ಮದುವೆಯಾಗವಂತೆ ದುಂಬಾಲು ಬಿದ್ದ ಮಹಿಳೆ: ಬಿದರ್​ನ ಐಬಿಯಲ್ಲಿ ಯುವಕನ ಶವ ಪತ್ತೆ

ಬೀದರ್‌ನ ಹಬ್ಸಿಕೋಟ್ ಅತಿಥಿಗೃಹದಲ್ಲಿ 30 ವರ್ಷದ ಪರಮೇಶ್ವರ ಎಂಬ ಯುವಕನ ನೇಣುಬಿಗಿದ ಶವ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪರಮೇಶ್ವರ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಪಾರ ಮಾಡುತ್ತಿದ್ದರು.

ಮದುವೆಯಾಗವಂತೆ ದುಂಬಾಲು ಬಿದ್ದ ಮಹಿಳೆ: ಬಿದರ್​ನ ಐಬಿಯಲ್ಲಿ ಯುವಕನ ಶವ ಪತ್ತೆ
ಮೃತ ಪರಮೇಶ್ವರ
Edited By: ವಿವೇಕ ಬಿರಾದಾರ

Updated on: Aug 09, 2025 | 2:49 PM

ಬೀದರ್, ಆಗಸ್ಟ್​ 09: ಬೀದರ್ (Bidar) ನಗರದ ಹಬ್ಸಿಕೋಟ್ ಗೆಸ್ಟ್ ಹೌಸ್​​ನಲ್ಲಿ (IB) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಯುವಕ ಪರಮೇಶ್ವರ (30) ಮೃತಪಟ್ಟಿದ್ದಾನೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು ಯುವಕನ‌ ಮನೆಯವರು ಆರೋಪ ಮಾಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಬೀದರ್​ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಮೇಶ್ವರ ಕಳೆದ ಹಲವು ವರ್ಷದಿಂದ ಬೆಂಗಳೂರಿನಲ್ಲಿ ಖಡಕ್​ ರೊಟ್ಟಿ, ಚೆಟ್ನಿ ಮಾರುವ ವ್ಯಾಪಾರ ಮಾಡಿಕೊಂಡಿದ್ದನು. ಬೆಂಗಳೂರಿನಲ್ಲಿ ಓರ್ವ ‌ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಮಹಿಳೆಗೆ ಈಗಾಗಲೆ ಒಂದು ಮಗು ಇದೆ. ಅಕ್ರಮ ಸಂಬಂಧದಿಂದ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ.

ಗರ್ಭಿಣಿಯಾಗಿರುವ ವಿಚಾರ ತಿಳಿದು ಮದುವೆ ಮಾಡಿಕೊಳ್ಳುವಂತೆ ಪರಮೇಶ್ವರಗೆ ಮಹಿಳೆ ದುಂಬಾಲು ಬಿದ್ದಿದ್ದಳು. ಮಹಿಳೆಯ ಕಾಟ ತಾಳಲಾರದೆ ಪರಮೇಶ್ವರ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಆಗ, ಮಹಿಳೆ ಬೆಂಗಳೂರಿನಿಂದ ಮಹಿಳಾ ಸಂಘಟನೆಯ ಓರ್ವ ಮಹಿಳೆಯನ್ನು ಕರೆದುಕೊಂಡು ಪರಮೇಶ್ವರನ ಮನೆಗೆ ಹೋಗಿದ್ದಾಳೆ. ಶುಕ್ರವಾರ ಮಹಿಳೆ ಪರಮೇಶ್ವರನ ಮನೆಗೆ ಹೋಗಿ ಗಲಾಟೆ ಮಾಡಿ ಮದುವೆ ಮಾಡಿಕೊಳ್ಳುವಂತೆ ಹಠ ಹಿಡಿದಿದ್ದಳು.

ಇದನ್ನೂ ಓದಿ: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ: ಆಕ್ರಮ ಸಂಬಂಧಕ್ಕೆ ಒಪ್ಪದಕ್ಕೆ ಕೃತ್ಯ ಶಂಕೆ

ನಂತರ, ಪರಮೇಶ್ವರ ಮತ್ತು ಇತನ ಸ್ನೇಹಿತರು ಹಾಗೂ ಮಹಿಳೆ ಸೇರಿದಂತೆ ನಾಲ್ವರು ಐಬಿಯಲ್ಲಿದ್ದರು. ಆದರೆ, ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪರಮೇಶ್ವರ ಶವ ಪತ್ತೆಯಾಗಿದೆ. ಪರಮೇಶ್ವರ ಮನೆಯವರು ಬೀದರ್​ನ ಮಾರ್ಕೆಟ್ ಪೊಲೀಸ್ ‌ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us