AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar News: ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಚಿವರ ದಂಡು: ಸಮಾವೇಶಕ್ಕೆ ಸಾವಿರಾರು ಜನ

ಸಚಿವ ಸ್ಥಾನದ ಆಕಾಂಕ್ಷಿಗಳಾದ ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಕೆಲ ಸಮಯ ಸಿಎಂ ಜೊತೆಗೆ ಮಾತನಾಡಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದು ಮಹತ್ವ ಪಡೆದಿದೆ.

Bidar News: ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಚಿವರ ದಂಡು: ಸಮಾವೇಶಕ್ಕೆ ಸಾವಿರಾರು ಜನ
ಸಂಗ್ರಹ ಚಿತ್ರ
TV9 Web
| Edited By: |

Updated on:Oct 18, 2022 | 1:17 PM

Share

ಬೀದರ್: ಜಿಲ್ಲೆಯ ಔರಾದ್ ಹಾಗೂ ಹುಮ್ನಾಬಾದ್ ‌ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಜನ‌‌ ಸಂಕಲ್ಪಯಾತ್ರೆಯ ಹೆಸರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಔರಾದ್ ಪಟ್ಟಣದ ಅಮರೇಶ್ವರ ಕಾಲೇಜು ಮೈದಾನದಲ್ಲಿ ಸಂಕಲ್ಪಯಾತ್ರೆಗಾಗಿ ಬೃಹತ್ ‌ವೇದಿಕೆ‌ ಸಜ್ಜುಗೊಳಿಸಲಾಗಿದೆ. ಹುಮ್ನಾಬಾದ್ ‌ಪಟ್ಟಣದ ಥೇರು ಮೈದಾನದಲ್ಲಿಯೂ ಬೃಹತ್ ‌ವೇದಿಕೆ ನಿರ್ಮಾಣ ಮಾಡಲಾಗಿದ್ದು, ಎರಡೂ ಜನ‌ ಸಂಕಲ್ಪಯಾತ್ರೆ ಸಮಾವೇಶಗಳಲ್ಲಿ ತಲಾ ಸುಮಾರು 50 ಸಾವಿರ ಜನ‌ರು ಸೇರುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಹಲವು ಸಚಿವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೀದರ್​ನ ವಾಯುನೆಲೆಗೆ ಬಂದ ಸಿಎಂ ಬೊಮ್ಮಾಯಿ, ಹೆಲಿಕಾಪ್ಟರ್ ಮೂಲಕ ಬಲ್ಲೂರು (ಜೆ) ಗ್ರಾಮಕ್ಕೆ ತೆರಳಿ ‘ಸಿಪೆಟ್’ ಕಾಲೇಜಿಗೆ (Central Institute of Petrochemicals Engineering & Technology – CIPET) ಕಾಲೇಜಿಗೆ ಭೂಮಿಪೂಜೆ ನೆರವೇರಿಸಿದರು. ‘ಸಿಪೆಟ್’ ಕಾಲೇಜು ₹ 90 ಕೋಟಿ ವೆಚ್ಚದಲ್ಲಿ 10 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ. ಭೂಮಿಪೂಜೆ ಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ಶಂಕರ ಪಾಟೀಲ್ ಮುನೇನಕೊಪ್ಪ, ಕೇಂದ್ರ ಸಚಿವ ಭಗವಂತ ಖೂಬಾ ಭಾಗವಹಿಸಿದ್ದರು. ಭೂಮಿಪೂಜೆ ನೆರವೇರಿಸಿದ ನಂತರ ಅವರು ಔರಾದ್​ನ ಅಮರೇಶ್ವರ ಕಾಲೇಜು ಮೈದಾನದಲ್ಲಿ ನಡೆಯಲಿರುವ ಜನ‌ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಔರಾದ್​ನಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್​ಗೆ ಸಿಎಂ ಹಾಗೂ ಯಡಿಯೂರಪ್ಪ ಪ್ರಯಾಣ ಬೆಳೆಸಲಿದ್ದಾರೆ. ಹುಮ್ನಾಬಾದ್​‌ನ ಥೇರು ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ‌ನಡೆಯುವ ಜನ‌ ಸಂಕಲ್ಪ ‌ಸಮಾವೇಶದಲ್ಲಿ‌ ಭಾಗವಹಿಸುವ ಇಬ್ಬರೂ ನಾಯಕರು ಸಂಜೆ 6ಕ್ಕೆ ಹೆಲಿಕಾಪ್ಟರ್ ಮೂಲಕ‌ ಕಲ್ಬುರ್ಗಿಗೆ ತೆರಳಲಿದ್ದಾರೆ. ಸಿಎಂ ಬೆಂಗಳೂರಿನಿಂದ ಬೀದರ್​ಗೆ ತೆರಳುವ ಮೊದಲು ಸಚಿವ ಸ್ಥಾನದ ಆಕಾಂಕ್ಷಿಗಳಾದ ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಕೆಲ ಸಮಯ ಮಾತನಾಡಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದು ಮಹತ್ವ ಪಡೆದಿದೆ.

Published On - 1:15 pm, Tue, 18 October 22

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ