AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: ಬಿಸಿಲಿಗೆ ಬತ್ತಿದ ಕೆರೆಗಳು; ದಿನನಿತ್ಯ ಪ್ರಾಣಿ-ಪಕ್ಷಿಗಳಿಗೆ ನೀರಿಟ್ಟು ದಾಹ ನೀಗಿಸುತ್ತಿರೋ ಯುವಕರು

ಬೀರು ಬಿಸಿಲಿಗೆ ಬೀದರ್​ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಸೂರ್ಯನ ಪ್ರಕರತೆ ಹೆಚ್ಚಾಗುತ್ತಿದ್ದು, ಪ್ರಾಣಿ- ಪಕ್ಷಿಗಳು, ಜನ-ಜಾನುವಾರುಗಳು ಬಿಸಿಲಿನ ತಾಪಕ್ಕೆ ನಲುಗುವಂತಾಗಿದೆ. ಕೆಲವು ಯುವಕರು ಪಕ್ಷಿಗಳಿಗೆ ನೀರು ಹಾಕಿ ಹಕ್ಕಿಗಳ ದಾಹ ಇಂಗಿಸಿದರೆ, ಜನರು ತಂಪು ಪಾನೀಯಗಳನ್ನ ಸೇವಿಸಿ ದಾಹ ಇಂಗಿಸಿಕೊಳ್ಳುತ್ತಿದ್ದಾರೆ.

ಬೀದರ್​: ಬಿಸಿಲಿಗೆ ಬತ್ತಿದ ಕೆರೆಗಳು; ದಿನನಿತ್ಯ ಪ್ರಾಣಿ-ಪಕ್ಷಿಗಳಿಗೆ ನೀರಿಟ್ಟು ದಾಹ ನೀಗಿಸುತ್ತಿರೋ ಯುವಕರು
ಬೀದರ್​: ಬಿಸಿಲಿಗೆ ಬತ್ತಿದ ಕೆರೆಗಳು; ದಿನನಿತ್ಯ ಪ್ರಾಣಿ-ಪಕ್ಷಿಗಳಿಗೆ ನೀರಿಟ್ಟು ದಾಹ ನೀಗಿಸಿದ ಯುವಕರು
ಸುರೇಶ ನಾಯಕ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 13, 2024 | 6:43 PM

Share

ಬೀದರ್​, ಮಾ.13: ಬೀದರ್​ನ(Bidar) ಸ್ವಾಭಿಮಾನಿ ಗೆಳೆಯರ ಬಳಗದ ಯುವಕರು, ವನ್ಯಜೀವಿಗಳ ಕುಡಿಯುವ ನೀರಿನ ದಾಹ ಇಂಗಿಸುವ ಕೆಲಸ ಮಾಡುತ್ತಿದ್ದಾರೆ. ಕಾಡಿನಲ್ಲಿ ಸಿಮೆಂಟ್ ತೊಟ್ಟಿಗಳನ್ನ ನಿರ್ಮಾಣ ಮಾಡಿ, ಅದಕ್ಕೆ ಪ್ರತಿದಿನವೂ ನೀರು ಹಾಕುವ ಮೂಲಕ ಪ್ರಾಣಿ-ಪಕ್ಷಿಗಳ ಕುಡಿಯುವ ನೀರಿನ‌ ದಾಹ‌ ಇಂಗಿಸುವ ಕೆಲಸದಲ್ಲಿ ತೊಡಗಿದ್ದಾರೆ. ಈ ಮೂಲಕ ರಣ ಬಿಸಿಲಿಗೆ ಆಹಾರವಿಲ್ಲದೆ, ನೀರಿಲ್ಲದೆ ಪರದಾಡುತ್ತಿರುವ ಹಕ್ಕಿಗಳಿಗೆ ಈ ಯುವಕರು ಆಸರೆಯಾಗಿದ್ದಾರೆ.

ಪ್ರತಿವರ್ಷ ಬೇಸಿಗೆಯಲ್ಲಿ ಈ ಕಾಯಕ ಮಾಡಿಕೊಂಡು ಬಂದ ಯುವಕರು

ಎರಡು ರಾಜ್ಯದ ಗಡಿಯನ್ನ ಹಂಚಿಕೊಂಡಿರುವ ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ಈ ಬಿಸಿ, ನಗರದಲ್ಲಿನ ಪ್ರಾಣಿ ಪಕ್ಷಿಗಳಿಗೂ ತಟ್ಟುತ್ತಿದೆ. ಇದನ್ನು ಮನಗಂಡ ಬೀದರ್ ಪಟ್ಟಣದ ಸ್ವಾಭಿಮಾನಿ ಗೆಳೆಯರ ಬಳಗದ ಯುವಕರು, ಅರಣ್ಯ ಪ್ರದೇಶದಲ್ಲಿ ಚಿಕ್ಕ ಚಿಕ್ಕ ಸಿಮೆಂಟ್ ತೊಟ್ಟಿಯನ್ನ ನಿರ್ಮಾಣ ಮಾಡಿ ಪಕ್ಷಿಗಳಿಗೆ ನೀರು ಹಾಕುತ್ತಿದ್ದಾರೆ. ಪ್ರತಿವರ್ಷ ಬೇಸಿಗೆಯಲ್ಲಿ ಈ ಯುವಕರು ಅರಣ್ಯದಲ್ಲಿ ತೊಟ್ಟಿಯನ್ನ ನಿರ್ಮಾಣ ಮಾಡಿ ಅಲ್ಲಿಗೆ ಪ್ರತಿದಿನವೂ ನೀರು ತಂದು ಇಲ್ಲಿಗೆ ಹಾಕುತ್ತಿದ್ದಾರೆ. ಇದು ಕಾಡು ಪ್ರಾಣಿಗಳಿಗೆ ದಾಹ ಇಂಗಿಸಿಕೊಳ್ಳಲು ಅನುಕೂಲವಾಗಿದ್ದು ಗುಬ್ಬಿ, ಅಳಿಲು, ನವಿಲು, ಕಾಗೆ ಹೀಗೆ ನಾನಾ ರೀತಿಯ ಪಕ್ಷಿಗಳು ಇಲ್ಲಿನ ಪ್ರದೇಶದಲ್ಲಿ ಬಂದು ನೀರು ಕುಡಿದು ಆಹಾರ ಸೇವಿಸಿ ಹೋಗುತ್ತಿವೆಂದು ಸ್ವಾಭಿಮಾನಿ ಗೆಳೆಯರ ಬಳಗದವರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಬೇಸಿಗೆಯಲ್ಲಿ ದಾಹ ನೀಗಿಸಿ ದೇಹ ತಂಪಾಗಿಸುವ ತಂಪು ಪಾನೀಯಗಳಿವು

ಬೀದರ್ ಜಿಲ್ಲೆಯಲ್ಲಿ ಬಿಸಿಲು ವಿಫರಿತವಾಗಿ ಹೆಚ್ಚಾಗುತ್ತಿದೆ. ಪ್ರತಿದಿನವೂ ಸರಾಸರಿ 36 ಡಿಗ್ರಿ ಆಸುಪಾಸಿನಲ್ಲಿ ಬಿಸಲು ದಾಖಲಾಗುತ್ತಿದೆ. ಇದರಿಂದಾಗಿ ಜನರು ಹೊರಗಡೆಗೆ ಓಡಾದಂತಹ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆ ಬಿಸಿಲಿನಿಂದ ದೇಹವನ್ನ ತಂಪು ಮಾಡಿಕೊಳ್ಳಲು ಜನರು ತಂಪು ಪಾನೀಯದ ಮೋರೆ ಹೋಗಿದ್ದರೆ, ದ್ವಿ-ಚಕ್ರ ವಾಹನದ ಚಾಲಕರಂತೂ ಮುಖಕ್ಕೆ ಕೆಂಡ ಎರಚಿದ ಅನುಭವಕ್ಕೆ ಒಳಗಾಗುತ್ತಿದ್ದಾರೆ. ಇದರ ನಡುವೆ ಜಿಲ್ಲೆಯಲ್ಲಿ ಕಾಡಿನಲ್ಲಿ ಬದುಕುವ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರು ಸಿಗದಂತಾ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರನ್ನ ಹಾಕುವ ಮೂಲಕ ಪ್ರಾಣಿ ಪಕ್ಷಿಗಳ ಪ್ರೇಮವನ್ನ ಮೇರೆಯುತ್ತಿದ್ದಾರೆ.

ಇವರು ಪ್ರಾಣಿ-ಪಕ್ಷಿಗಳು ಹೆಚ್ಚಿಗೆ ಇರುವ ಸ್ಥಳಗಳಾದ ಚಿಟ್ಟಾ ಅರಣ್ಯ ಪ್ರದೇಶ, ದೇವ ಅರಣ್ಯ ಪ್ರದೇಶ, ಜಿಂಕೆಗಳು ಅತಿ ಹೆಚ್ಚಾಗಿ ಕಂಡು ಬರುವ ಬೆಳ್ಳೂರಾ ಅರಣ್ಯ ಹಾಗೂ ಬೀದರ್ ಜಿಲ್ಲೆಯ ಚಿಟಗುಪ್ಪಾ ಅರಣ್ಯ ಪ್ರದೇಶದಲ್ಲಿ ಹತ್ತಾರು ಸಿಮೆಂಟ್​ ತೊಟ್ಟಿಯನ್ನ ನಿರ್ಮಿಸಿ, ಅಲ್ಲಿ ನೀರು ತಂದು ಹಾಕುತ್ತಿದ್ದಾರೆ. ಇನ್ನು ಈ ಯುವಕರು ಹಾಕಿದ ನೀರನ್ನ ವನ್ಯಜೀವಿಗಳು ನೀರು ಕುಡಿಯುವ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಯುವಕರನ್ನ ಮತ್ತಷ್ಟು ಪ್ರೇರೆಪಣೆ ಮಾಡಿದೆ ಎಂದು ಇವರು ಹೇಳುತ್ತಿದ್ದಾರೆ. ಪ್ರಾಣಿ ಪಕ್ಷಗಳು ಕೂಡ ಬಿಸಿಲಿನ ಹೊಡೆತಕ್ಕೆ ನಲುಗಿ ಹೋಗಿದ್ದು, ನೀರು ಸಿಗದಂತಾ ವಾತಾವರಣ ನಿರ್ಮಾಣವಾಗಿದೆ. ಆದರೆ, ಕೆಲವು ಗ್ರಾಮದ ಯುವಕರು ಪಕ್ಷಿಗಳಿಗೆ ನೀರು-ಆಹಾರ ಕೊಟ್ಟು ಅವುಗಳಿಗೆ ಆಸರೆಯಾಗುವ ಕೆಲಸ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Wed, 13 March 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?