AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ

ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕಿನ ಕೋಣಮೆಳಕುಂದಾ ಗ್ರಾಮದಲ್ಲಿ ಓರ್ವ ಮಹಿಳೆ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಸೂತಿ ಕಲೆಯನ್ನು ಕಲಿತು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮೀಣ ಮಹಿಳೆಯರಿಗೆ ಕಲೆಯನ್ನು ಕಲಿಸುತ್ತಿದ್ದಾರೆ. ಇವರ ತಯಾರಿಸುವ ವಿವಿಧ ಅಲಂಕಾರಿಕ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ.

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ
ಸುಕಲಿ
ಸುರೇಶ ನಾಯಕ
| Edited By: |

Updated on:Jun 02, 2025 | 8:18 AM

Share

ಬೀದರ್, ಜೂನ್​ 02: ಅಂದು ದೇಶದಲ್ಲಿ ಕೋವಿಡ್​ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತು ಊಟಕ್ಕೂ ಪರದಾಟ ನಡೆಸಿದ್ದರು. ಆದರೆ ಅದೇ ಸಮಯವನ್ನು ಬಳಸಿಕೊಂಡ ಮಹಿಳೆಯೊಬ್ಬರು (woman) ಕೈ ಕಸೂತಿ (Hand Embroidery) ಕಲಿತುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಂಡರು. ತಾವು ಕಲಿತು ಸುಮ್ಮನಾಗದೇ ಇಂದು ಗ್ರಾಮೀಣ ಮಹಿಳೆಯರಿಗೆ ಕಲಿಸಿಕೊಡುತ್ತಿದ್ದಾರೆ. ಆ ಮೂಲಕ ಮಾದರಿ ಮಹಿಳೆಯಾಗಿದ್ದಾರೆ.

ಕೊಲ್ಕತ್ತಾದ ಸುಕಲಿ ಎಂಬುವವರು ಹೊಟ್ಟೆ ಪಾಡಿಗಾಗಿ ಕರ್ನಾಟದ ಬೀದರ್​ ಜಿಲ್ಲೆಗೆ 11 ವರ್ಷದ ಹಿಂದೆ ಆಗಮಿಸಿದ್ದು, ಭಾಲ್ಕಿ ತಾಲೂಕಿನ ಕೋಣಮೆಳಕುಂದಾ ಗ್ರಾದಮದಲ್ಲಿ ವಾಸವಾಗಿದ್ದಾರೆ. ತಮ್ಮ ಕೈ ಕಸೂತಿ ಕೆಲಸದಿಂದಲ್ಲೇ ಸದ್ಯ ಎಲ್ಲರ ಗಮನ‌ ಸೆಳೆಯುತ್ತಿದ್ದಾರೆ. ಇವರು ತಯಾರಿಸುವ ಮನೆ ಅಲಂಕಾರಿಕಾ ವಸ್ತುಗಳಿಗಿದೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ.

ಇದನ್ನೂ ಓದಿ: ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ರೆಸಾರ್ಟ್ ನಿರ್ಮಾಣಕ್ಕೆ ಸ್ಥಳೀಯ ಸಂಘಟನೆಗಳ ವಿರೋಧ

ಇದನ್ನೂ ಓದಿ
Image
ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ಸ್ಥಳೀಯರ ವಿರೋಧ
Image
ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಜೂನ್ 8ರವರೆಗೂ ಸಾಧಾರಣ ಮಳೆ
Image
ಎಲ್ಲ ವಯಸ್ಕರಿಗೂ ಇಷ್ಟವಾಗುವ ಕೇಕ್​ ಉತ್ಪನ್ನಗಳನ್ನು ಬಿಡುಗಡೆ ಮಾಡಿದ KMF
Image
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು

ತಾಯಿ ಹಾಗೂ ಅಜ್ಜಿಯಿಂದ ಅಲ್ಪಸ್ವಲ್ಪ ಕಸೂತಿ ಕೆಲಸವನ್ನ ಕಲೆತಿದ್ದ ಸುಕಲಿ ಅವರು, ಕೋವಿಡ್​ನಿಂದ ಲಾಕ್​ಡೌನ್​​ ಆದ ಸಮಯದಲ್ಲಿ ಸಂಪೂರ್ಣವಾಗಿ ಕಲಿತುಕೊಳ್ಳಲು ಅವಕಾಶ ಸಿಕ್ಕಿತು. ವಿವಿಧ ಬಗೆಯ ಅಲಂಕಾರಿಕ ವಸ್ತುಗಳನ್ನ ತಯಾರಿಸಿ ಪರಿಚಯದವರಿಗೆ ಮಾರಾಟ ಮಾಡುತ್ತಿದ್ದಾರೆ.

40 ಮಹಿಳೆಯರಿಂದ ಕಸೂತಿ ಕಲೆ ಕಲಿಕೆ

ಇನ್ನೂ ಇವರು ತಯಾರಿಸುವ ವಸ್ತುಗಳ ಅಂದಚಂದಕ್ಕೆ ಮಾರುಹೋಗುತ್ತಿರುವ ಮಹಿಳೆಯರು ತಾವು ಈ ಕಲೆಯನ್ನ ಕಲಿಯಬೇಕು ಅಂತಾ ಸುಕಲಿ ಬಳಿ ಕೇಳಿದಾಗ ಅವರು ಖುಷಿಯಿಂದಲೇ ಗ್ರಾಮದ ಸುಮಾರು 40 ಮಹಿಳೆಯರಿಗೆ ಇವರು ಕಲಿತಿರುವ ಕಸೂತಿ ಕಲೆಯನ್ನ ಹೇಳಿಕೊಡುತ್ತಿದ್ದು, ಆ ಮಹಿಳೆಯರು ಕೂಡ ಮನಸ್ಸುಕೊಟ್ಟು ಕಸೂತಿ ಕಲೆಯನ್ನ ಕಲಿಯುತ್ತಿದ್ದೇವೆಂದು ಗ್ರಾಮದ ಯುವತಿಯರು ಹೇಳುತ್ತಾರೆ. ಇನ್ನೂ ಇವರ ಕಲೆಯನ್ನ ಗ್ರಾಮದ ಜನರು ಕೂಡ ಕೊಂಡಾಡಿದ್ದಾರೆ.

West Bengal Woman

ಕಳೆದ 11 ವರ್ಷದಿಂದ ಕೋಣಮೇಳಕುಂದಾ ಗ್ರಾಮದಲ್ಲಿ ನೆಲೆಸಿರುವ ಸುಕಲಿ ಅವರು ತಮ್ಮಗೆ ಗೊತ್ತಿದ್ದ ಕಸೂತಿ ಕಲೆಯನ್ನ ಮರೆತೆ ಬಿಟ್ಟಿದ್ದರು. ತಾವು ಕಲಿತಿದ್ದ ಕಲೆಯನ್ನ ಯಾವಾಗ ಲಾಕ್ ಡೌನ್ ಆಯಿತೋ ಕೆಲಸವಿಲ್ಲದೆ ಮನೆಯಲ್ಲಿ ಕುಳಿತುಕೊಳ್ಳುವ ಹಾಗಾಯಿತೋ, ಅವತ್ತು ಅವರು ತಮಗೆ ಅಲ್ಪಸ್ವಲ್ಪ ಗೊತ್ತಿದ್ದ ಕಸೂತಿ ಕಲೆಯನ್ನ ಪೂರ್ಣ ಪ್ರಮಾಣದಲ್ಲಿ ಕಲಿತು ಅದಕ್ಕೆ ಬೇಕಾದ ಕಚ್ಚಾ ವಸ್ತುಗಳನ್ನ ಕೋಲ್ಕತ್ತಾದಿಂದ ಅವರ ಸಂಬಂಧಿಗಳ ಕಡೆಯಿಂದ ತರಿಸಿಕೊಂಡು ಈಗ ತಮ್ಮ ಮನೆಯಲ್ಲಿಯೇ ವಿವಿಧ ವಸ್ತುಗಳನ್ನ ತಯಾರಿಸುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ

ಇನ್ನೂ ನಾವು ಬಿಸಾಕಿದ್ದ ವಸ್ತುಗಳನ್ನೇ ಬಳಿಸಿಕೊಂಡು ಗೊಂಬೆಗಳು, ದೇವಸ್ತಾನ, ಬ್ಯಾಗ್, ಗಡಿಯಾರ, ಹೀಗೆ 50 ಕ್ಕೂ ಹೆಚ್ಚು ವಸ್ತುಗಳನ್ನ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಇವರು ತಯಾರಿಸುವ ವಸ್ತುವಿಗೆ ಈಗ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಶುರುವಾಗಿದ್ದು, ಆದರೆ ಇವರು ಮಾತ್ರ ತಮಗೆ ಬೇಕಾದವರಿಗೆ ಮಾತ್ರ ತಾವು ಕೇಳಿದ ಡಿಸೈನ್​ನಲ್ಲಿ ಅಲಂಕಾರಿಕ ವಸ್ತುಗಳನ್ನ ತಯಾರಿಸಿ ಕೊಡುತ್ತಿದ್ದಾರೆ.

ಸ್ವಂತ ಉದ್ಯೋಗ ಮಾಡುವ ಯೋಚನೆ ಇದೆ: ಸುಕಲಿ 

ಈ ಬಗ್ಗೆ ಟಿವಿ9 ಜೊತೆಗೆ ಮಾನಾಡಿರುವ ಸುಕಲಿ, ಗ್ರಾಮದ ಮಹಿಳೆಯರು ತಮ್ಮ ಇಚ್ಚೆಯಿಂದ ಕೈ ಕಸೂತಿ ಕಲೆಯನ್ನ ಕಲಿಯುತ್ತಿದ್ದಾರೆ.  ಗ್ರಾಮದ ಎಲ್ಲಾ ಮಹಿಳೆಯರು, ಯುವತಿಯರು ಪೂರ್ಣ ಪ್ರಮಾಣದಲ್ಲಿ ಕಲಿತರೆ ಎಲ್ಲರೂ ಸೇರಿಕೊಂಡು ಒಂದು ಅಂಗಡಿಯನ್ನ ತೆರೆದು ಸ್ವಂತವಾಗಿ ಉದ್ಯೋಗ ಮಾಡುವ ಯೋಚನೆ ಇದೆ ಎನ್ನುತ್ತಾರೆ.

ಇದನ್ನೂ ಓದಿ: Karnataka Weather: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಜೂನ್ 8ರವರೆಗೂ ಸಾಧಾರಣ ಮಳೆ

ದೇಶದಲ್ಲಿ ಕೊರೊನಾ ಮಹಾಮಾರಿಯಿಂದ ಅದೇಷ್ಟೋ ಜನ ಪ್ರಾಣ ಕಳೆದುಕೊಂಡರು, ಅಷ್ಟೇ ಅಲ್ಲದೆ ಲಾಕ್ ಡೌನ್ ಹೇರಿದ್ದರಿಂದ ಅದೇಷ್ಟೊ ಯುವಕರು-ಯುವತಿಯರು ಉದ್ಯೋಗ ಕಳೆದುಕೊಂಡು ಕಂಗಾಲಾಗಿದ್ದರು. ಆದರೆ ಸುಕಲಿ ಅವರು ಲಾಕ್ ಡೌನ್​ನಲ್ಲಿ ಸಮಯ ವ್ಯರ್ಥ ಮಾಡದೆ ಕಸೂತಿ ಕಲೆಯನ್ನ ಕಲಿತು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಲ್ಲದೆ, ಇತರೆ ಯುವತಿಯರಿಗೆ ಕಲಿಸುತ್ತಿದ್ದಾರೆ. ಗ್ರಾಮಸ್ಥರು ಸುಕಲಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:16 am, Mon, 2 June 25

Follow Us
ಸುರೇಶ ನಾಯಕ
ಸುರೇಶ ನಾಯಕ

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು