AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಆರ್​​ಎಸ್​​ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್!

ರಾಜ್ಯ ಸರ್ಕಾರ ಪರೋಕ್ಷವಾಗಿ RSSಗೆ ಅಂಕುಶ ಹಾಕೋದಕ್ಕೆ ಮುಂದಾಗಿತ್ತು. ಆದರೆ ಧಾರವಾಡ ಹೈಕೋರ್ಟ್ ಪೀಠ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಇನ್ನು ಪಥಸಂಚಲನದಲ್ಲಿ ಭಾಗವಹಿಸಿದ್ದ ಸರ್ಕಾರಿ ನೌಕರರಿಗೆ ನೋಟಿಸ್​ ಜಾರಿ ಮಾಡಲಾಗುತ್ತಿದೆ. ಇದೀಗ ಬೀದರ್​ ಜಿಲ್ಲೆಯ ಔರಾದ್​ ತಾಲೂಕಿನ ನಾಲ್ವರು ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ.​

ಬೀದರ್: ಆರ್​​ಎಸ್​​ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್!
ಶಿಕ್ಷಕರಿಗೆ ನೋಟಿಸ್​
ಗಂಗಾಧರ​ ಬ. ಸಾಬೋಜಿ
|

Updated on:Oct 29, 2025 | 6:05 PM

Share

ಬೀದರ್, ಅಕ್ಟೋಬರ್​ 29: ಆರ್​​ಎಸ್​​ಎಸ್​​ಗೆ (RSS) ಪರೋಕ್ಷವಾಗಿ ಅಂಕುಶ ಹಾಕಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​​ನಲ್ಲಿ ಭಾರಿ ಹಿನ್ನಡೆಯಾಗಿದೆ. ಹೀಗಿರುವಾಗ ಆರ್​​ಎಸ್​​ಎಸ್​ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್​ ತಾಲೂಕಿನ ನಾಲ್ವರು ಶಿಕ್ಷಕರಿಗೆ (Teachers) ನೋಟಿಸ್ ನೀಡಲಾಗಿದೆ. ಕಾರಣ ಕೇಳಿ ನಾಲ್ವರಿಗೆ ಔರಾದ್ ಬಿಇಓ ಅವರಿಂದ ನೋಟಿಸ್​ ಜಾರಿ ಮಾಡಲಾಗಿದೆ.

ಶಿಕ್ಷಕರ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಮುಖಂಡರ ಆಗ್ರಹ

ಅ. 7, 13ರಂದು ಔರಾದ್​ನಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ ನಡೆದಿತ್ತು. ಶಿಕ್ಷಕರಾದ ಮಹದೇವ​, ಶಾಲಿವಾನ್​, ಪ್ರಕಾಶ್ ಮತ್ತು ಸತೀಶ್​​ ಭಾಗವಹಿಸಿದ್ದರು. ಈ ಬಗ್ಗೆ ಅಕ್ಟೋಬರ 27 ರಂದು ದಲಿತ ಸೇನೆಯ ಮುಖಂಡರು ಬಿಇಒಗೆ ದೂರು ನೀಡಿದ್ದರು. ಜೊತೆಗೆ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ದೂರು ಸಲಿಸಿದ ಮರುದಿನ ಅಂದರೆ ಮಂಗಳವಾರ ನಾಲ್ಕು ಜನ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ನೋಟಿಸ್​​ನಲ್ಲಿ ಏನಿದೆ?

ಬೀದರ ಜಿಲ್ಲೆಯ ಔರಾದ ಬಿ ತಾಲೂಕಿನಲ್ಲಿ ಅಕ್ಟೋಬರ್​ 7 ಮತ್ತು 13 ರಂದು ನಡೆದ ಆರ್​​ಎಸ್​​​ಎಸ್​ ಪಥಸಂಚಲನದಲ್ಲಿ ತಾವುಗಳು ಭಾಗಿಯಾಗಿರುತ್ತಿರಿ. ಈ ಕುರಿತು ವಿಡಿಯೋ ಮತ್ತು ಭಾವಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದಿರುವ ದೃಶ್ಯಗಳು ಕಂಡು ಬಂದಿರುತ್ತವೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಪತ್ರ ಬೆನ್ನಲ್ಲೇ ಸಿಎಂ ಮಹತ್ವದ ಸೂಚನೆ: RSS ಚಟುವಟಿಕೆಗಳಿಗೆ ಬೀಳುತ್ತಾ ಬ್ರೇಕ್?

ತಾವುಗಳು ಸರಕಾರಿ ನೌಕರರು ಆಗಿರುವುದರಿಂದ ಯಾವುದೇ ಪ್ರಕಾರ ರಾಜಕೀಯ ಮತ್ತು ಧಾರ್ಮಿಕ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ. ತಾವುಗಳು ಆರ್​​ಎಸ್​​​ಎಸ್​ ಪಥಸಂಚಲನದಲ್ಲಿ ಭಾಗವಹಿಸಿ ಸರಕಾರದ ಸೇವಾ ನಿಬಂಧನೆಗೆ ವಿರುದ್ದವಾಗಿ ಕರ್ತವ್ಯ ಮಾಡಿರುವಿರಿ. ಈ ಪ್ರಯುಕ್ತ ತಾವುಗಳು ಈ ನೋಟಿಸ್ ತಲುಪಿದ ಬಳಿಕ ಕಾರಣ ಕೇಳುವ ನೋಟಿಸ್‌ಗೆ ಲಿಖಿತ ಹೇಳಿಕೆಯನ್ನು ನೀಡಿ ಖುದ್ದಾಗಿ ಬಂದು ಈ ಕಛೇರಿಗೆ ಸಲ್ಲಿಸುವುದು. ಇಲ್ಲವಾದಲ್ಲಿ ಏಕಪಕ್ಷಿಯವಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ. ನಿಯಂಕ್ರಣ ಮತ್ತು ಮೇಲ್ಮನವಿ) ನಿಯಮಗಳು-1957ರನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲಾಗುದೆಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:04 pm, Wed, 29 October 25

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ