AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar News: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧನ ಮಾಡಿದ್ದಾರೆ.

Bidar News: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ
ಗಾಂಜಾ ವಶಕ್ಕೆ ಪಡೆದ ಅಬಕಾರಿ ಪೊಲೀಸರು
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 5:23 PM

Share

ಮುಖ್ಯಾಂಶಗಳು

  • ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ
  • ಬೀದರ್ ತಾಲೂಕಿನ ಬಂಗೂರು‌ ಚೆಕ್​​​ಪೋಸ್ಟ್​​​ನಲ್ಲಿ ಘಟನೆ
  • 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ವಶಕ್ಕೆ

ಬೀದರ್​: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ (ganja) ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್​​ನಿಂದ ಬೀದರ್​​ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್​​ನಲ್ಲಿ ಸಾಗಾಟ ಮಾಡಲಾಗುತ್ತಿದ್ದ 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ‌ಡಿಸಿ ಮೊಹಮ್ಮದ್ ಇಸ್ಮಾಯಿಲ್ ಇನಾಮದಾರ್​ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಬೀದರ್ ತಾಲೂಕಿನ ಬಂಗೂರು‌ ಚೆಕ್​​​ಪೋಸ್ಟ್​​​ನಲ್ಲಿ ಗಾಂಜಾ‌ ವಶಕ್ಕೆ ಪಡೆದಿದ್ದಾರೆ.

ಟ್ರಾಕ್ಟರ್-ಬೈಕ್ ನಡುವೆ ಡಿಕ್ಕಿ: 5 ಜನ ದುರ್ಮರಣ

ಧಾರವಾಡ: ಟ್ರಾಕ್ಟರ್-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗ್ರಾಮ ಪಂಚಾಯತಿ ಪಿಡಿಒ ಸಾವನ್ನಪ್ಪಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರಿನವರಾದ ಮೃತ ಪಿಡಿಓ ಶಿವಾನಂದ ಹಡಪದ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದರು. ದುರಾದೃಷ್ಟವಶಾತ್​ ನಿನ್ನೆ(ಮೇ.24) ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hasan News: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವೆ ಗಲಾಟೆ: ಸಿನಿಮೀಯ ರೀತಿಯಲ್ಲಿ ಮಚ್ಚಿನಿಂದ ಹಲ್ಲೆಗೈದ ಆರೋಪ

ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿ ಇಬ್ಬರ ಸಾವು

ತುಮಕೂರು: ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಡೆದಿದೆ. ವೀರೇಶ್ (30), ಶಶಿಕಲಾ (75) ಮೃತ ರ್ದುದೈವಿಗಳು. ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ತಿಳಿದು ಬಂದಿದೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಶಿಕಲಾ ಕುಟುಂಬದವರು ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಮಾರ್ಗ ಮಧ್ಯೆ ಡಿ.ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಈ ಕುರಿತು ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kalaburagi News: ಹಾಡಹಗಲೇ ಬಸ್​ ಚಾಲಕನ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​, ಕೊಲೆಗೆ ಕಾರಣ ಕೇಳಿ ದಂಗಾದ ಪೋಲಿಸರು​

ಹಣ ವಾಪಾಸ್ ಕೇಳಿದ್ದಕ್ಕೆ ರಾಡ್​ನಿಂದ ಹಲ್ಲೆ

ಬೆಂಗಳೂರು: ಹಣ ವಾಪಾಸ್​ ಕೇಳಿದ್ದ ವೃದ್ದೆ ಮೇಲೆ ಎದುರು ಮನೆಯ ನಿವಾಸಿಯಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆಯೊಂದು ನಗರದ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೇ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ವೃದ್ದೆ ಗಿರಿಯಮ್ಮ ಹಲ್ಲೆಗೊಳಗಾದವರು. ಎದುರು ಮನೆಯ ನಿವಾಸಿ ಶಾಂತಮ್ಮಳಿಂದ ಮಾರಣಾಂತಿಕ ಹಲ್ಲೆ ಆರೋಪ ಮಾಡಲಾಗಿದೆ. ಹಣ ಕೊಡುವ ನೆಪದಲ್ಲಿ ಬಂದು ರಾಡ್​ನಿಂದ ವೃದ್ದೆ ಗಿರಿಯಮ್ಮ ತಲೆಗೆ ಹೊಡೆದಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್