AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ಪಶುವೈದ್ಯಕೀಯ ವಿವಿ ಭ್ರಷ್ಟಾಚಾರ ಪ್ರಕರಣ: ಕರ್ನಾಟಕದ 69 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

Lokayukta Raid: ಬುಧವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದರ್ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಸಂಬಂಧ ಕರ್ನಾಟಕದ 69 ಕಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯ ಕುರಿತ ಮಾಹಿತಿ ಇಲ್ಲಿದೆ.

ಬೀದರ್ ಪಶುವೈದ್ಯಕೀಯ ವಿವಿ ಭ್ರಷ್ಟಾಚಾರ ಪ್ರಕರಣ: ಕರ್ನಾಟಕದ 69 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
ಸುರೇಶ ನಾಯಕ
| Updated By: Ganapathi Sharma|

Updated on:Sep 10, 2025 | 9:47 AM

Share

ಬೀದರ್, ಸೆಪ್ಟೆಂಬರ್ 10: ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ಕರ್ನಾಟಕದ 69 ಕಡೆಗಳಲ್ಲಿ ದಾಳಿ (Lokayukta Raid) ನಡೆಸಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ (Bidar) ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದರು.

2021ರಲ್ಲಿ ವಿವಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬಿಕರ್, ಐಜಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.

ಎಲ್ಲೆಲ್ಲಿ ಲೋಕಾಯುಕ್ತ ದಾಳಿ?

ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು ಜಿಲ್ಲೆಯ 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದ್ಯಂತ 69 ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. 2021 ಅಕ್ಟೋಬರ್ 4ರಂದು 35 ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದರು. ಈ ಸಂಬಂಧ ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ, 22 ಕೋಟಿ ಹಗರಣ ನಡೆದಿರುವುದು ಪತ್ತೆಯಾಗಿತ್ತು.

ಚಿಕ್ಕಮಗಳೂರಿನಲ್ಲಿಯೂ ಲೋಕಾಯುಕ್ತ ದಾಳಿ

ವಿಶ್ವವಿದ್ಯಾಲಯದ ಕಂಟ್ರೋಲರ್ ಸುರೇಶ್ ಸಹೋದರ ಮಲ್ಲಿಕಾರ್ಜುನ್‌ ಅವರ ಚಿಕ್ಕಮಗಳೂರಿನಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣನಗರದಲ್ಲಿರುವ ಮಲ್ಲಿಕಾರ್ಜುನ್ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್​ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸುರೇಶ್ 2017 ರಲ್ಲಿ ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 am, Wed, 10 September 25