AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಭಗವಂತ ಖೂಬಾಗೆ ಕರೆ ಮಾಡಿ ಗೊಬ್ಬರ ಕೇಳಿದ್ದ ಬೀದರ್​ ಶಿಕ್ಷಕ ಸಸ್ಪೆಂಡ್

ಗೊಬ್ಬರ ಕೇಳಿದ್ದಕ್ಕೆ ಖೂಬಾ ಹಾಗೂ ಶಿಕ್ಷಕನ ಮಧ್ಯೆ ವಾಗ್ವಾದ ನಡೆದಿದ್ದು, ಸದ್ಯ ಕೇಂದ್ರ ಸಚಿವರ ಒತ್ತಡದ‌ ಮೇರೆಗೆ ಶಿಕ್ಷಕ ಕುಶಾಲ್ ಸಸ್ಪೆಂಡ್​ ಮಾಡಿ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದೆ.

ಕೇಂದ್ರ ಸಚಿವ ಭಗವಂತ ಖೂಬಾಗೆ ಕರೆ ಮಾಡಿ ಗೊಬ್ಬರ ಕೇಳಿದ್ದ ಬೀದರ್​ ಶಿಕ್ಷಕ ಸಸ್ಪೆಂಡ್
ಭಗವಂತ ಖೂಬಾ, ಶಿಕ್ಷಕ ಕುಶಾಲ್ ಪಾಟೀಲ್
TV9 Web
| Edited By: |

Updated on: Jun 23, 2022 | 12:12 PM

Share

ಬೀದರ್: ರಸಗೊಬ್ಬರ ಪೂರೈಕೆಗೆ ವಿಚಾರವಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ (Fertilizer) ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಶಿಕ್ಷಕ ಕುಶಾಲ್ ಪಾಟೀಲ್ ಎನ್ನುವವರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೊಬ್ಬರ ಕೇಳಿದ್ದಕ್ಕೆ ಖೂಬಾ ಹಾಗೂ ಶಿಕ್ಷಕನ ಮಧ್ಯೆ ವಾಗ್ವಾದ ನಡೆದಿದ್ದು, ಸದ್ಯ ಕೇಂದ್ರ ಸಚಿವರ ಒತ್ತಡದ‌ ಮೇರೆಗೆ ಶಿಕ್ಷಕ ಕುಶಾಲ್ ಸಸ್ಪೆಂಡ್​ ಮಾಡಿ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದೆ. ನಮ್ಮ ಊರಲ್ಲಿ ಗೊಬ್ಬರು ಸಿಗುತ್ತಿಲ್ಲ ಸರ್ ಎಂದು ಜಿಲ್ಲೆಯ ಔರಾದ್ ತಾಲೂಕಿನ ಹೆಡಪುರ ಗ್ರಾಮದ ಶಿಕ್ಷಕ ಕುಶಾಲ್ ಪಾಟೀಲ್​ ಕೇಂದ್ರ ಸಚಿವ ಭಗವಂತ ಖೂಬಾಗೆ ದೂರವಾಣಿ ಕರೆ ಮಾಡಿ, ಪ್ರಶ್ನೆ ಕೇಳಿದಕ್ಕೆ ನಾನೇನು ಮಾಡಲಿ ಎಂದು ಉಡಾಫೆ ಉತ್ತರ ನೀಡಿದ್ದಾರೆ ಎನ್ನುವ ಆಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆ ಮತ್ತು ಖಾಸಗಿ ಇಲಾಖೆಗಳಲ್ಲಿ ಎಲ್ಲಿಯೂ ಗೊಬ್ಬರ ಸಿಗದೆ ರೈತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: TCS: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಸಿಗಲಿದೆ ಚಿಪ್‌ ಆಧಾರಿತ ಇ- ಪಾಸ್​ಪೋರ್ಟ್

ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯವನ್ನು ಸಹ ಶುರು ಮಾಡಿದ್ದಾರೆ. ಆದರೆ ಗೊಬ್ಬರ ಸಿಗದೆ ರೈತರು ಪರದಾಡುವಂತ್ತಾಗಿದೆ. ಈ ಹಿನ್ನೆಲೆಯಲ್ಲಿ ಕುಶಾಲ್ ಪಾಟೀಲ್​ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ನೇರವಾಗಿ ಕರೆಮಾಡಿ ಮಾತನಾಡಿದ್ದಾರೆ. ಸಾವಿರಾರು ಜನ ನೌಕರರು ಇದಾರೆ ಅವರು ನೋಡಿಕೊಳ್ಳುತ್ತಾರೆ ಹೋಗು ಅಲ್ಲಿಗೆ. ನನ್ನ ಕೆಲಸ ರಾಜ್ಯಕ್ಕೆ ಕಳಿಸೋದು, ಕಳಿಸಿದ್ದೇನೆ ಅಷ್ಟೇ. ಅಲ್ಲಿನ ಶಾಸಕ ಇದಾನಲ್ಲ, ಸಾವಿರಾರು ಮಂದಿ ನೌಕರರು ಇದಾರೆ. ಅವನ್ನ ಹೋಗಿ ಕೇಳು, ನನಗೆ ಬೇರೆ ಕೆಲಸ ಇಲ್ವಾ ಎಂದು ಖೂಬಾ ಮೊಂಡುತನದ ಉತ್ತರ ನೀಡಿದ್ದಾರೆ. ಮುಂದಿನ ಬಾರಿ ಹೇಗೆ ಆರಿಸಿ ಬರುತ್ತಿರಿ ನೋಡಿ ಎಂದು ಕರೆ ಮಾಡಿದ್ದ ಶಿಕ್ಷಕ ಹೇಳಿದ್ದು, ಚುನಾವಣೆಯಲ್ಲಿ ಹೇಗೆ ಗೆದ್ದು ಬರಬೇಕೆಂದು ನನಗೆ ಗೊತ್ತಿದೆ. ಅಲ್ಲಿನ ಶಾಸಕರು ಇದಾರೆ, ಅಧಿಕಾರಿಗಳು ಇದಾರೆ ಅವರಿಗೆ ಹೋಗಿ ಕೇಳು. ಭಾತರ ಸರ್ಕಾರದ ಮಂತ್ರಿ ಇದ್ದೇನೆ ರಾಜ್ಯಗಳನ್ನ ಮಾತ್ರ ನೋಡಿಕೊಳ್ಳುತ್ತೇನೆ. ಏನ್ ಮಾಡಿಕೊಳ್ಳುತ್ತಿಯಾ ಮಾಡಿಕೊ ಹೋಗು ಎಂದು ಕ್ಷೇತ್ರದ ಜನರಿಗೆ ಉಡಾಫೆ ಉತ್ತರ ನೀಡಿದ್ದಾರೆ.

ಭಗವಂತ ಖೂಬಾ ಸ್ಪಷ್ಟನೆ 

ಈ ಕುರಿತಾಗಿ ಖೂಬಾ ಸ್ಪಷ್ಟನೆ ನೀಡಿದ್ದು, ಜೂ.10ರಂದು ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದವರು ರೈತರಲ್ಲ, ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಆ ವ್ಯಕ್ತಿ ತನ್ನನ್ನು 3-4 ಬಾರಿ ದೂರವಾಣಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಏನಾದರೂ ಮಹತ್ವದ ಸಮಸ್ಯೆ ಇರಬಹುದೆಂದು ಭಾವಿಸಿ ಕರೆ ಮಾಡಿದ್ದೆ. ಆತ ಗೊಬ್ಬರದ ಬಗ್ಗೆ ಕೇಳುವ ನೆಪದಲ್ಲಿ ವ್ಯಕ್ತಿ ಅವಹೇಳನ ಮಾಡುವಂತಹ ಪದಗಳನ್ನು ಬಳಸಿದ್ದಾನೆಯೇ ಹೊರತು ನಾನಲ್ಲ ಎಂದು ಸಚಿವರು ಹೇಳಿದರು. ಆಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ತನಗೆ ಮತ್ತು ತನ್ನ ಪಕ್ಷಕ್ಕೆ ಮಾನಹಾನಿ ಮಾಡಲು ಆಯ್ದ ಭಾಗವನ್ನು ವೈರಲ್ ಮಾಡಲಾಗಿದೆ ಎಂದು ಖೂಬಾ ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ