AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾಗಿದೆ. ಇಲ್ಲಿ ಹಿಂದೂಗಳು ಅಲ್ಲಮಪ್ರಭು ಎಂದು, ಮುಸ್ಲಿಮರು ಅಹ್ಮದ್ ಶಾ ವಲಿ ಎಂದು ಪೂಜಿಸುವ ಒಂದೇ ದೇವರಿಗೆ ಭಕ್ತಿ ಸಲ್ಲಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ, ಭಾವೈಕ್ಯತೆಯನ್ನು ಸಾರುತ್ತಾರೆ.

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ
ಅಷ್ಟೂರು ಜಾತ್ರೆImage Credit source: tv9 kannada
ಸುರೇಶ ನಾಯಕ
| Edited By: |

Updated on: Mar 15, 2026 | 7:29 PM

Share

ಬೀದರ್​​, ಮಾರ್ಚ್​​ 15: ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾದ ಬೀದರ್​​​ ಅಷ್ಟೂರು ಜಾತ್ರೆ (Astur Jatre) ಅದ್ಧೂರಿಯಾಗಿ ನಡೆಯುತ್ತಿದೆ. ಹಿಂದೂ-ಮುಸ್ಲಿಂ ಭೇದ ಭಾವ ಮರೆತು ಶತಮಾನಗಳಿಂದ ವಿಜೃಂಭಣೆಯಿಂದ ಹಿಂದೂಗಳು ಅಲ್ಲಮಪ್ರಭು ಎಂದು ಮುಸ್ಲಿಂರು ಅಹೆಮದ್ ಶಾ ವಲಿ ಎಂದು ಪೂಜಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ಜನಸಾಗರವೆ ಹರಿದು ಬರುತ್ತದೆ.

ದೇವನೂಬ್ಬ ನಾಮ ಹಲವು ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕಗಳಾಗಿವೆ. ಈ ದರ್ಗಾದಲ್ಲಿ ಮುಸ್ಲಿಂಮರಿಗೆ ಅಹ್ಮದ ಶಾ ಅಲಿ ವಲಿ ಆರಾಧ್ಯ ದೈವವಾದರೆ, ಹಿಂದೂಗಳಿಗೆ ಅಲ್ಲಮಪ್ರಭುವಾಗಿ ಪೂಜೆ ಪಡೆಯುವುದು ವಿಶೇಷ. ಹಿಂದೂ-ಮುಸ್ಲಿಂ ಭಾವೈಕ್ಯದಲ್ಲಿ ನಂಬಿಕೆಯಿಟ್ಟಿದ್ದ ಅಹ್ಮದ್ ಶಾ ಅಲಿ ಬಹಮನಿ ಅವರ ಜನ್ಮದಿನದಂದು ಗೋರಿಯ ಗುಂಬಜ್‌ಗೆ ತೆರಳುವ ಸಾವಿರಾರು ಜನರು ಭಕ್ತಿ ಸಮರ್ಪಣೆ ಮಾಡುವುದು ಹಲವು ಶತಮಾನಗಳಿಂದ ನಡೆದು ಬಂದಿದೆ.

ಇದನ್ನೂ ಓದಿ: ಬೀದರ್​​ನ​ ಬಿದ್ರಿ ಕಲೆಗೂ ತಟ್ಟಿದ ಯುದ್ಧದ ಬಿಸಿ: ವಿದೇಶಿ ವಹಿವಾಟು ಕುಸಿತ; ಸಂಕಷ್ಟದಲ್ಲಿ ಕಲಾವಿದರು

ಅಷ್ಟೂರಿನ ಅಲ್ಲಮಪ್ರಭು ದೇವರು ಜಗತ್ತಿಗೆ ಸಹೋದರತೆ, ಸಮಾನತೆಯೊಂದಿಗೆ ಸತ್ಯ ಶುದ್ಧ ಕಾಯಕ ಮತ್ತು ದಾಸೋಹದಂತಹ ಮಹಾನ್ ತತ್ವಗಳನ್ನು ಸಾರಿದ ಶರಣರು. ಅವರಸ್ಮರಣೆಯಲ್ಲೇ ಪ್ರತಿವರ್ಷ ಜಾತ್ರೆ ನಡೆಯುತ್ತದೆ. ರಾಜ್ಯ, ಆಂದ್ರಪ್ರದೇಶ ಮತ್ತು ಮಹಾರಾಷ್ಟ್ರಗಳಿಂದ ಸಾವಿರಾರು ಯಾತ್ರಾರ್ಥಿಗಳು, ಪ್ರವಾಸಿಗರು ನಿತ್ಯ ಇಲ್ಲಿಗೆ ಆಗಮಿಸಿ ದರ್ಗಾಕ್ಕೆ ಹೂವಿನ ಚಾದರ್ ಸಮರ್ಪಿಸುತ್ತಾರೆ. ಅಗರಬತ್ತಿ ಹಚ್ಚಿ ಪೂಜಿಸಿ, ಪ್ರಾರ್ಥಿಸಿ ಅಹ್ಮದ್ ಶಾಹ್‌ಗೆ ನಮಿಸುತ್ತಾರೆ. ಇಲ್ಲಿ ಹಿಂದೂಗಳು ಅಲ್ಲಮಪ್ರಭು ಗುಡಿ ಎಂದೂ, ಮುಸ್ಲಿಮರು ವಲಿ ದರ್ಗಾ ಎಂದೂ ಪರಿಗಣಿಸುವ ಅಹ್ಮದ್ ಶಾಹ್‌ನ ಸಮಾಧಿ ಅಪರೂಪದ ಭಾವೈಕ್ಯತೆಯ ತಾಣಗಳಲ್ಲೊಂದು ಎಂದು ಭಕ್ತರಾದ ಬಸವರಾಜ್​​ ಅವರ ಮಾತು.

ಐದು ದಿನಗಳ ಅದ್ಧೂರಿ ಜಾತ್ರೆ

ಅಷ್ಟಕ್ಕೂ ಈ ದರ್ಗಾದ ಜಾತ್ರೆಗೆ ಚಾಲನೆ ನೀಡುವವರು ಪಕ್ಕದ ಗುಲ್ಬರ್ಗ ಜಿಲ್ಲೆಯ ಮಾಡಿಹಾಳ್ ಮತ್ತು ಆಳಂದನ ಅಲ್ಲಮಪ್ರಭು ಮಹಾರಾಜರೆಂದೇ ಗುರುತಿಸಿಕೊಂಡಿರುವ ಗುರುಗಳು. ಪ್ರತಿ ವರ್ಷ ಹೋಳಿ ಹಬ್ಬದ ನಂತರ ನಡೆಯುವ ಜಾತ್ರೆಯ ಈ ಸಂದರ್ಭದಲ್ಲಿ ಕಾಲ್ನಡಿಗೆಯಲ್ಲಿಯೇ ಆಗಮಿಸುವ ಗುರುಗಳು ದರ್ಗಾ ಮುಂದೆ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡುತ್ತಾರೆ. ಐದು ದಿನಗಳವರೆಗೆ ನಡೆಯುವ ಈ ಜಾತ್ರೆಯಲ್ಲಿ ಪಟಾಕಿ ಸಿಡಿಸುವುದು ಮತ್ತು ಅಂತಾರಾಜ್ಯ ಕುಸ್ತಿ ಸ್ಪರ್ಧೆ ಏರ್ಪಡಿಸುವುದು ತಲೆತಲಾಂತರಗಳಿಂದ ನಡೆದು ಬಂದ ಸಂಸ್ಕೃತಿ.

ದರ್ಗಾ ಮುಂದೆ ಭಕ್ತರು ಎಣ್ಣೆ ದೀಪ ಹಚ್ಚಿ ಭಕ್ತಿ ಸಮರ್ಪಿಸುತ್ತಾರೆ. ಬೀದರ್‌ನಿಂದ 3 ಕಿಮೀ ದೂರದ ಅಷ್ಟೂರು ಗ್ರಾಮ ಪ್ರವೇಶಿಸುವ ಮುನ್ನವೇ ಬಹಮನಿ ಅರಸರ ಗೋರಿಗಳ ಸಾಲು ನೋಡಲು ಸಿಗುತ್ತದೆ. ಇಲ್ಲಿ ಅಲ್ಲಾವುದ್ದಿನ್ ಗೋರಿ, ಸಿಡಿಲ ಹೊಡೆತಕ್ಕೆ ಸಿಲುಕಿ ಅರ್ಧ ಕುಸಿದಿರುವ ಹುಮಾಯೂನ್ ಸಮಾಧಿ, ಅದರ ಪಕ್ಕದಲ್ಲಿಯೇ ಇರುವ ಮಕ್ದುಮ್ ಏ ಜಹಾನ್, ನರ್ಗಿಸ್ ಬೇಗಂ, ನಿಜಾಮ್ ಶಾಹ, ಮಹಮೂದ ಶಾಹ ಬಹಮನಿ, ಮೊಹಮ್ಮದ ಶಾ ಬಹಮನಿ, ಅಹಮದ್ ಶಾ ಬಹಮನಿ, ಅಲ್ಲಾಮುದ್ದೀನ್ ಶಾಹ ಬಹಮನಿ, ವಲಿವುಲ್ಲಾ ಶಾಹ ಬಹಮನಿ, ಖಲೀಮಲ್ಲಾ ಶಾಹ ಬಹಮನಿ ಗೋರಿಗಳಿವೆ. ಅಹಮದ್ ಶಾಹ್‌ನ ಈ ಗೋರಿ ಮೇಲ್ಭಾಗದಲ್ಲಿ ಅಂದರೆ ಗುಂಬಜಿನ ಒಳಭಾಗದಲ್ಲಿ ಚಿನ್ನದ ಲೇಪನ ಹಾಗೂ ವೈವಿಧ್ಯಮಯ ಬಣ್ಣ ಬಳಸಿದ್ದು ಆಕರ್ಷಕವಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ.

ಇದನ್ನೂ ಓದಿ: ಕಾರ್ಖಾನೆಗಳಿಗೆ ಸಿಹಿ ಕೊಟ್ಟ ಅನ್ನದಾತರ ಬಾಯಿಗೆ ಕಹಿ: ಸಂಕಷ್ಟಕ್ಕೆ ಸಿಲುಕಿದ ಬೀದರ್ ಕಬ್ಬು ಬೆಳೆಗಾರರು

ಕೇಂದ್ರ ಸರ್ಕಾರದ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ವ್ಯಾಪ್ತಿಗೆ ಈ ಗುಂಬಜ್‌ಗಳು ಬರುತ್ತಿವೆ. ಪ್ರವಾಸಿ ತಾಣಗಳನ್ನಾಗಿಸುವುದಷ್ಟೇ ಅಲ್ಲದೆ ಪುರಾತನ ಸ್ಮಾರಕ ಸ್ಥಳಗಳನ್ನು ಸಂರಕ್ಷಿಸುವಲ್ಲಿ ವಿಶೇಷ ಆಸಕ್ತಿ ವಹಿಸಲಾಗುತ್ತಿದೆ. ಹೀಗಾಗಿ ಇಲ್ಲಿನ ಜಾತ್ರೆ ಹಿಂದೂ-ಮುಸ್ಲಿಮರು ಒಂದಾಗಿ ಆಚರಣೆ ಮಾಡುವುದರಿಂದ ಈ ಜಾತ್ರೆಗೆ ವಿಶೇಷವಾದ ಸ್ಥಾನ ಬಂದಿದೆ.

ಜಿಲ್ಲಾಡಳಿತ ನಿರ್ಲಕ್ಷ ಆರೋಪ

ಪ್ರತಿವರ್ಷ ಹೂಳಿಹುಣ್ನಿಮೆಯ ನಂತರ ನಡೆಯುವ ಈ ಜಾತ್ರೆ ಹಲವಾರು ವಿಶೇಷತೆಯನ್ನೊಳಗೊಂಡಿದೆ. ಇಲ್ಲಿನ ಹಿಂದೂ-ಮುಸ್ಲಿಂ ಭಾವೈಕತೆಯೆ ಜಾತ್ರೆಗೆ ನೂರಾರು ಹಿಂದೂ-ಮುಸ್ಲಿಂ ಎರಡು ಮೂರು ದಿನವಿದ್ದು ಜಾತ್ರೆ ಮಾಡಿ ಹೊಗುತ್ತಾರೆ. ಆದರೆ ಜಿಲ್ಲಾಡಳಿತ ಮಾತ್ರ ಈ ಜಾತ್ರೆಯನ್ನ ನಿರ್ಲಕ್ಷ ಮಾಡುತ್ತಿದ್ದು, ಜಾತ್ರೆಗೆ ಬರುವ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯವನ್ನ ಕಲ್ಪಿಸಿಲ್ಲ. ಹಿಂದೂ-ಮುಸ್ಲಿಂ ಭಾವಕೈತೆಯ ಈ ಜಾತ್ರೆಗೆ ಜಿಲ್ಲಾಡಳಿತದ ಸಹಕಾರ ಬೇಕಾಗಿದೆ ಎಂದು ಇಲ್ಲಿನ ಭಕ್ತರ ಆಸೆಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us