಡಲು ಬಡವರ ಫ್ರಿಡ್ಜ್ ಅಂದರೆ ಕುಂಬಾರ ಮಾಡಿದ ಮಣ್ಣಿನ ಮಡಕೆ ಮೊರೆ ಹೋಗಿದ್ದಾರೆ.

ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್​​ಗೆ ಭಾರಿ ಡಿಮ್ಯಾಂಡ್, ಬೀದರ್​ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ
ಮಡಿಕೆ ವ್ಯಾಪಾರ
ಸುರೇಶ್ ನಾಯಕ್
| Edited By: ವಿವೇಕ ಬಿರಾದಾರ|

Updated on: Mar 10, 2024 | 9:51 AM

Share

ಬೀದರ್​, ಮಾರ್ಚ್​ 10: ಬಿಸಿಲಿನ ತಾಪಮಾನ (Temperature) ಏರುತ್ತಿದಂತೆ ಬಡವರ ಫ್ರಿಡ್ಜ್​ಗೆ ಬಾರಿ ಡಿಮ್ಯಾಂಡ್ ಬಂದಿದೆ. ಎರಡು ವರ್ಷದಿಂದ ವ್ಯಾಪಾರವಿಲ್ಲದೆ ನಷ್ಟ ಅನುಭವಿಸಿದ್ದ ಕುಂಬಾರರಿಗೆ (Potter) ಭರ್ಜರಿ ವ್ಯಾಪಾರವಾಗಿದೆ. ಎರಡು ವರ್ಷದಿಂದ ಆಗದ ವ್ಯಾಪಾರ ಬೇಸಿಗೆಯಲ್ಲಿ ಆಗಿದ್ದು ಕುಂಬಾರರು ಖಷಿಯಲ್ಲಿದ್ದಾರೆ. ಕೊರೊನಾ (Covid) ಸಂಕಷ್ಟ ಬೆಸಿಗೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವ್ಯಾಪಾರವಿಲ್ಲದೆ ನಷ್ಟದಲ್ಲಿದ್ದವರಿಗೆ ಈ ವರ್ಷ ಬಂಪರ್ ವ್ಯಾಪಾರವಾಗಿದೆ. ಮಡಿಕೆಯಲ್ಲಿನ‌ (Pot) ನೀರು ಆರೋಗ್ಯಕ್ಕೆ ಒಳ್ಳೆಯದೆಂದು ಜನ ಮಡಿಕೆ ಖರೀದಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಗಡಿ ಜಿಲ್ಲೆ ಬೀದರ್ ಅಂದರೆ ಬಿಸಿಲಿನ ನಗರವೆಂದು ಕರೆಯುತ್ತಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುವ ಕೆಲವು ಕಿರಿಕ್ ಅಧಿಕಾರಿಗಳಿಗೆ ಶಿಕ್ಷೆ ಕೊಡುವ ಬದಲು ನಿಮ್ಮನ್ನು ಬೀದರ್​ಗೆ ವರ್ಗಾವಣೆ ಮಾಡುತ್ತೇನೆ ನೋಡಿ ಎಂದರೆ ಸಾಕು ಅಧಿಕಾರಿ ಕುಂತಲೇ ಬೆವತು ಹೋಗಿರುತ್ತಾರೆ. ಇದಕ್ಕೆ ಕಾರಣ ಬೀದರ್​ನಲ್ಲಿರುವ ಕೆಂಡದಂತ ಬಿಸಿಲು. ಬೀದರ್​ನಲ್ಲಿ ಕಳೆದೆರಡು ವಾರ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಕುಡಿಯುವ ನೀರು ಕೂಡ ಬಿಸಿಯಾಗುತ್ತಿದ್ದು ಜನರು ತಮ್ಮ ತಮ್ಮ ಮನೆಯಲ್ಲಿ ತಂಪು ನೀರು ಇಡಲು ಬಡವರ ಫ್ರಿಡ್ಜ್ ಅಂದರೆ ಕುಂಬಾರ ಮಾಡಿದ ಮಣ್ಣಿನ ಮಡಕೆ ಮೊರೆ ಹೋಗಿದ್ದಾರೆ.

ಹೀಗಾಗಿ ಜನರು ಮಣ್ಣಿನ ಮಡಿಕೆಯನ್ನ ಖರೀದಿಸಲು ಮುಗಿಬಿದ್ದಿದ್ದು ಈಗಾಗಲೇ ಮಾಡಿಟ್ಟಿರುವ ಶೇ 90 ರಷ್ಟು ಮಣ್ಣಿನ ಮಡಿಕೆಗಳು ಕಾಲಿಯಾಗಿದ್ದು ಹೊಸದಾಗಿ ಮತ್ತೆ ಮಣ್ಣಿನ ಮಡಿಕೆಯನ್ನ ಕುಂಬಾರರು ಹಗಲು-ರಾತ್ರಿ ಎನ್ನದೆ ಮಾಡುತ್ತಿದ್ದಾರೆ. ಈ ವರ್ಷ ಮಣ್ಣಿನ ಮಡಿಕೆಗಳು ಭಾರಿ ಪ್ರಮಾಣದಲ್ಲಿ ಮಾರಟವಗಿದ್ದು, ಕುಂಬಾರರು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು

ವಿವಿಧ ಆಕಾರಗಳ ಮಣ್ಣಿನ ಮಡಿಕೆಗಳು ಜನರನ್ನ ಆಕರ್ಷಿಸುತ್ತಿವೆ. ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿಟ್ಟ ನೀರನ್ನ ಕುಡಿಯುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಹೆಚ್ಚಿನ ಜನರು ಮಣ್ಣಿನ ಮಡಿಕೆಯಲ್ಲಿನ ನೀರನ್ನ ಕುಡಿಯುತ್ತಿದ್ದಾರೆ. ಇನ್ನೂ ಕೊರೊನಾ ಭಯ ಇರುವ ಕಾರಣ ವೈದ್ಯರು ಕೂಡ ಫ್ರಿಡ್ಜ್​​ನಲ್ಲಿಟ್ಟಿರುವ ನೀರುನ್ನು ಕುಡಿಯಬೇಡಿ ಎಂದು ಹೇಳಿರುವ ಕಾರಣ, ಜನರು ಫಿಡ್ಜ್​ನಲ್ಲಿನ ನೀರಿನ ಬದಲು ಮಣ್ಣಿನ ಮಡಿಕೆಯಲ್ಲಿ ನೀರನ್ನ ಕುಡಿಯುತ್ತಿದ್ದಾರೆ. ಇದರಿಂದಾಗಿ ಕುಂಬಾರರು ಮಾಡಿದ ಮಣ್ಣಿನ ಮಡಿಕೆಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ನಗರದ ಪ್ರಮುಖ ರಸ್ತೆಯಲ್ಲಿಯೇ ಮಡಿಕೆಯ ವ್ಯಾಪಾರ ಜೋರಾಗಿ ನಡೆಯುತ್ತಿದೆ. ನಗರದ ಪ್ರಮುಖ ರಸ್ತೆಗಳಾದ ಮಡಿವಾಳ ಚೌಕ್, ನೆಹರು ಸ್ಟೇಡಿಯಂ ರಸ್ತೆ, ನೌಬಾದ್ ಇನ್ನೂ ಕುಂಬಾರರು ವಾಸಿಸುವ ಗ್ರಾಮದಲ್ಲಿಯೂ ಕೂಡ ಜನರು ಹೋಗಿ ಮಡಿಕೆಯನ್ನ ಖರೀದಿಸುತ್ತಿದ್ದಾರೆ.

ಕಳೆದ ವರ್ಷ ಬೆಸಿಗೆಯಲ್ಲಿ ಅಕಾಲಿಕವಾಗಿ ಮಳೆಸುರಿದ ಪರಿಣಾಮ ಕುಂಬಾರರಿಗೆ ವ್ಯಾಪಾರವಾಗಿರಲಿಲ್ಲ. ಇದರ ಹಿಂದಿನ ವರ್ಷದಲ್ಲಿ ಕೊರೊನಾ ಕಾರಣದಿಂದ ವ್ಯಾಪಾರವಾಗಿರಲಿಲ್ಲ. ಆದರೆ ಈಗ ಭರ್ಜರಿ ವ್ಯಾಪಾರವಾಗಿದೆ. ಎರಡು ವರ್ಷದಿಂದ ವ್ಯಾಪಾರವಿಲ್ಲದೆ ಖಾಲಿ ಕೈಯಲ್ಲಿದ್ದ ಕುಂಬಾರರು ಈಗ ಬರ್ಜರಿ ವ್ಯಾಪಾರದಿಂದಾಗಿ ಖುಷಿಯಾಗಿದ್ದಾರೆ. ಕೊರೊನಾ ಕಾಲದಲ್ಲಿ ವ್ಯಾಪಾರವಿಲ್ಲದ್ದಕ್ಕಾಗಿ ಅನೇಕ ಕುಂಬಾರರು ತಮ್ಮ ವಂಶಪರಂಪರಾಗತವಾಗಿ ಬಂದಿದ್ದ ಕುಂಬಾರ ವೃತ್ತಿಗೆ ಗುಡ್ ಬೈ ಹೇಳಿ ಕೂಲಿ ಕೆಲಸವನ್ನ ಮಾಡಿಕೊಂಡಿದ್ದರು. ಆದರೆ ಈ ವರ್ಷ ಉತ್ತಮ ವ್ಯಾಪಾರ ಆಗಿರುವುದರಿಂದ ಮತ್ತೆ ಕುಂಬಾರರು ಮೂಲ ವೃತ್ತಿಗೆ ಹಿಂದುರುಗುತ್ತಿರುವುದು ಖುಷಿಯ ವಿಚಾರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!