AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar Utsava: ದಶಕದ ಬಳಿಕ ಬೀದರ್ ಉತ್ಸವ; ಜಿಲ್ಲಾಡಳಿತದಿಂದ ಭರದ ಸಿದ್ಧತೆ

ಒಂದು ದಶಕದ ಬಳಿಕ ಬೀದರ್ ಉತ್ಸವ ನಡೆಸಲು ಜಿಲ್ಲಾಡಳಿತ ಭರದ ಸಿದ್ಧತೆ ನಡೆಸಿದೆ. ಜನವರಿ 7,8 ಮತ್ತು 9 ರಂದು ನಡೆಯುವ ಉತ್ಸವಕ್ಕೆ ಬೀದರ್ ನಗರ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಉತ್ಸವ ಆಚರಣೆಗೆ ನಿರ್ಧರಿಸಲಾಗಿದೆ.

Bidar Utsava: ದಶಕದ ಬಳಿಕ ಬೀದರ್ ಉತ್ಸವ; ಜಿಲ್ಲಾಡಳಿತದಿಂದ ಭರದ ಸಿದ್ಧತೆ
ಬೀದರ್​ ಉತ್ಸವಕ್ಕೆ ಭರದ ಸಿದ್ಧತೆ
TV9 Web
| Edited By: |

Updated on: Jan 04, 2023 | 7:51 AM

Share

ಬೀದರ್: ಜಿಲ್ಲೆಯ ಕೋಟೆ ಆವರಣದಲ್ಲಿ ಜನೆವರಿ 7,8, ಮತ್ತು 9 ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಒಂದು ದಶಕದ ಬಳಿಕ ಬೀದರ್ ಉತ್ಸವ(Bidar Utsava) ನಡೆಸಲು ಜಿಲ್ಲಾಡಳಿತ ಭರದ ಸಿದ್ಧತೆಯನ್ನ ನಡೆಸಿದೆ. ಬೀದರ್ ನಗರದಲ್ಲಿ ಹದೆಗೆಟ್ಟಿದ್ದ ಎಲ್ಲಾ ರಸ್ತೆಯನ್ನ ಇದೀಗ ರೀಪೇರಿ ಮಾಡಲಾಗುತ್ತಿದೆ. ನಗರದ ರಸ್ತೆ ಬದಿಯಲ್ಲಿರುವ ಗೋಡೆಗಳ ಮೇಲೆ ವರ್ಲಿ ಚಿತ್ರಕಲೆಗಳನ್ನ ಜೊತೆಗೆ ಶಾಲೆಗಳ ಗೋಡೆಗಳ ಮೇಲೆ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗುತ್ತಿದ್ದು ಇದರ ಮೂಲಕ ಜಿಲ್ಲೆಯ ಮಕ್ಕಳಿಗೆ ಇಲ್ಲಿನ ಇತಿಹಾಸದ ಬಗ್ಗೆ ತಿಳಿಸುವ ಪ್ರಯತ್ನವನ್ನ ಇಲ್ಲಿ ಮಾಡಲಾಗುತ್ತಿದೆ.

ಉತ್ಸವದಲ್ಲಿ ಯಾವ ಯಾವ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ

ಮೂರು ದಿನಗಳ ಕಾಲ ನಡೆಯುವ ಬೀದರ್ ಉತ್ಸವದಲ್ಲಿ ಸಂಜಿತ್ ಹೆಗಡೆ, ಮಂಗಲಿ, ಅನುರಾಧ ಭಟ್, ವೀರ್ ಸಮರ್ಥ ತಂಡ, ವಿಜಯ ಪ್ರಕಾಶ ತಂಡ, ಹೀಗೆ ಕನ್ನಡ ಹಾಗೂ ಹಿಂದಿಯ ವಿವಿಧ ಕಲಾವಿದರು ಭಾಗವಹಿಸಿ ಜನರನ್ನ ರಂಜಿಸಲಿದ್ದಾರೆ. ಇದರ ಜೊತೆಗೆ ಮೂರು ದಿನಗಳ ಕಾಲ ವಿವಿಧ ಸ್ಫರ್ಧೆಗಳು ಕೂಡ ನಡೆಯಲಿದ್ದು ಪ್ರಮುಖವಾಗಿ ಮ್ಯಾರಾಥಾನ್ ಉತ್ಸವ, ಕ್ರೀಡಾ ಉತ್ಸವ, ಕುಸ್ತಿ, ಚಿತ್ರ ಕಲಾ ಉತ್ಸವ, ಗಾಳಿ ಪಟ ಉತ್ಸವ, ಏರ್ ಶೋ, ಪಶು ಮೇಳ, ರೈತ ಉತ್ಸವ, ಸಿಡಿ ಮದ್ದು ಉತ್ಸವ, ಉದ್ಯೋಗ ಮೇಳ, ಮಕ್ಕಳ ಆಟದ ಉತ್ಸವ. ಜಲೋತ್ಸವ, ವನ್ಯ ಜೀವಿ ಉತ್ಸವ, ಗಡಿನಾಡು ಕನ್ನಡಿಗರ ಉತ್ಸವಗಳು ನಡೆಯಲಿದ್ದು ಒಂದು ದಶಕದ ಬಳಿಕ ನಡೆಯುತ್ತಿರುವ ಬೀದರ್ ಉತ್ಸವವನ್ನ ಅಚ್ಚು ಕಟ್ಟಾಗಿ ಮಾಡಲು ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಯನ್ನ ಮಾಡಿಕೊಂಡಿದೆ.

ಬೀದರ್ ಉತ್ಸವದಿಂದ ಜಿಲ್ಲೆಗೆ ಲಾಭ

ಬೀದರ್ ಉತ್ಸವ ನಡೆಸುವುದರಿಂದ ಹತ್ತು ಹಲವಾರು ಪ್ರಯೋಜನೆಗಳು ಜಿಲ್ಲೆಗೆ ಆಗಲಿವೆ ಎಂದು ಇಲ್ಲಿನ ಜನರು ಹೇಳುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಪ್ರವಾಸೋಧ್ಯಮಕ್ಕೆ ವಿಪುಲು ಅವಕಾಶಗಳಿದ್ದು ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿಯೂ ಕೋಟೆಗಳು, ವಾಡೆಗಳು, ಚಾಲುಕ್ಯರ ಕಾಲದ ದೇವಾಲಯಗಳಿವೆ. ಇನ್ನು ಉತ್ಸವ ಆಚರಣೆ ಮಾಡುವುದರಿಂದ ರಾಜ್ಯ ಹಾಗೂ ದೇಶದ ವಿವಿಧ ಭಾಗದಿಂದ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿನ ಪ್ರವಾಸಿ ಸ್ಥಳಗಳನ್ನ ನೋಡಿ ಇಲ್ಲಿನ ಮಹತ್ವದ ಬಗ್ಗೆ ಮತ್ತಷ್ಟು ಪ್ರವಾಸಿಗರಿಗೆ ಮಾಹಿತಿ ಕೊಡುತ್ತಾರೆ. ಹೀಗಾಗಿ ಉತ್ಸವ ನಡೆಯುವುದರಿಂದ ಜಿಲ್ಲೆಯ ಪ್ರವಾಸೋಧ್ಯಮ ದೃಷ್ಠಿಯಿಂದ ಒಳ್ಳೆಯದು ಎನ್ನುತ್ತಾರೆ ಸ್ಥಳೀಯರು.

ಮೂರು ದಿನಗಳ ಕಾಲ ವಿವಿಧ ಕ್ರೀಡೆಗಳು ನಡೆಯುತ್ತವೆ ಹೀಗಾಗಿ ನಮ್ಮ ದೇಶಿಯ ಸಂಸ್ಕೃತಿಯನ್ನ, ನಮ್ಮ ದೇಶಿಯ ಕ್ರೀಡೆ, ಕಲೆಗಳನ್ನ ಉಳಿಸಿ ಬೆಳೆಸುವುದು ಕೂಡಾ ಇದರಿಂದ ಸಾಧ್ಯವಾಗುತ್ತದೆ. ಹೀಗಾಗಿ ಎಲ್ಲಾ ವಿಚಾರವನ್ನ ಮುಂದಿಟ್ಟುಕೊಂಡು ಬೀದರ್ ಉತ್ಸವವನ್ನ ಆಚರಣೆ ಮಾಡಲು, ಜಿಲ್ಲಾಡಳಿತ, ರಾಜಕಾರಣಿಗಳು, ಸಂಘ-ಸಂಸ್ಥೆಗಳು ಎಲ್ಲರೂ ಒಂದಾಗಿ ಬೀದರ್ ಉತ್ಸವ ಮಾಡಲು ನಿರ್ಧರಿಸಿದ್ದು ಒಳ್ಳೆಯ ವಿಚಾರವಾಗಿದೆ ಎಂದು ಜಿಲ್ಲೆಯ ಜನರು ಹೇಳುತ್ತಿದ್ದಾರೆ.

ಇದನ್ನೂ ಓದಿ:Hampi Utsav 2023: ಜನವರಿ 27ರಿಂದ 3 ದಿನಗಳ ಕಾಲ ಹಂಪಿ ಉತ್ಸವ: ಜಿಲ್ಲಾಡಳಿತ ತೀರ್ಮಾನ

ಪ್ರವಾಸೋಧ್ಯಮಕ್ಕೆ ಹೇಳಿ ಮಾಡಿಸಿದ ಸ್ಥಳ

ಇನ್ನು ಜಿಲ್ಲೆಯು ಪ್ರವಾಸೋದ್ಯಮಕ್ಕೆ, ಪ್ರವಾಸಿಗರನ್ನ ಸೆಳೆಯಲು ಹೇಳಿ ಮಾಡಿಸಿದ ಸ್ಥಳವಾಗಿದೆ. ಬೀದರ್ ಕೋಟೆ, ಮಹಮಹ್ಮದ್ ಗವಾನ್ ಪುರಾತನ ವಿಶ್ವವಿದ್ಯಾಲಯ, ಚೌಬಾದ್ ಹಾಗೂ ಅಷ್ಟೂರಿನಲ್ಲಿರುವ ಬಹುಮನಿ ಸುಲ್ತಾನರ ಸ್ಮಾರಕ, ನರಸಿಂಹ ಝರಣಾ, ಗುರುನಾನಕ ಝೀರಾ, ಬಸವಕಲ್ಯಾಕ ಕೋಟೆ, ಜಲಸಂಗ್ವಿ ಹಾಗೂ ನಾರಾಯಣಪುರದ ಐತಿಹಾಸಿಕ ಶಿವನ ದೇವಾಲಯಗಳಿವೆ. ಆದರೆ ಇಲ್ಲಿನ ಈ ಸ್ಥಳಗಳನ್ನ ನೋಡಲು ಬರುವ ಪ್ರವಾಸಿಗರ ಸಂಖ್ಯೆ ವಿರಳವಾಗಿದೆ ಅದಕ್ಕೆ ಕಾರಣವೆಂದರೆ ಪ್ರಚಾರದ ಕೊರತೆ ಇದೆ ಹೀಗಾಗಿ ಬಿದರ್ ಉತ್ಸವ ಮಾಡುವುದರ ಮೂಲಕ ಪ್ರವಾಸಿಗರನ್ನ ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಬಹುದೆಂಬ ನಂಬಿಕೆ ಜಿಲ್ಲಾಡಳಿತದ್ದು.

ವರದಿ: ಸುರೇಶ್ ನಾಯಕ್ ಟಿವಿ9 ಬೀದರ್

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್