Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್​​ಗೆ ಭಾರಿ ಡಿಮ್ಯಾಂಡ್, ಬೀದರ್​ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ

ಬೀದರ್​ನಲ್ಲಿ ಕಳೆದೆರಡು ವಾರ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಕುಡಿಯುವ ನೀರು ಕೂಡ ಬಿಸಿಯಾಗುತ್ತಿದ್ದು ಜನರು ತಮ್ಮ ತಮ್ಮ ಮನೆಯಲ್ಲಿ ತಂಪು ನೀರು ಇಡಲು ಬಡವರ ಫ್ರಿಡ್ಜ್ ಅಂದರೆ ಕುಂಬಾರ ಮಾಡಿದ ಮಣ್ಣಿನ ಮಡಕೆ ಮೊರೆ ಹೋಗಿದ್ದಾರೆ.

ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್​​ಗೆ ಭಾರಿ ಡಿಮ್ಯಾಂಡ್, ಬೀದರ್​ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ
ಮಡಿಕೆ ವ್ಯಾಪಾರ
Follow us
ಸುರೇಶ ನಾಯಕ
| Updated By: ವಿವೇಕ ಬಿರಾದಾರ

Updated on: Mar 10, 2024 | 9:51 AM

ಬೀದರ್​, ಮಾರ್ಚ್​ 10: ಬಿಸಿಲಿನ ತಾಪಮಾನ (Temperature) ಏರುತ್ತಿದಂತೆ ಬಡವರ ಫ್ರಿಡ್ಜ್​ಗೆ ಬಾರಿ ಡಿಮ್ಯಾಂಡ್ ಬಂದಿದೆ. ಎರಡು ವರ್ಷದಿಂದ ವ್ಯಾಪಾರವಿಲ್ಲದೆ ನಷ್ಟ ಅನುಭವಿಸಿದ್ದ ಕುಂಬಾರರಿಗೆ (Potter) ಭರ್ಜರಿ ವ್ಯಾಪಾರವಾಗಿದೆ. ಎರಡು ವರ್ಷದಿಂದ ಆಗದ ವ್ಯಾಪಾರ ಬೇಸಿಗೆಯಲ್ಲಿ ಆಗಿದ್ದು ಕುಂಬಾರರು ಖಷಿಯಲ್ಲಿದ್ದಾರೆ. ಕೊರೊನಾ (Covid) ಸಂಕಷ್ಟ ಬೆಸಿಗೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವ್ಯಾಪಾರವಿಲ್ಲದೆ ನಷ್ಟದಲ್ಲಿದ್ದವರಿಗೆ ಈ ವರ್ಷ ಬಂಪರ್ ವ್ಯಾಪಾರವಾಗಿದೆ. ಮಡಿಕೆಯಲ್ಲಿನ‌ (Pot) ನೀರು ಆರೋಗ್ಯಕ್ಕೆ ಒಳ್ಳೆಯದೆಂದು ಜನ ಮಡಿಕೆ ಖರೀದಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಗಡಿ ಜಿಲ್ಲೆ ಬೀದರ್ ಅಂದರೆ ಬಿಸಿಲಿನ ನಗರವೆಂದು ಕರೆಯುತ್ತಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುವ ಕೆಲವು ಕಿರಿಕ್ ಅಧಿಕಾರಿಗಳಿಗೆ ಶಿಕ್ಷೆ ಕೊಡುವ ಬದಲು ನಿಮ್ಮನ್ನು ಬೀದರ್​ಗೆ ವರ್ಗಾವಣೆ ಮಾಡುತ್ತೇನೆ ನೋಡಿ ಎಂದರೆ ಸಾಕು ಅಧಿಕಾರಿ ಕುಂತಲೇ ಬೆವತು ಹೋಗಿರುತ್ತಾರೆ. ಇದಕ್ಕೆ ಕಾರಣ ಬೀದರ್​ನಲ್ಲಿರುವ ಕೆಂಡದಂತ ಬಿಸಿಲು. ಬೀದರ್​ನಲ್ಲಿ ಕಳೆದೆರಡು ವಾರ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಕುಡಿಯುವ ನೀರು ಕೂಡ ಬಿಸಿಯಾಗುತ್ತಿದ್ದು ಜನರು ತಮ್ಮ ತಮ್ಮ ಮನೆಯಲ್ಲಿ ತಂಪು ನೀರು ಇಡಲು ಬಡವರ ಫ್ರಿಡ್ಜ್ ಅಂದರೆ ಕುಂಬಾರ ಮಾಡಿದ ಮಣ್ಣಿನ ಮಡಕೆ ಮೊರೆ ಹೋಗಿದ್ದಾರೆ.

ಹೀಗಾಗಿ ಜನರು ಮಣ್ಣಿನ ಮಡಿಕೆಯನ್ನ ಖರೀದಿಸಲು ಮುಗಿಬಿದ್ದಿದ್ದು ಈಗಾಗಲೇ ಮಾಡಿಟ್ಟಿರುವ ಶೇ 90 ರಷ್ಟು ಮಣ್ಣಿನ ಮಡಿಕೆಗಳು ಕಾಲಿಯಾಗಿದ್ದು ಹೊಸದಾಗಿ ಮತ್ತೆ ಮಣ್ಣಿನ ಮಡಿಕೆಯನ್ನ ಕುಂಬಾರರು ಹಗಲು-ರಾತ್ರಿ ಎನ್ನದೆ ಮಾಡುತ್ತಿದ್ದಾರೆ. ಈ ವರ್ಷ ಮಣ್ಣಿನ ಮಡಿಕೆಗಳು ಭಾರಿ ಪ್ರಮಾಣದಲ್ಲಿ ಮಾರಟವಗಿದ್ದು, ಕುಂಬಾರರು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು

ವಿವಿಧ ಆಕಾರಗಳ ಮಣ್ಣಿನ ಮಡಿಕೆಗಳು ಜನರನ್ನ ಆಕರ್ಷಿಸುತ್ತಿವೆ. ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿಟ್ಟ ನೀರನ್ನ ಕುಡಿಯುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಹೆಚ್ಚಿನ ಜನರು ಮಣ್ಣಿನ ಮಡಿಕೆಯಲ್ಲಿನ ನೀರನ್ನ ಕುಡಿಯುತ್ತಿದ್ದಾರೆ. ಇನ್ನೂ ಕೊರೊನಾ ಭಯ ಇರುವ ಕಾರಣ ವೈದ್ಯರು ಕೂಡ ಫ್ರಿಡ್ಜ್​​ನಲ್ಲಿಟ್ಟಿರುವ ನೀರುನ್ನು ಕುಡಿಯಬೇಡಿ ಎಂದು ಹೇಳಿರುವ ಕಾರಣ, ಜನರು ಫಿಡ್ಜ್​ನಲ್ಲಿನ ನೀರಿನ ಬದಲು ಮಣ್ಣಿನ ಮಡಿಕೆಯಲ್ಲಿ ನೀರನ್ನ ಕುಡಿಯುತ್ತಿದ್ದಾರೆ. ಇದರಿಂದಾಗಿ ಕುಂಬಾರರು ಮಾಡಿದ ಮಣ್ಣಿನ ಮಡಿಕೆಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ನಗರದ ಪ್ರಮುಖ ರಸ್ತೆಯಲ್ಲಿಯೇ ಮಡಿಕೆಯ ವ್ಯಾಪಾರ ಜೋರಾಗಿ ನಡೆಯುತ್ತಿದೆ. ನಗರದ ಪ್ರಮುಖ ರಸ್ತೆಗಳಾದ ಮಡಿವಾಳ ಚೌಕ್, ನೆಹರು ಸ್ಟೇಡಿಯಂ ರಸ್ತೆ, ನೌಬಾದ್ ಇನ್ನೂ ಕುಂಬಾರರು ವಾಸಿಸುವ ಗ್ರಾಮದಲ್ಲಿಯೂ ಕೂಡ ಜನರು ಹೋಗಿ ಮಡಿಕೆಯನ್ನ ಖರೀದಿಸುತ್ತಿದ್ದಾರೆ.

ಕಳೆದ ವರ್ಷ ಬೆಸಿಗೆಯಲ್ಲಿ ಅಕಾಲಿಕವಾಗಿ ಮಳೆಸುರಿದ ಪರಿಣಾಮ ಕುಂಬಾರರಿಗೆ ವ್ಯಾಪಾರವಾಗಿರಲಿಲ್ಲ. ಇದರ ಹಿಂದಿನ ವರ್ಷದಲ್ಲಿ ಕೊರೊನಾ ಕಾರಣದಿಂದ ವ್ಯಾಪಾರವಾಗಿರಲಿಲ್ಲ. ಆದರೆ ಈಗ ಭರ್ಜರಿ ವ್ಯಾಪಾರವಾಗಿದೆ. ಎರಡು ವರ್ಷದಿಂದ ವ್ಯಾಪಾರವಿಲ್ಲದೆ ಖಾಲಿ ಕೈಯಲ್ಲಿದ್ದ ಕುಂಬಾರರು ಈಗ ಬರ್ಜರಿ ವ್ಯಾಪಾರದಿಂದಾಗಿ ಖುಷಿಯಾಗಿದ್ದಾರೆ. ಕೊರೊನಾ ಕಾಲದಲ್ಲಿ ವ್ಯಾಪಾರವಿಲ್ಲದ್ದಕ್ಕಾಗಿ ಅನೇಕ ಕುಂಬಾರರು ತಮ್ಮ ವಂಶಪರಂಪರಾಗತವಾಗಿ ಬಂದಿದ್ದ ಕುಂಬಾರ ವೃತ್ತಿಗೆ ಗುಡ್ ಬೈ ಹೇಳಿ ಕೂಲಿ ಕೆಲಸವನ್ನ ಮಾಡಿಕೊಂಡಿದ್ದರು. ಆದರೆ ಈ ವರ್ಷ ಉತ್ತಮ ವ್ಯಾಪಾರ ಆಗಿರುವುದರಿಂದ ಮತ್ತೆ ಕುಂಬಾರರು ಮೂಲ ವೃತ್ತಿಗೆ ಹಿಂದುರುಗುತ್ತಿರುವುದು ಖುಷಿಯ ವಿಚಾರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ